ಫುಟ್ಪಾಥ್ ಅಂಗಡಿ ತೆರವಿಗೆ ವಿರೋಧ
Team Udayavani, Sep 19, 2020, 6:07 PM IST
ಮುಳಬಾಗಿಲು: ನಗರದಲ್ಲಿ ಬೀದಿ ಬದಿಯ ಫುಟ್ಪಾಥ್ ವ್ಯಾಪಾರಿಗಳ ವ್ಯಾಪಾರಕ್ಕೆ ಅಡ್ಡಿಪಡಿಸದಂತೆ ನಗರ ಸಭೆಯು ಎಲ್ಲಿಯಾದರೂ ಕಾರ್ ಸ್ಟ್ಯಾಂಡ್ ನಿರ್ಮಿಸಿಕೊಳ್ಳಬೇಕೆಂದು ಒತ್ತಾಯಿಸಿ ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯಕರ್ತರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪರಶುರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಕೀಲುಹೊಳಲಿ ಸತೀಶ್, ನಗರದಲ್ಲಿ ಹಲವಾರು ವರ್ಷಗಳಿಂದ ನೂರಾರು ಜನರು ಪುಟ್ ಪಾಥ್ ಮೇಲೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುತ್ತಾರೆ. ನಗರಸಭೆ ಅಧಿಕಾರಿಗಳುಕಾರ್ ಸ್ಟ್ಯಾಂಡ್ ನಿರ್ಮಾಣಕ್ಕಾಗಿ ಏಕಾಏಕಿ ಫುಟ್ಪಾಥ್ ಅಂಗಡಿಗಳನ್ನು ತೆರವುಗೊಳಿಸಲು ಹುನ್ನಾರ ನಡೆಸಿದೆ.
ಇದರಿಂದ ಒಂದು ಕಡೆಯಿಂದ ಮತ್ತೂಂದು ಕಡೆ ಅಂಗಡಿಗಳನ್ನು ಬದಲಾಯಿಸಲು 7-8 ಸಾವಿರ ಖರ್ಚು ಬರುತ್ತದೆ. ಎಲ್ಲಿಯಾದರೂ ಕಾರ್ ಸ್ಟ್ಯಾಂಡ್ ನಿರ್ಮಿಸಿಕೊಳ್ಳಬಹುದು ಪ್ರಯಾಣಿಕರು ಹೋಗಿ ಹತ್ತುತ್ತಾರೆ, ಆದರೆ ಅಂಗಡಿಗಳನ್ನು ಪದೇ ಪದೆ ಎತ್ತಂ ಗಡಿ ಮಾಡಿಸುತ್ತಿದ್ದರೆ ಜೀವನ ಸಾಗಿಸು ವುದು ಹೇಗೆ ಎಂದು ಕಿಡಿಕಾರಿದರು. ಅಬಕಾರಿ ಸಚಿವ ಎಚ್.ನಾಗೇಶ್ ಬಳಿ ಚರ್ಚಿಸುವವರೆಗೂ ಅಂಗಡಿಗಳನ್ನು ತೆರವುಗೊಳಿಸಬಾರದು ಎಂದು ಒತ್ತಾಯಿಸಿಪೌರಾಯುಕ್ತಶ್ರೀನಿವಾಸಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಎಎಪಿ ಪಕ್ಷದ ನಗರ ಘಟಕ ಅಧ್ಯಕ್ಷ ಬಷೀರ್ಪಾಷ, ಬೀದಿ ಬದಿಯ ವ್ಯಾಪಾರಿಗಳ ಸಂಘದ ಸದಸ್ಯರಾದ ನಾಗೇಶ, ಪೂಲ್ ಅಶ್ವತ್ಥ್, ಬಾಲಕೃಷ್ಣ ಹಾಗೂತಿಪ್ಪರಾಜು ಸೇರಿದಂತೆಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ