ಸರ್ಕಾರಿ ಶಾಲೆಗಳಿಗೆ ಬಣ್ಣದ ಚಿತ್ತಾರ


Team Udayavani, Sep 25, 2019, 3:48 PM IST

kolara-tdy-2

ಮಾಸ್ತಿ: ಹಲವು ವರ್ಷಗಳಿಂದ ಸುಣ್ಣ ಬಣ್ಣವಿಲ್ಲದೆ ಪಾಳು ಬಿದ್ದ ಮನೆಗಳಂತೆ ಕಂಡು ಬರುತ್ತಿದ್ದ ಸರ್ಕಾರಿ ಶಾಲೆಗಳು ಈಗ ಪ್ರಾಕೃತಿಕ ಸೌಂದರ್ಯ ಒಳಗೊಂಡ ವರ್ಣಮಯ ಚಿತ್ತಾರದೊಂದಿಗೆ ಕಂಗೊಳಿಸುತ್ತಿವೆ.

ಮರ ತಬ್ಬಿಕೊಂಡ ಮಗು, ತಾಳಮೇಳಗಳೊಂದಿಗೆ ನೃತ್ಯ ಮಾಡುತ್ತಿರುವ ಕಲಾವಿದರು, ಹಿಮಾಲಯದ ತಪ್ಪಲು, ಸೂರ್ಯನ ಕಿರಣ ಹೀಗೆ ಹಲವು ಪ್ರಾಕೃತಿಕ ಸೌಂದರ್ಯ ಒಳಗೊಂಡ ವಿವಿಧ ವರ್ಣಮಯ ಚಿತ್ರಗಳು ಇದು ಸರ್ಕಾರಿ ಶಾಲೆಯೋ ಇಲ್ಲ, ಕಲಾ ಕ್ಷೇತ್ರವೋ ಎನ್ನುವ ಮಟ್ಟಿಗೆ ಶಾಲಾ ಮಕ್ಕಳು, ಪೋಷಕರು, ಗ್ರಾಮಸ್ಥರ ಗಮನ ಸೆಳೆಯುತ್ತಿವೆ.

ಹೋಬಳಿಯ ರಾಜೇನಹಳ್ಳಿ, ಆಲಹಳ್ಳಿ, ದಿನ್ನೇರಿ ಹಾರೋಹಳ್ಳಿ ಸೇರಿ ತಾಲೂಕಿನ 20 ಸರ್ಕಾರಿ ಶಾಲೆಗಳನ್ನು ಬೆಂಗಳೂರಿನ ಕ್ಯಾಂಪಸ್‌ ಟು ಕಮ್ಯೂನಿಟಿ ಸಂಸ್ಥೆಯ ವಿದ್ಯಾರ್ಥಿಗಳು ಬಣ್ಣದ ಚಿತ್ತಾರಗಳಿಂದ ಆಕರ್ಷಣೀಯ ವಾಗಿಸಿದ್ದಾರೆ. ಶಾಲಾ ಆವರಣ, ಕೊಠಡಿ, ಕಾಂಪೌಂಡ್‌ ಗೋಡೆ ಮೇಲೆ ಬಣ್ಣದ ಚಿತ್ರಗಳನ್ನು ಬಿಡಿಸಿ, ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವ ಕೆಲಸ ಮಾಡಿದ್ದಾರೆ.

ಸಾರ್ವಜನಿಕರಿಂದ ಮೆಚ್ಚುಗೆ: ಹಲವು ಕಡೆ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಕೆಲವು ಕಡೆ ಸುಣ್ಣ ಬಣ್ಣ ಕಂಡು ಎಷ್ಟೋ ವರ್ಷಗಳಾಗಿವೆ. ಮಳೆ ಬಿಸಿಲಿಗೆ ಬಣ್ಣ ಮಾಸಿ ಪಾಳುಬಿದ್ದ ಮನೆಯಂತಿವೆ. ಇದನ್ನು ಮನಗಂಡ ಕ್ಯಾಂಪಸ್‌ ಟು ಕಮ್ಯೂನಿಟಿ ಸಂಸ್ಥೆ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ಸುಣ್ಣ ಬಣ್ಣ ಬಳಿದು, ಚಿತ್ರಗಳನ್ನು ಬಿಡಿಸಿ ಉಳಿಸುವ ಪ್ರಯತ್ನ ಮಾಡಿದ್ದಾರೆ. ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

20 ಶಾಲೆಗಳಿಗೆ ಬಣ್ಣ: ಸರ್ಕಾರಿ ಶಾಲೆಗಳೆಂದರೆ ಈಗ ಜನರ ಮನಸ್ಸಿನಲ್ಲಿ ಏನೋ ಒಂದು ರೀತಿ ಅಸಡ್ಡೆ ಭಾವನೆ ಇದೆ. ಖಾಸಗಿ ಶಾಲೆಗಳ ಆಕರ್ಷಣೆಗೆ ಒಳಗಾಗಿರುವ ಪೋಷಕರನ್ನು ಮತ್ತೆ ಸರ್ಕಾರಿ ಶಾಲೆಗಳತ್ತ ಸೆಳೆಯಲು, ಮಕ್ಕಳನ್ನು ದಾಖಲಾತಿ ಮಾಡುವಂತೆ ಮಾಡಲು ಕ್ಯಾಂಪಸ್‌ ಟು ಕಮ್ಯೂನಿಟಿ ಸಂಸ್ಥೆಯು ತಾಲೂಕಿನಲ್ಲಿ ಆಯ್ದ 20 ಸರ್ಕಾರಿ ಶಾಲೆಗಳನ್ನು ಸುಂದರವಾಗಿಸಿದ್ದಾರೆ. ಶಾಲಾ ಕೊಠಡಿಗಳಿಗೆ, ಆವರಣದ ಗೋಡೆಗಳಿಗೆ, ಕಾಂಪೌಂಡ್‌ ಮೇಲೆ ವಿಜ್ಞಾನ, ಪರಿಸರ, ಕ್ರೀಡೆ, ರಾಷ್ಟ್ರೀಯ ನಾಯಕರು ಸೇರಿ ಹಲವು ರೀತಿಯ ಚಿತ್ರಗಳನ್ನು ಬಿಡಿಸಿದ್ದಾರೆ. ಇದರಿಂದ ಶಾಲೆಗಳ ಅಂದ ಹೆಚ್ಚುವುದರ ಜೊತೆಗೆ ಗೋಡೆ ಮೇಲೆ ಗಲೀಜು ಮಾಡದಂತೆ ಮಾಡಿದ್ದಾರೆ. ರಸ್ತೆ ಬದಿಯ ಮನೆಗಳು, ಕಾಂಪೌಂಡು, ಶಾಲಾ ಗೋಡೆ, ಸರ್ಕಾರಿ ಕಟ್ಟಡ ಮೇಲೆ ಭಿತ್ತಿ ಪತ್ರ, ಪೋಸ್ಟರ್‌ ಅಂಟಿಸಿ ಅಂದ ಕೆಡಿಸುವವರೇ ಹೆಚ್ಚು. ಇಂತಹ ಸಂದರ್ಭದಲ್ಲಿ ಕ್ಯಾಂಪಸ್‌ ಟು ಕಮ್ಯೂನಿಟಿ ಸಂಸ್ಥೆಯ ಸಂಯೋಜಕ ನಿಖೀಲ್‌ಕುಮಾರ್‌, ದೀಪಕ್‌ ಸೇರಿ 40 ಮಂದಿ ಶಾಲೆಯ ಸೌಂದರ್ಯವನ್ನು ಹೆಚ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿ.ಕೃಷ್ಣಪ್ಪ, ಕ್ಯಾಂಪಸ್‌ ಟು ಕಮ್ಯೂನಿಟಿ ಸಂಸ್ಥೆಯ ವಿದ್ಯಾರ್ಥಿಗಳ ಕಾರ್ಯ ನೋಡಿ ವೈಯಕ್ತಿಕವಾಗಿ 5 ಸಾವಿರ ರೂ. ದೇಣಿಗೆ ನೀಡಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಂಜುಂಡೇಗೌಡ, ರಾಜೇನಹಳ್ಳಿ ಗ್ರಾ.ಪಂ.ಪಿಡಿಒ ಸೋಮೇಶ್‌ ಇನ್ನಿತರರು ಇದ್ದರು.

 

  • ಎಂ.ಮೂರ್ತಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.