ಊಟಿ ಆ್ಯಪಲ್ ಬೆಳೆದು ರೈತ ಮಾದರಿ

ದೇಶಿಹಳ್ಳಿ ವೆಂಕಟರಾಮ್‌ ಆ್ಯಪಲ್ ತೋಟದಲ್ಲಿ ಕ್ಷೇತ್ರೋತ್ಸವ • ತೋಟಗಾರಿಗೆ ಇಲಾಖೆ, ರೈತರು ಭೇಟಿ

Team Udayavani, Jul 27, 2019, 10:09 AM IST

kolar-tdy-2

ಬಂಗಾರಪೇಟೆ ತಾಲೂಕಿನ ದೇಶಿಹಳ್ಳಿ ವೆಂಕಟರಾಮ್‌ ಬೆಳೆದಿರುವ ಆ್ಯಪಲ್ ಬೆರ್‌ ಬೆಳೆಯ ಕ್ಷೇತ್ರೋತ್ಸವದಲ್ಲಿ ಹಿರಿಯ ತೋಟಗಾರಿಕೆ ನಿರ್ದೇಶಕಿ ಮಂಜುಳಾ, ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕಿ ಎಂ.ಗಾಯತ್ರಿ ಹಾಜರಿದ್ದರು.

ಬಂಗಾರಪೇಟೆ: ಹಾಲು, ರೇಷ್ಮೆ, ತರಕಾರಿ ಬೆಳೆಗೆ ಸೀಮಿತವಾಗಿರುವ ಜಿಲ್ಲೆಯ ರೈತರು ಹೊಸ ಬೆಳೆ ತೆಗೆಯುವ ಸಾಹಸ ಮಾಡಿಲ್ಲ. ಮಾಡಿದರೂ ಯಶಸ್ಸು ಕಾಣುವಲ್ಲಿ ವಿಫ‌ಲರಾಗಿದ್ದಾರೆ. ಹೀಗಾಗಿ ಮಾರುಕಟ್ಟೆಯಲ್ಲಿ ಬೆಲೆ ಸಿಗದಿದ್ದರೂ, ಪರ್ಯಾಯ ಬೆಳೆ ಬೆಳೆದಿಲ್ಲ. ಈ ಮಧ್ಯೆ ತಾಲೂಕಿನ ರೈತ ಊಟಿ ಆ್ಯಪಲ್ ಎಂದೇ ಕರೆಯುವ ‘ಆ್ಯಪಲ್ ಬೆರ್‌’ ಬೆಳೆದು ತೋಟಗಾರಿಕೆ ಅಧಿಕಾರಿಗಳು, ಪ್ರಗತಿಪರ ರೈತರ ಗಮನ ಸೆಳೆದಿದ್ದಾರೆ.

ತಾಲೂಕಿನ ಪ್ರಗತಿಪರ ರೈತ ದೇಶಿಹಳ್ಳಿ ಎಂ.ವೆಂಕಟರಾಮ್‌ ನಿವೃತ್ತ ಬೆಮೆಲ್ ನೌಕರರಾಗಿದ್ದು, ತಮ್ಮ ತೋಟದಲ್ಲಿ ಬಾಳೆ ಸೇರಿ ಹಲವು ತೋಟಗಾರಿಕೆ ಬೆಳೆಗಳನ್ನು ಬೆಳೆಯುವು ದರಲ್ಲಿ ಸಫ‌ಲತೆ ಕಂಡಿದ್ದಾರೆ. ಕಡಿಮೆ ನೀರಿನಲ್ಲಿ ಆ್ಯಪಲ್ ಬೆರ್‌ ಬೆಳೆಯಲು ಎರಡೂವರೆ ವರ್ಷಗಳ ಹಿಂದೆ ನಿರ್ಧಾರ ಮಾಡಿ, ಬಳಿಕ ನಾಟಿ ಮಾಡಿ ಪ್ರಸ್ತುತ ಫ‌ಸಲು ಕೈಸೇರುವ ಮಟ್ಟಕ್ಕೆ ಬಂದಿದೆ.

ಇದೀಗ ತೋಟಗಾರಿಕೆ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪ್ರಗತಿಪರ ರೈತರು ಆ್ಯಪಲ್ ಬೆರ್‌ ಹಣ್ಣಿನ ಬೆಳೆಯ ಕ್ಷೇತ್ರೋತ್ಸವ ನಡೆಸಿದರು.

ಆ್ಯಪಲ್ ಬೆರ್‌ ಬೆಳೆ ತೆಗೆದ ಮೊದಲ ರೈತ: ಜಿಲ್ಲೆಯಲ್ಲಿ ಆ್ಯಪಲ್ ಬೆರ್‌ ಈವರೆಗೂ ರೈತರು ಬೆಳೆದಿಲ್ಲ. ಈಗ ವೆಂಕಟರಾಮ್‌ ಮೊದಲ ಬಾರಿಗೆ ಬೆಳೆದಿದ್ದಾರೆ. ಉಷ್ಣ ವಲಯದಲ್ಲಿ ಬೆಳೆಯುವ ಈ ಹಣ್ಣನ್ನು ಜಿಲ್ಲೆಯಲ್ಲಿ ಬೆಳೆಯಲು ಸೂಕ್ತ. ಇದಕ್ಕೆ ನೀರಿನ ಅವಶ್ಯಕತೆ ಕಡಿಮೆ ಇದ್ದು, 20 ವರ್ಷ ಫ‌ಸಲು ಕೊಡುತ್ತದೆ. ವರ್ಷಕ್ಕೆ ಬೆಳೆ ಕೈ ಸೇರಲಿದೆ. ಮೊದಲನೇ ವರ್ಷ ಒಂದು ಗಿಡದಿಂದ 20 ಕೆ.ಜಿ., ಎರಡನೇ ವರ್ಷ 20 ರಿಂದ 30 ಕೆ.ಜಿ., ಮೂರನೇ ವರ್ಷ 100 ರಿಂದ 150 ಕೆ.ಜಿ. ಹಣ್ಣು ಸಿಗುತ್ತದೆ. ಒಂದು ಹಣ್ಣು 20 ರಿಂದ 50 ಗ್ರಾಂ ತೂಗುತ್ತದೆ. 15 ರಿಂದ 20 ಅಡಿ ಎತ್ತರ, 30 ಅಡಿ ಅಗಲದ ಮರವಾಗುತ್ತದೆ.

ಸಹಾಯಧನ: ಎರಡು ಎಕರೆ ಜಮೀನಿನಲ್ಲಿ ಈ ಬೆಳೆಗೆ ತೋಟಗಾರಿಕೆ ಇಲಾಖೆಯಿಂದ 44 ಸಾವಿರ ರೂ. ಸಹಾಯಧನ ನೀಡಲಾಗಿದೆ. ಹಾಪ್‌ಕಾಮ್ಸ್‌, ರಿಲಿಯನ್ಸ್‌, ಹೈದ್ರಾಬಾದ್‌ ಮೂಲದ ಟ್ರೆಂಡ್‌ ಕಂಪನಿಗಳ ಜೊತೆ ಒಪ್ಪಂದ ಮಾಡಿ ಮಾರ್ಕೆಟಿಂಗ್‌ ವ್ಯವಸ್ಥೆ ಕಲ್ಪಿಸಲು ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತೋಟಗಾರಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ನೀರಿನ ಬಗ್ಗೆ ಸಾಕ್ಷರತೆ: ಜಲಶಕ್ತಿ ಅಭಿಯಾನದ ಮೂಲ ಉದ್ದೇಶ ಜನರಲ್ಲಿ ನೀರಿನ ಬಗ್ಗೆ ಸಾಕ್ಷರತೆ ಮೂಡಿಸುವುದು, ನೀರಿನ ಮಹತ್ವ, ಮೌಲ್ಯ ತಿಳಿಸುವುದಾಗಿದೆ. ಕೆರೆಗಳ ಸಂರಕ್ಷಣೆ ಆಗಬೇಕು. ಗೋಕುಂಟೆ, ಕಲ್ಯಾಣಿ ಸ್ವಚ್ಛಗೊಳಿಸಿ ರಕ್ಷಣೆ ಮಾಡಬೇಕು.

ಒಡ್ಡುಗಳನ್ನು ನಿರ್ಮಾಣ ಮಾಡಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ನೀರು ಸಿಗುತ್ತದೆ. ಹಾಗಾಗಿ ಅರಣ್ಯ ರಕ್ಷಣೆ ಮಾಡಿದಾಗ ಮಾತ್ರ ಕಾಲಕಾಲಕ್ಕೆ ಮಳೆ ಆಗುತ್ತದೆ. ಪ್ರತಿಯೊಬ್ಬರು ನೀರಿಗೆ ಮಹತ್ವ ಕೊಡಬೇಕಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಮಮೂರ್ತಿ ತಿಳಿಸಿದ್ದಾರೆ.

 

● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.