ಕೋಟಿಲಿಂಗದಲ್ಲಿ ಗಲಾಟೆ ನಡೆದರೆ ಬಹಿಷ್ಕಾರ


Team Udayavani, Mar 3, 2019, 7:47 AM IST

koti-linga.jpg

ಬಂಗಾರಪೇಟೆ: ತಾಲೂಕಿನ ಕಮ್ಮಸಂದ್ರದ ಶ್ರೀಕೋಟಿಲಿಂಗ ದೇಗುಲದಲ್ಲಿ ಎರಡೂ ಗುಂಪುಗಳನ್ನು ತಾಲೂಕು ಹಾಗೂ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನಡೆಸಿದ ಮಾತುಕತೆಯ ಸಂಧಾನದಂತೆ ಮಹಾಶಿವರಾತ್ರಿ ಜಾತ್ರೆ ಪ್ರಾರಂಭವಾಗಿದೆ.

ದೇವಾಲಯದ ಧರ್ಮಾಧಿಕಾರಿಗಳಾಗಿದ್ದ ಶ್ರೀ ಕಮಲ ಸಾಂಭವ ಶಿವಮೂರ್ತಿ ಸ್ವಾಮೀಜಿಗಳು ಆಚರಣೆ ಮಾಡುತ್ತಿದ್ದ ದೇವರ ಉತ್ಸವಮೂರ್ತಿಗಳನ್ನು ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಕೆ.ಎನ್‌.ನಾರಾಯಣಮೂರ್ತಿ ಹಾಗೂ ಕಾರ್ಯದರ್ಶಿ ಕೆ.ವಿ.ಕುಮಾರಿ ನೇತೃತ್ವದಲ್ಲಿ ದೇವಾಲಯಕ್ಕೆ ಹೊತ್ತು ತಂದು ಮಹಾಶಿವರಾತ್ರಿ ಜಾತ್ರೆಗೆ ಚಾಲನೆ ನೀಡಲಾಯಿತು.

ಡಿವೈಎಸ್‌ಪಿ ಪರಮೇಶ್ವರ ಹೆಗಡೆ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯ ನಂತರ ಮತ್ತೆ ಕೋಲಾರ ಉಪವಿಭಾಗಾಧಿಕಾರಿ ಸೋಮಶೇಖರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿಯೂ ಶ್ರೀಕೋಟಿಲಿಂಗ ದೇವಾಲಯದಲ್ಲಿ 6 ದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಜಾತ್ರೆಯಲ್ಲಿ ಎರಡೂ ಗುಂಪುಗಳು ಒಟ್ಟಿಗೆ ಯಾವುದೇ ಗಲಾಟೆ ನಡೆಯದಂತೆ ಎಚ್ಚರಿಕೆಯಿಂದ ನಡೆಸತಕ್ಕದ್ದು.

ಇಲ್ಲದಿದ್ದಲ್ಲಿ ಜಿಲ್ಲಾಡಳಿತ ಮುಜರಾಯಿ ಇಲಾಖೆ ಮೂಲಕ ಮಧ್ಯಪ್ರವೇಶಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಭೆಗೆ ಕೆ.ವಿ.ಕುಮಾರಿ ಹಾಜರಿದ್ದು, ಶ್ರೀಗಳ ಪುತ್ರ ಡಾ.ಶಿವಪ್ರಸಾದ್‌ ಗೈರಾಗಿದ್ದರು. ಕೆಜಿಎಫ್ ಡಿವೈಎಸ್‌ಪಿ ಪರಮೇಶ್ವರ್‌ ಹೆಗಡೆ, ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌, ಮುಜರಾಯಿ ತಹಶೀಲ್ದಾರ್‌ ಸೋಮಶೇಖರ್‌, ಬೇತಮಂಗಲ ಸಬ್‌ ಇನ್ಸ್‌ಪೆಕ್ಟರ್‌ ಸುನೀಲ್‌ ಕುಮಾರ್‌ ಹಾಜರಿದ್ದರು.

 ಶ್ರೀಕೋಟಿಲಿಂಗ ದೇವಾಲಯದ ವಿವಾದದ ಬಗ್ಗೆ ಕೋಲಾರ ಸಂಸದ ಕೆ.ಎಚ್‌.ಮುನಿಯಪ್ಪ ಹಾಗೂ ಡಿವೈಎಸ್‌ಪಿ ಪರಮೇಶ್ವರ್‌ ಹೆಗಡೆ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಕೆ.ವಿ.ಕುಮಾರಿ ಹಾಗೂ ಡಾ.ಶಿವಪ್ರಸಾದ್‌ ಬಗ್ಗೆ ನಂಬಿಕೆ ಬರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಾಶಿವರಾತ್ರಿ ಸುಗಮವಾಗಿ ನಡೆಯಬೇಕೆನ್ನುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮತ್ತೆ ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.  

ಈ ಸಭೆಯಲ್ಲಿ ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಕೆ.ಎನ್‌.ನಾರಾಯಣಮೂರ್ತಿ, ಕಾರ್ಯದರ್ಶಿ ಕೆ.ವಿ.ಕುಮಾರಿ, ಶ್ರೀಗಳ ಪುತ್ರ ಡಾ.ಕೆ.ಶಿವಪ್ರಸಾದ್‌ ಹಾಗೂ ಪುತ್ರಿ ಕೆ.ಅನುರಾಧ ವಿರುದ್ಧ ಸೆಕ್ಷನ್‌ 107 ರಂತೆ ಬೇತಮಂಗಲ ಠಾಣೆಯಲ್ಲಿ ಪಿಎಸ್‌ಐ ಸುನೀಲ್‌ ಕುಮಾರ್‌ರಿಂದ ದೂರು ದಾಖಲಾಗಿದೆ. ಮಹಾಶಿವರಾತ್ರಿ ಜಾತ್ರೆ ಅಂಗವಾಗಿ ಯಾವುದೇ ಗೊಂದಲ, ದೊಂಬಿ, ಗುಂಪು ಕಟ್ಟಿಕೊಂಡು ಗಲಭೆ ಮಾಡದಂತೆ ಎಚ್ಚರಿಸಲು ಈ ದೂರು ದಾಖಲಾಗಿದೆ. 

ವಿವಾದ ಏನೇ ಇದ್ದರೂ ಸಿವಿಲ್‌ ಕೋರ್ಟ್‌ಗೆ ಹೋಗಿ…: ಕಮ್ಮಸಂದ್ರದ ಶ್ರೀಕೋಟಿಲಿಂಗ ದೇಗುಲದಲ್ಲಿ 2ಗುಂಪುಗಳ ಮಧ್ಯೆ ವಿವಾದ ಸೃಷ್ಟಿಯಾಗಿರುವುದರಿಂದ ದೇವಾಲಯದ ಪ್ರತಿನಿತ್ಯ ಹಾಗೂ ಮಹಾಶಿವರಾತ್ರಿ ಜಾತ್ರೆ ಅಂಗವಾಗಿ ಪೂಜೆ ಕಾರ್ಯಗಳು ನಡೆಯಲು ಅಡ್ಡಿಯಾಗುವ ಬಗ್ಗೆ ಪೊಲೀಸ್‌ ಇಲಾಖೆಗೆ ಅನುಮಾನ ಹೆಚ್ಚಾಗಿದೆ. ಹೀಗಾಗಿ ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಕೆ.ಎನ್‌.ನಾರಾಯಣಮೂರ್ತಿ, ಕಾರ್ಯದರ್ಶಿ ಕೆ.ವಿ.ಕುಮಾರಿ, ಶ್ರೀಗಳ ಪುತ್ರ ಡಾ.ಕೆ.ಶಿವಪ್ರಸಾದ್‌ ಹಾಗೂ ಪುತ್ರಿ ಕೆ.ಅನುರಾಧ ವಿರುದ್ಧ ಬೇತಮಂಗಲ-

ಠಾಣೆಯಲ್ಲಿ ಸೆಕ್ಷನ್‌ 107ರಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ. ತಾಲೂಕು ದಂಡಾಧಿಕಾರಿಯಾದ ತನ್ನ ಮುಂದೆ ಹಾಜರಿಪಡಿಸಿ ಪ್ರತಿಯೊಬ್ಬರಿಂದಲೂ 5 ಲಕ್ಷ ರೂ., ಬಾಂಡ್‌ ಪಡೆಯಲಾಗಿದೆ. ದೇಗುಲದ ವಿವಾದ ಏನೇ ಇದ್ದರೂ ಸಿವಿಲ್‌ ಕೋರ್ಟಿಗೆ ಹೋಗಿ. ದೇಗುಲದಲ್ಲಿ ಯಾವುದೇ ದೊಂಬಿ, ಗಲಭೆ ನಡೆಸಬಾರದು. ಮತ್ತೆ ಏನಾದರೂ ಮಾಡಿದ್ದಲ್ಲಿ ಜಿಲ್ಲೆಯಿಂದಲೇ ಬಹಿಷ್ಕಾರ ಮಾಡಲಾಗುವುದು ಎಂದು ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌ ಎಚ್ಚರಿಕೆ ನೀಡಿದ್ದಾರೆ.

* ಎಂ.ಸಿ.ಮಂಜುನಾಥ್‌ 

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.