ಜನ ಔಷಧಿ ಮಳಿಗೆ ತೆರೆಯಲು ಆಗ್ರಹ
ಮೂರು ತಿಂಗಳ ಹಿಂದೆಯೇ ಮಳಿಗೆ ಮುಚ್ಚಿರುವ ಮಾಲಿಕ
Team Udayavani, Aug 3, 2019, 4:13 PM IST
ಕೋಲಾರ ಜನ ಔಷಧ ಮಳಿಗೆ ಪುನಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಡಿಎಚ್ಒ ಡಾ.ವಿಜಯಕುಮಾರ್ಗೆ ಮನವಿ ಸಲ್ಲಿಸಿದರು.
ಕೋಲಾರ: ಮೂರು ತಿಂಗಳಿಂದ ಮುಚ್ಚಿರುವ ಜನ ಔಷಧ ಮಳಿಗೆ ಕೂಡಲೇ ಆರಂಭಿಸುವಂತೆ ರೈತ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್ಕುಮಾರ್ಗೆ ಮನವಿ ನೀಡಿ ನೀಡಲಾಯಿತು.
ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬಡಜನರಿಗೆ ಔಷಧಿಗಳು ಕಡಿಮೆ ದರದಲ್ಲಿ ಸಿಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿ ತಾಲೂಕಿನ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜಾಗದ ಜೊತೆಗೆ ಎಲ್ಲಾ ಸೌಲಭ್ಯಗಳನ್ನು ನೀಡಿ 200 ಔಷಧಿ ಒಳಗೊಂಡ ಮಳಿಗೆ ತೆರೆಯಲು ಖಾಸಗಿಯವರಿಗೆ ಟೆಂಡರ್ ನೀಡಿದೆ. ಆದರೆ, ಟೆಂಡರ್ದಾರರು ನೆಪ ಮಾತ್ರಕ್ಕೆ ಮಳಿಗೆ ತೆರೆದು ಅಮಾಯಕರ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಹಣ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.ಟೆಂಡರ್ದಾರರು ಮೂರೇ ದಿನಕ್ಕೆ ಮಳಿಗೆ ಮುಚ್ಚಿ ನಾಪತ್ತೆಯಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನಕ್ಕೆ ಶರಣಾಗಿ ಖಾಸಗಿ ಮೆಡಿಸಿನ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ನೊಂದ ರೋಗಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಬಂಗವಾದಿ ನಾಗರಾಜಗೌಡ ಮಾತನಾಡಿ, ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳ ಕೈಗೊಂಬೆಯಾಗಿದೆ. 3 ತಿಂಗಳಿಂದ ಜನ ಔಷಧ ಮಳಿಗೆ ಮುಚ್ಚಿದ್ದರೂ ಟೆಂಡರ್ದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಕೇಳಿದ್ರೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಕೂಡಲೇ ಕಾಣೆಯಾಗಿರುವ ಜನ ಔಷಧ ಮಳಿಗೆ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಕೂಡಲೇ ಮಳಿಗೆ ಪ್ರಾರಂಭಿಸಬೇಕೆಂದು ಒತ್ತಾಯಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್ಕುಮಾರ್, ಜನ ಔಷಧ ಮಳಿಗೆ ಮುಚ್ಚಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಸಮಸ್ಯೆ ಬಗೆಹರಿಸಿ ಮಳಿಗೆ ಪ್ರಾರಂಭ ಮಾಡುವ ಜೊತೆಗೆ ಜನರಿಗೆ ಕರ ಪತ್ರದ ಮೂಲಕ ಜಾಗೃತಿ ಮೂಡಿಸುವ ಭರವಸೆ ನೀಡಿದರು. ಮನವಿ ನೀಡುವಾಗ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ಮಂಗಸಂದ್ರ ನಾಗೇಶ್, ತಿಮ್ಮಣ್ಣ, ವೆಂಕಟೇಶಪ್ಪ, ಮೀಸೆ ವೆಂಕಟೇಶಪ್ಪ, ನಲ್ಲಾಂಡಹಳ್ಳಿ ಕೇಶವ, ವೇಣು, ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಆಂಜಿನಪ್ಪ, ವಡ್ಡಹಳ್ಳಿ ಮಂಜುನಾಥ್, ಕ್ಯಾಸಂಬಳ್ಳಿ ಪ್ರತಾಪ್, ಚಂದ್ರಪ್ಪ, ರಾಮಕೃಷ್ಣಪ್ಪ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ