ಡೀಸಿ ವಿವಾದಾತ್ಮಕ ಆದೇಶಕ್ಕೆ ಆಕ್ರೋಶ
Team Udayavani, Oct 4, 2019, 5:19 PM IST
ಕೋಲಾರ: ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಜಿಲ್ಲಾ ಪ್ರಗತಿಪರ ಸಂಘಟನೆ ಗಳಿಂದ ಆದೇಶದ ಪ್ರತಿ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಯಾವುದೇ ಸರ್ಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಬಾರದು. ಪ್ರತಿಭಟನೆ ನಡೆಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅ.1ರಂದು ಆದೇಶ ಹೊರಡಿಸಿದ್ದರು. ಜೊತೆಗೆ ಸರ್ಕಾರಿ ಕಚೇರಿಗಳ ಸುತ್ತಲೂ 200 ಮೀಟರ್ ಅಂತರದವರೆಗೆ 144 ಸೆಕ್ಷನ್ ಜಾರಿ ಮಾಡಿದ್ದರು. ಈ ವಿವಾದಾತ್ಮಕ ಆದೇಶ ವಿವಿಧ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ಅನಿರ್ದಿಷ್ಟಾವಧಿ ಪ್ರತಿಭಟನೆ: ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ವಿವಾದಾತ್ಮಕ ಆದೇಶವನ್ನು ಖಂಡಿಸಿ ನಗರದ ಪತ್ರಕರ್ತರ ಭವನದಲ್ಲಿ ಅ.10ರಂದು ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಸಭೆ ಸೇರಿ ನಗರದ ನಚಿಕೇತ ನಿಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ಡಿಪಿಎಸ್ ಮುನಿರಾಜು, ನರಸಾಪುರ ನಾರಾಯಣಸ್ವಾಮಿ, ದಲಿತ ನಾರಾಯಣಸ್ವಾಮಿ, ಜನವಾದಿ ಮಹಿಳಾಸಂಘಟನೆಯ ವಿ.ಗೀತಾ, ಸಂಗಸಂದ್ರ ವಿಜಯಕುಮಾರ್, ಸಿ.ವಿ.ನಾಗರಾಜ್, ನಾಗನಾಳ ಮುನಿಯಪ್ಪ, ವರದೇನಹಳ್ಳಿವೆಂಕಟೇಶ್, ಖಾದ್ರಿಪುರ ಬಾಬು, ಹೂಹಳ್ಳಿ ನಾಗರಾಜ್, ಆಸೀಫ್, ಮುನಿ ಆಂಜಿನಪ್ಪ, ಕೆ.ಎಂ.ಸಂದೇಶ್, ಡಿ.ಎಸ್. ಎಸ್ ಮಂಜುಳಾ, ಕಾಮಧೇನಹಳ್ಳಿ ಶ್ರೀನಿವಾಸಯ್ಯ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ