ಎಪಿಎಂಸಿಗೆ ಜಮೀನು ನೀಡಲು ಹಣ ಪಾವತಿಸಿ; ಜಿಲ್ಲಾಧಿಕಾರಿ

ಕೆಜಿಎಫ್‌ ಮಿನಿ ವಿಧಾನಸೌಧ ಕಾಮಗಾರಿ ಅಂತಿಮ ಹಂತದಲ್ಲಿದೆ

Team Udayavani, Sep 29, 2022, 6:34 PM IST

ಎಪಿಎಂಸಿಗೆ ಜಮೀನು ನೀಡಲು ಹಣ ಪಾವತಿಸಿ; ಜಿಲ್ಲಾಧಿಕಾರಿ

ಕೋಲಾರ: ಶಾಸಕಿ ರೂಪಕಲಾ ಮನವಿ ಹಿನ್ನಲೆಯಲ್ಲಿ ಜಿಲ್ಲೆಯ ಕೆಜಿಎಫ್‌ ಎಪಿಎಂಸಿ ಮಾರುಕಟ್ಟೆಗೆ ಮಂಜೂ ರಾಗಿರುವ 25 ಎಕರೆ ಜಾಗ ಎಪಿಎಂಸಿ ವಶಕ್ಕೆ ಪಡೆ
ಯುವುದು, ನಗರ ನಿರಾಶ್ರೀತರಿಗೆ ನಿವೇಶನ ನೀಡಲು 16 ಎಕರೆ ಜಮೀನು ಗುರುತಿಸುವ ಕಾರ್ಯವನ್ನು ಶೀಘ್ರ ಮುಗಿಸಿ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕಿ ರೂಪಕಲಾ ಡೀಸಿಗೆ ಮನವಿ ಮಾಡಿ, ಕೆಜಿಎಫ್‌ ತಾಲೂಕು ವಿಭಜನೆಯಾದ ನಂತರ ಪ್ರತ್ಯೇಕ ಎಪಿಎಂಸಿ ಮಾಡಲು ಸಿದ್ಧತೆ ನಡೆದಿದ್ದು, 25 ಎಕರೆ ಜಾಗ ಗುರುತಿಸಲಾಗಿದೆ. ಅದಕ್ಕೆ ಮಾರುಕಟ್ಟೆ ಮೌಲ್ಯದ ಅರ್ಧದಷ್ಟು 72 ಲಕ್ಷ ರೂ. ಹಣ ಕಟ್ಟಲು ಈಗಾಗಲೇ ಎಪಿಎಂಸಿ ರಾಜ್ಯ ನಿರ್ದೇಶಕರು ಸೂಚನೆ ನೀಡಿದ್ದು, ಅದರಂತೆ ಹಣ ಕಟ್ಟಲು ಸೂಚಿಸುವಂತೆ ಕೋರಿದರು.

ಅದರಂತೆ ಎಪಿಎಂಸಿ ಆಡಳಿತಾಧಿಕಾರಿಯೂ ಆಗಿರುವ ಬಂಗಾರಪೇಟೆ ತಹಶೀಲ್ದಾರ್‌ ದಯಾನಂದ್‌ ಹಾಗೂ ಎಪಿಎಂಸಿ ಕಾರ್ಯದರ್ಶಿಗೆ ನಿರ್ದೇಶನ ನೀಡಿದ ಡೀಸಿ, ಕೂಡಲೇ ಸಂಬಂಧಿಸಿದ 72 ಲಕ್ಷ ರೂ., ಬಿಡುಗಡೆಗೆ ಸೂಚಿಸಿದರು.

ಸೂರಹಳ್ಳಿ ಬಳಿ 16 ಎಕರೆ ಜಾಗ: ಕೆಜಿಎಫ್ ನಗರ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಳ್ಳಲು ಆಶ್ರಯ ಯೋಜನೆಯಡಿ ಸೂರಹಳ್ಳಿ ಸಮೀಪ 16 ಎಕರೆ ಜಾಗ ಗುರುತಿಸಿಕೊಡಲು ಶಾಸಕಿ ರೂಪಕಲಾ ಮಾಡಿದ ಮನವಿಗೆ ಸ್ಪಂದಿಸಿದ ಡೀಸಿ, ಅಗತ್ಯ ಕ್ರಮವಹಿಸಲು ಸೂಚಿಸಿ, ಫಲಾನುಭವಿಗಳ ಆಯ್ಕೆ, ನಿವೇಶನ ವಿಂಗಡಿ ಸುವ ಪ್ರಕ್ರಿಯೆಗಳನ್ನು ಶೀಘ್ರ ಆರಂಭಿಸಲು ನಗರ ಯೋಜನಾ ನಿದೇಶಕರು ಹಾಗೂ ನಗರಸಭೆಗೆ ಸೂಚನೆ ನೀಡಿದರು. ಈ ಕಾರ್ಯದಲ್ಲಿ ವಿಳಂಬ ಮಾಡದೇ ಶೀಘ್ರ ಜಮೀನು ಗುರುತಿಸಿ, ಫಲಾನುಭವಿ ಗಳಿಂದ ಅಗತ್ಯ ದಾಖಲೆಗಳನ್ನು ಪಡೆದು ಆಯ್ಕೆ ಪ್ರಕ್ರಿಯೆ ನಡೆಸಿ, ಅರ್ಹರಿಗೆ ನಿವೇಶನ ಹಂಚಲು ಕ್ರಮ ವಹಿಸಿ ಎಂದು ಹೇಳಿದರು.

ಟ್ರಕ್‌ ಟರ್ಮಿನಲ್‌ ಜಾಗಕ್ಕೆ ಮನವಿ: ಇದೇ ಸಂದರ್ಭದಲ್ಲಿ ಕೆಜಿಎಫ್‌ ನಗರಕ್ಕೆ ಟ್ರಕ್‌ ಟರ್ಮಿನಲ್‌ ಅಗತ್ಯವಿದ್ದು, ಅದಕ್ಕೆ ಜಾಗ ಗುರುತಿಸಿಕೊಡಲು ಡೀಸಿಗೆ ಶಾಸಕಿ ರೂಪಕಲಾ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡೀಸಿ ವೆಂಕಟ್‌ ರಾಜಾ, ಹೊಸ ತಾಲೂಕು ಹಾಗೂ ಅಲ್ಲೇ ಆರ್‌ಟಿಒ ಕಚೇರಿಯೂ ಇದೆ. ಅಗತ್ಯ ಜಾಗ ಗುರುತಿಸಿಕೊಡಿ ಎಂದು ಕೆಜಿಎಫ್‌ ತಹಶೀಲ್ದಾರ್‌ ಸುಜಾತಾ ಅವರಿಗೆ ಸೂಚಿಸಿದರು.

ಮಿನಿ ವಿಧಾನಸೌಧ ಶೀಘ್ರದಲ್ಲೇ ಉದ್ಘಾಟನೆ: ಕೆಜಿಎಫ್‌ ಮಿನಿ ವಿಧಾನಸೌಧ ಕಾಮಗಾರಿ ಅಂತಿಮ ಹಂತದಲ್ಲಿದೆ. ಕಂದಾಯ ಸಚಿವರು ಉದ್ಘಾಟನೆಗೆ ಶೀಘ್ರವೇ ದಿನಾಂಕ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಉಳಿಕೆ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸಿಕೊಡಲು ಶಾಸಕರು ಕೋರಿದರು.

ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಮಾತನಾಡಿ, ಕಟ್ಟಡಕ್ಕೆ ಶೀಘ್ರ ಅಗತ್ಯ ಕಾಂಪೌಂಡ್‌ ನಿರ್ಮಿಸಿಕೊಡಿ, ಸುರಕ್ಷತೆಗೆ ತಂತಿ ಬೇಲಿ ನಿರ್ಮಾಣ ಮಾಡಿಕೊಟ್ಟು, ವಿದ್ಯುತ್‌ ಸಂಪರ್ಕ ಮತ್ತಿತರ ಕೆಲಸ ಮುಗಿಸಿಕೊಡಿ ಎಂದು ಲೋಕೋಪಯೋಗಿ ಎಇಇ ಸರಸ್ವತಿಗೆ ಸೂಚಿಸಿದರು. ಸಭೆಯಲ್ಲಿ ವಿಭಾಗಾಧಿಕಾರಿ ವೆಂಕಟ ಲಕ್ಷ್ಮಮ್ಮ, ಕೆಜಿಎಫ್‌ ನಗರಸಭೆ ಅಧ್ಯಕ್ಷ ವಿ.ಮುನಿ ಸ್ವಾಮಿ, ಪೌರಾಯುಕ್ತ ಡಾ.ಮಾಧವಿ, ಕೆಜಿಎಫ್‌ ತಹಶೀಲ್ದಾರ್‌ ಸುಜಾತಾ, ಬಂಗಾರಪೇಟೆ ತಹಶೀಲ್ದಾರ್‌
ದಯಾನಂದ್‌, ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಹೀರ್‌ ಅಬ್ಟಾಸ್‌, ಎಪಿಎಂಸಿ ಸಹಾಯಕ ನಿರ್ದೇಶಕ ಕಿರಣ್‌, ನಗರಸಭೆ ಎಇಗಳಾ ಮಂಜು ನಾಥ್‌, ಶಶಿಕುಮಾರ್‌, ಲೋಕೋಪಯೋಗಿ ಇಲಾಖೆ ಎಇಇ ಸರಸ್ವತಿ, ಎಂಜಿನಿಯರ್‌ ರಾಜಶೇಖರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.