ವೃದರ ಪಿಂಚಣಿಯಲ್ಲೂ ಕಮಿಷನ್‌ ಪಡೆಯುವ ಪೀಡಕರು

ಎಟಿಎಂ ಬಳಸಲು ಬಾರದ ವೃದ್ಧರ ಪಿಂಚಣಿಗೆ ಕೊಡಬೇಕು ಹಣ  ರೇಗಿದರೆ ಕೆಲಸಕ್ಕೆ ಅಡ್ಡಿ, ಪೊಲೀಸರನ್ನು ಕರೆಸುತ್ತೇವೆ ಎನ್ನುತ್ತಾರೆ: ಆರೋಪ

Team Udayavani, Oct 28, 2021, 6:25 PM IST

ಪಿಂಚಣಿ ಸಮಸ್ಯೆ

ಬಂಗಾರಪೇಟೆ: ಸರ್ಕಾರ ಬಡವರಿಗೆ ಸೌಲಭ್ಯ ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಫ‌ಲಾನುಭವಿಗಳು ವಂಚಿತರಾಗುತ್ತಾರೆ ಎಂಬುದಕ್ಕೆ ತಾಲೂಕಿನ ಬೂದಿಕೋಟೆಯಲ್ಲಿರುವ ಅಂಚೆ ಕಚೇರಿಯೇ ಸಾಕ್ಷಿ ಎಂಬಂತಿದೆ. ಕಮಿಷನ್‌: ತಾಲೂಕಿನ ಬೂದಿಕೋಟೆ ಗ್ರಾಮದ ಅಂಚೆ ಕಚೇರಿಯಲ್ಲಿ ನಿತ್ಯ ವೃದ್ಧರು, ವಿಕಲಚೇತನರು, ವಿಧವೆಯರಿಗೆ ಸರ್ಕಾರ ನೀಡುವ ಪಿಂಚಣಿ ಪಡೆಯಲು ಅಂಚೆ ಕಚೇರಿ ಸಿಬ್ಬಂದಿಗೆ ಕಮಿಷನ್‌ ನೀಡಬೇಕಿದೆ. ಕೊಡದಿದ್ದರೆ ಪಿಂಚಣಿ ನೀಡಲು ಸತಾಯಿಸುವರು ಎಂದು ಫ‌ಲಾನುಭವಿಗಳೇ ಆರೋಪಿಸುತ್ತಿದ್ದಾರೆ.

ಈ ಹಿಂದೆ ಪಿಂಚಣಿಯನ್ನು ಪೋಸ್ಟ್‌ಮೆನ್‌ ನೇರವಾಗಿ ಡ್ರಾ ಮಾಡಿ ಫ‌ಲಾನುಭವಿಗಳಿಗೆ ಕೊಡುತ್ತಿದ್ದರು. ಆಗ, ಸರ್ಕಾರ ನಿಗದಿಪಡಿಸಿದ್ದ ಹಣವನ್ನು ಫ‌ಲಾನುಭವಿಗೆ ಕಮಿಷನ್‌ ಪಡೆದು ಕೊಡುತ್ತಿದ್ದರು. ಈ ಬಗ್ಗೆ ವ್ಯಾಪಕ ದೂರು ಕೇಳಿ ಬಂದ ಹಿನ್ನೆಲೆ ಸರ್ಕಾರ ಫ‌ಲಾನುಭವಿ ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವಂತೆ ಸೂಚಿಸಿತು.

ಖಾತೆ ಮೂಲಕ ಫ‌ಲಾನುಭವಿಗೆ ನೇರವಾಗಿ ಹಣ ಡ್ರಾ ಮಾಡುವ ವ್ಯವಸ್ಥೆ ಕಲ್ಪಿಸಿತ್ತು. ಆದರೆ, ಬಹುತೇಕ ಗ್ರಾಮೀಣರಿಗೆ ಅಂಚೆ ಕಚೇರಿಗೆ ಹೋಗಿ ಹಣ ಡ್ರಾ ಮಾಡಲು ಓದು ಬರಹ ತಿಳಿಯದ ಕಾರಣ ಪೋಸ್ಟ್‌ಮೆನ್‌ಗಳೇ ಫ‌ಲಾನುಭವಿಗಳ ಪಾಸ್‌ ಪುಸ್ತಕ ಪಡೆದು ಅವರೇ ಸಹಿ ಮಾಡಿ ಹಣ ಡ್ರಾ ಮಾಡಿ ಮನೆ ಬಾಗಿಲಿಗೆ ಹಣ ತಲುಪಿಸುತ್ತಿದ್ದರು.ಆದರೆ, ಈಗಲೂ ಕಮಿಷನ್‌ ಇಲ್ಲದೆ ಹಣ ಕೊಡುವುದಿಲ್ಲ.

ಇದು ತಾಲೂಕಿನ ಎಲ್ಲಾ ಕಡೆ ಪೋಸ್ಟ್‌ ಮೆನ್‌ಗಳ ಹಗಲು ದರೋಡೆ. ಪಿಂಚಣಿ ಹಣವನ್ನೇ ನಂಬಿ ಜೀವಿಸುವವರಿಗೆ ನಿರಾಸೆ ಜತೆ ವಿಧಿ ಇಲ್ಲದೆ ಅವರು ಕೊಟ್ಟ ಹಣ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಪೋಸ್ಟ್‌ ಮಾಸ್ಟರ್‌ಗೆ ತಿಳಿದಿದ್ದರೂ ತಲೆ ಕೆಡಿಸಿಕೊಂಡಿಲ್ಲ ಎಂದು ದೂರಿದ್ದಾರೆ.

ಬುಧವಾರ ಬೂದಿಕೋಟೆ ಹೋಬಳಿ ಕೇಂದ್ರದ ಅಂಚೆ ಕಚೇರಿಯಲ್ಲಿ ಸಿಬ್ಬಂದಿ ಹಣ ಪಡೆದು ವಂಚನೆ ಮಾಡುತ್ತಿದ್ದಾಗ ಸಾರ್ವಜನಿಕರು ಪ್ರಶ್ನೆ ಮಾಡಿದರೆ, ನಮಗೆ ಕೆಲಸ ಮಾಡಲು ನೀವು ತೊಂದರೆ ಕೊಡುತ್ತಿದ್ದೀರಿ ಪೊಲೀಸರಿಗೆ ದೂರು ಕೊಡ ಲಾಗುವುದೆಂದು ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ.

ಬೀಗ ಜಡಿದು ಪ್ರತಿಭಟನೆ: ಸಿಬ್ಬಂದಿ ದೌರ್ಜನ್ಯ ಖಂಡಿಸಿ ಫ‌ಲಾನುಭಗಳು ಮತ್ತು ಸಾರ್ವಜನಿಕರು ಸಿಬ್ಬಂದಿ ವಿರುದ್ಧ ತಿರುಗಿ ಬಿದ್ದಾಗ ಮೌನಕ್ಕೆ ಶರಣಾ ದರು. ಈ ಬಗ್ಗೆ ಮೇಲಧಿಕಾರಿಗಳು ಗಮನಹರಿಸಿ ಹಗಲು ದರೋಡೆ ನಿಯಂತ್ರಿಸದಿದ್ದರೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದೆಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ʼಅಂಚೆ ಕಚೇರಿಯಲ್ಲೇ ಹಣ ಪಡೆಯಲು ಬರುವವರಿಗೆ ಅಲ್ಲಿನ ಸಿಬ್ಬಂದಿ ಚಲನ್‌ ಬರೆಯಲು ಬಾರದ ವ್ಯಕ್ತಿಗಳಿಗೆ ಚಲನ್‌ ಬರೆದಿದ್ದಕ್ಕೆ ಎಂದು ಹೇಳಿ 20-30ರೂ. ವಸೂಲಿ ಮಾಡುತ್ತಿದ್ದಾರೆ. ಅಲ್ಲದೇ, 2 ಸಾವಿರ ಮೇಲೆ ಡ್ರಾ ಮಾಡುವವರಿಂದ 100-200 ರೂ. ಕಮಿಷನ್‌ ಕೊಡಬೇಕು.ʼ – ವೆಂಕಟೇಶಪ್ಪ, ಫ‌ಲಾನುಭವಿ.

  • ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.