ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ
Team Udayavani, May 22, 2021, 5:35 PM IST
ಕೋಲಾರ: ಕೋವಿಡ್ ಸೋಂಕು ತಡೆಗೆ ಜಿಲ್ಲಾಡಳಿತ ಮೇ25ರ ಮಂಗಳವಾರ ಬೆಳಗ್ಗೆ 6 ಗಂಟೆಯವರೆಗೂ ಜಿಲ್ಲಾಡಳಿತ ಕಠಿಣ ಲಾಕ್ಡೌನ್ ಜಾರಿ ಮಾಡಿದೆ. ಈಹಿನ್ನೆಲೆಯಲ್ಲಿ ಮೂರೂವರೆ ದಿನಗಳಿಗೆ ಬೇಕಾಗುವಷ್ಟು ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದರಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ ಟ್ರಾಫಿಕ್ ಜಾಮ್ ಆಯಿತು.
ಶುಕ್ರವಾರ ಸಂಜೆಯಿಂದ ಕಠಿಣ ಲಾಕ್ಡೌನ್ಎಂಬ ಆತಂಕದ ನಡುವೆ ಸಾರ್ವಜನಿಕರು ಶುಕ್ರವಾರಬೆಳಗ್ಗೆ 6ರಿಂದ 10 ಗಂಟೆಯವರೆಗೂ ಮನೆಗೆಅಗತ್ಯವಾದ ದಿನಸಿ, ತರಕಾರಿ, ಮದ್ಯ ಮತ್ತಿತರ ಅಗತ್ಯವಸ್ತುಗಳನ್ನು ಖರೀದಿಗೆ ನೀಡಿದ್ದ ಅವಕಾಶಬಳಸಿಕೊಂಡ ಜನರು, ನಗರದ ಅಂಗಡಿಗಳ ಮುಂದೆ ಜಮಾಯಿಸಿದರು.
ಕೊರೊನಾ ನಿಯಮ ಗಾಳಿಗೆ:ಆರೋಗ್ಯ ಸೇವೆಗಳನ್ನುಹೊರತುಪಡಿಸಿ ಉಳಿದೆಲ್ಲಾವಹಿವಾಟುಮೂರೂವರೆದಿನ ಬಂದ್ ಆಗುತ್ತಿರುವ ಹಿನ್ನೆಲೆಯಲ್ಲಿ ನಗರದಪ್ರಮುಖ ದಿನಸಿ ಮಾಲ್, ಸೂಪರ್ ಮಾರ್ಕೆಟ್ಗಳಮುಂದೆ ಜನರ ಉದ್ದುದ್ದ ಸಾಲುಗಳು ಕಂಡುಬಂದವು. ಅಂಗಡಿಗಳ ಮುಂದೆ ಸಾಮಾಜಿಕ ಅಂತರಮರೆತು ದಿನಸಿ, ತರಕಾರಿ ಖರೀದಿಗೆ ಜನರ ದಂಡುಮುಗಿ ಬಿದ್ದಿದ್ದು ಕಂಡು ಬಂತು.
ಕೆಲವು ಸೂಪರ್ಮಾರ್ಕೆಟ್ಗಳಲ್ಲಿ ಸಾಮಾಜಿಕ ಅಂತರದ ಎಚ್ಚರಿಕೆನೀಡುತ್ತಿದ್ದರೂ ಜನ ಇದನ್ನು ಲೆಕ್ಕಿಸದೇ ವಹಿವಾಟುನಡೆಸಿ ಆತಂಕ ಮೂಡಿಸಿದರು.ಮದ್ಯ ಖರೀದಿಗೂ ಕ್ಯೂ: ಮುಂದಿನ ಮೂರೂವರೆದಿನ ಮದ್ಯಖರೀದಿಗೆ ಅವಕಾಶ ನೀಡದ ಕಾರಣ, ಮದ್ಯದಂಗಡಿಗಳ ಮುಂದೆ ಜನರು ವಾಹನಗಳನ್ನು ನಿಲ್ಲಿಸಿಕೊಂಡುಖರೀದಿ ಕಾಯುತ್ತಿದ್ದ ದೃಶ್ಯಕಂಡು ಬಂತು.
ಟ್ರಾಫಿಕ್ ಜಾಂ: ದಿನಸಿ, ಅಗತ್ಯ ವಸ್ತುಗಳ ಖರೀದಿಭರಾಟೆ ನಡೆಯುವ ನಗರದ ಕಾಳಮ್ಮ ಗುಡಿಸಮೀಪದ ಅಮ್ಮವಾರಿಪೇಟೆ ವೃತ್ತದಲ್ಲಿ ಭಾರೀವಾಹನಗಳ ಸಾಲು, ಜನಸಂದಣಿ ಕಂಡು ಬಂತಲ್ಲದೇ,ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು.
ಈಸಂದರ್ಭದಲ್ಲಿ ಪೊಲೀಸರು ಲಾಠಿ ಹಿಡಿದು ಸಂಚಾರಸುಗಮಗೊಳಿಸಿದರು. ತರಕಾರಿ ಮಾರುಕಟೆ rಯನ್ನುನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದ್ದು, ಅಲ್ಲಿಯೂ ಜನಜಂಗುಳಿ ಕಂಡುಬಂತು. ಜನ ಒಂದೇ ಬಾರಿಗೆ ದಿನಸಿ, ಅಗತ್ಯ ವಸ್ತುಗಳಖರೀದಿಗೆ ರಸ್ತೆಗಿಳಿದಿದ್ದರಿಂದಾಗಿ ನಗರದ ದೊಡ್ಡಪೇಟೆ, ಎಂ.ಜಿ.ರಸ್ತೆ, ಕಾಳಮ್ಮ ಗುಡಿ ರಸ್ತೆಗಳಲ್ಲಿ ಒತ್ತಡಕಂಡು ಬಂತು.
ನಗರಾದ್ಯಂತ ಬಂದೋಬಸ್ತ್: ಶುಕ್ರವಾರದ ಕಠಿಣ ಲಾಕ್ಡೌನ್ಗೆ ಸಿದ್ಧತೆ ನಡೆಸುತ್ತಿರುವುದಕ್ಕೆ ಸಾಕ್ಷಿ ಎಂಬಂತೆ ಶುಕ್ರವಾರ ಬೆಳಗ್ಗೆಯೇ ಪೊಲೀಸರು ರಸ್ತೆಗಿಳಿದಿದ್ದರು.ನಗರದ ಪ್ರಮುಖ ರಸ್ತೆಗಳಲ್ಲಿ ಮಾತ್ರವಲ್ಲದೇ ವಿವಿಧ ತಾಲೂಕುಗಳಿಂದ ನಗರಕ್ಕೆ ಸಂಪರ್ಕ ಕಲ್ಪಿಸುವಶ್ರೀನಿವಾಸಪುರ, ಚಿಂತಾಮಣಿ, ಮುಳಬಾಗಿಲು
,ಚಿಕ್ಕಬಳ್ಳಾಪುರ ರಸ್ತೆಗಳಲ್ಲೂ ಪೊಲೀಸರ ಪಹರೆ ಹಾಕಲಾಗಿತ್ತು.ಲಾಠಿ ಹಿಡಿದ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳನ್ನು ನಿಲ್ಲಿಸಿ ಎಚ್ಚರಿಕೆ ಕೊಟ್ಟು ಕಳುಹಿಸುವ ಕೆಲಸವನ್ನು ಮಧ್ಯಾಹ್ನವೇ ಆರಂಭಿಸಿದರು.
ಈ ನಡುವೆ ಹೊರ ಜಿಲ್ಲೆಗಳಿಂದ ಬರುತ್ತಿದ್ದ ವಾಹನಗಳತಪಾಸಣೆಯನ್ನು ಮುಂದುವರಿಸಲಾಗಿತ್ತು. ಸಂಜೆ 6ಗಂಟೆ ನಂತರ ಮತ್ತಷ್ಟು ಬಿಗಿ ಬಂದೋಬಸ್ತ್ ಮಾಡುವಸಾಧ್ಯತೆಕಂಡು ಬಂತು.
ಮದುವೆ ಫಿಕ್ಸ್; ಬಟ್ಟೆ ಸಿಗುತ್ತಿಲ್ಲ: ಈ ನಡುವೆಈಗಾಗಲೇ ಮದುವೆ ಫಿಕ್ಸ್ ಆಗಿದ್ದು, ಮಧುವರರಿಗೆ,ಪೋಷಕರಿಗೆ ಬಟ್ಟೆ ಖರೀದಿಗೆ ಅವಕಾಶ ಸಿಗದೇಅನೇಕರು ಪರಿತಪಿಸುತ್ತಿದ್ದುದುಕಂಡು ಬಂತು. ಕೆಲವು ಪರಿಚಯಸ್ಥ ಬಟ್ಟೆ ಅಂಗಡಿಗಳವರು ಗ್ರಾಹಕರನ್ನು ಒಳಕರೆದುಕೊಂಡು ಬಾಗಿಲು ಮುಚ್ಚಿ ವಹಿವಾಟು ನಡೆಸುತ್ತಿದ್ದುದು ಸಹಾ ಕಂಡು ಬಂತು. ಇದೇ ಪರಿಸ್ಥಿತಿಚಿನ್ನದ ಅಂಗಡಿಗಳದ್ದು ಆಗಿದ್ದು, ಮದುವೆಗೆ ಅಗತ್ಯವಾದ ಆಭರಣ ಖರೀದಿಗೂ ಕರ್ಫ್ಯೂ,ಲಾಕ್ಡೌನ್ ಅಡ್ಡಿಯಾಗಿತ್ತು. ಈಗಾಗಲೇ ಕಠಿಣ ಲಾಕ್ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ರಸ್ತೆಗಿಳಿದರೆವಾಹನಗಳನ್ನು ವಶಕ್ಕೆ ಪಡೆಯುವುದರ ಜತೆಗೆ ವಿಪತ್ತುನಿರ್ವಹಣೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿಯೂ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ