ಅಂಗನವಾಡಿ ಕೇಂದ್ರಗಳ ಬಳಿ ಸಸಿಗಳ ನಾಟಿ

ಜಲಶಕ್ತಿ ಅಭಿಯಾನದಡಿ ಜಿಲ್ಲಾದ್ಯಂತ ನೆಡಲು ಚಿಂತನೆ: ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಂ.ಜಿ.ಪಾಲಿ

Team Udayavani, Jul 26, 2019, 9:20 AM IST

kolar-tdy-02

ಕೋಲಾರ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಯೋಜನೆಯಡಿ ಎಲ್ಲಾ ಅಂಗನವಾಡಿ ಕೇಂದ್ರಗಳ ಬಳಿ ಸಸಿ ನೆಡುತ್ತಿರುವ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ.

ಕೋಲಾರ: ಬರಪೀಡಿತ ಜಿಲ್ಲೆ ಕೋಲಾರದಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ನಿವಾರಿಸಬೇಕೆಂಬ ಉದ್ದೇಶದಿಂದ ಜಲಶಕ್ತಿ ಅಭಿಯಾನ ಹಮ್ಮಿಕೊಂಡಿದೆ. ಈ ಯೋಜನೆಯಡಿ ಎಲ್ಲಾ ಅಂಗವಾಡಿ ಕೇಂದ್ರಗಳ ಬಳಿ ಸಸಿ ನೆಡಲಾಗುತ್ತಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಎಂ.ಜಿ.ಪಾಲಿ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯ ಪ್ರತಿಯೊಂದು ಅಂಗನವಾಡಿ ಕೇಂದ್ರಗಳ ಬಳಿ ಜಲಶಕ್ತಿ ಯೋಜನೆಯಡಿ ಸಸಿ ನೆಡಬೇಕೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾರ್ಗದರ್ಶನ ನೀಡಿದ್ದರು. ಅದರಂತೆ ಇಲಾಖೆಯಿಂದ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಅದರಂತೆ ಸಸಿ ನೆಟ್ಟು ಪೋಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

986 ಕೇಂದ್ರಗಳಿಗೆ ಸ್ವಂತ ಕಟ್ಟಡ: ಜಿಲ್ಲೆಯಲ್ಲಿ ಒಟ್ಟು 2061 ಅಂಗನವಾಡಿ ಕೇಂದ್ರಗಳಿವೆ. ಈ ಪೈಕಿ 986 ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ನಡೆಯುತ್ತಿದೆ. ಇನ್ನೂ ಕೆಲವು ಸರ್ಕಾರದ ಇತರೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಕೇಂದ್ರಗಳ ಬಳಿ ಖಾಲಿ ಇರುವ ಜಾಗದಲ್ಲಿ ಸಸಿಗಳನ್ನು ನೆಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪರಿಸರ ಸ್ನೇಹಿ ಗಿಡ: ಕೆಲವು ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದೆ. ಈ ಸ್ಥಳಗಳಲ್ಲಿಯೂ ಸಸಿಗಳನ್ನು ನೆಡಲು ಕ್ರಮ ವಹಿಸಲಾಗಿದೆ. ಅಂಗವಾಡಿ ಮಕ್ಕಳು, ಅವರ ಪೋಷಕರು, ಗ್ರಾಪಂ ಸದಸ್ಯರು, ಸ್ತ್ರೀಶಕ್ತಿ ಸಂಘದವರು ಹಾಗೂ ಗ್ರಾಮದ ಎಲ್ಲಾ ಜನರನ್ನು ಒಗ್ಗೂಡಿಸಿಕೊಂಡು ಪರಿಸರ ಸ್ನೇಹಿ ಸಸಿಗಳನ್ನು ನೆಡಲಾಗುತ್ತಿದೆ. ಇದರಿಂದ ಉತ್ತಮ ಪರಿಸರ ನಿರ್ಮಾಣ ಮಾಡುವುದಲ್ಲದೆ ಗ್ರಾಮಸ್ಥರಿಗೂ ಇದರ ಉದ್ದೇಶ ತಿಳಿಯಪಡಿಸಲಾಗುತ್ತಿದೆ ಎಂದು ಹೇಳಿದರು.

ಸಸಿ ನೆಡುವ ಕಾರ್ಯ: ಈಗಾಗಲೇ ಕೋಲಾರದ ಬಾರಂಡಳ್ಳಿ, ಬೇತಮಂಗಲ, ಶ್ರೀನಿವಾಸಸಂದ್ರ, ಮುಳಬಾಗಿಲಿನ ಚಿಕ್ಕಪದ್ಮಘಟ್ಟ, ಕನ್ನಸಂದ್ರ, ಎನ್‌.ವಡ್ಡಹಳ್ಳಿ, ಕೋಗಿಲೇರಿ, ಇರಗಮುತ್ತನಹಳ್ಳಿ, ದೊಡ್ಡಬೇವಹಳ್ಳಿ, ಶಗತ್ತೂರು, ರಮೇಶನಗರ, ಮಾಲೂರಿನ ಕಲ್ಕೆರೆ, ದೊಮ್ಮಲೂರು, ಬಂಗಾರಪೇಟೆ-ಕೆಜಿಎಫ್‌ನ ಗಣೇಶಪುರಂ ಸೇರಿ ಸಾಕಷ್ಟು ಅಂಗನವಾಡಿ ಕೇಂದ್ರಗಳಲ್ಲಿ ಸಸಿಗಳನ್ನು ನೆಡಲಾಗಿದೆ. ಉಳಿದ ಅಂಗನವಾಡಿ ಕೇಂದ್ರಗಳಲ್ಲಿಯೂ ಈ ಸಸಿ ನೆಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಉತ್ತಮ ಪರಿಸರ: ಜಲ ಶಕ್ತಿ ಯೋಜನೆಯ ಮೂಲಕ ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ನೀರಿನ ಸಮಸ್ಯೆಯ ಬಗ್ಗೆ ಜನರನ್ನು ಎಚ್ಚೆತ್ತುಕೊಳ್ಳುವಂತೆ ಮಾಡಲಾಗುತ್ತಿದೆ. ಭವಿಷ್ಯದಲ್ಲಿ ಉತ್ತಮ ಪರಿಸರ ದೊರೆಯಬೇಕಾದರೆ ಹಾಗೂ ಮುಂದಿನ ಪೀಳಿಗೆಗೆ ಸೂಕ್ತ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ನೀರನ್ನು ಉಳಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು. ಇದಕ್ಕಾಗಿ ಮರಗಳನ್ನು ನೆಟ್ಟು ಉತ್ತಮ ಮಳೆಯಾಗಲು ಎಲ್ಲರೂ ಸಹಕಾರ ನೀಡಬೇಕು ಎಂದರು.

ಮಳೆ ಕೊಯ್ಲು ಅಳವಡಿಸಿ: ಸಸಿ ನೆಟ್ಟು ಕೋಲಾರವನ್ನು ಹಸಿರನ್ನಾಗಿಸಿದ್ದೇ ಆದರೆ, ಉತ್ತಮ ಮಳೆಯಾಗುವುದರಲ್ಲಿ ಯಾವುದೇ ಸಂದೇಹ ಇಲ್ಲ. ಈ ನೀರನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳಬೇಕು. ಜಲಪಾತ್ರೆಗಳನ್ನು ನಿರ್ಮಿಸಿ ನೀರು ಇಂಗುವಂತೆ ಮಾಡಬೇಕು. ಇದರಿಂದ ಅಂತರ್ಜಲಮಟ್ಟವೂ ಸಹ ಅಭಿವೃದ್ಧಿಯಾಗಲಿದೆ. ಅಷ್ಟೇ ಅಲ್ಲದೆ, ಮನೆಯ ಚಾವಣಿಗಳ ಮೇಲೆ ಬೀಳುವ ನೀರನ್ನು ಸಂಗ್ರಹಿಸಲು ಮಳೆ ನೀರಿನ ಕೊಯ್ಲನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಪರಿಸರವನ್ನು ಸಂರಕ್ಷಿಸುವ ಕೆಲಸ ಕೇವಲ ಒಬ್ಬರಿಂದ ಇಬ್ಬರಿಂದ ಸಾಧ್ಯವಾಗುವುದಲ್ಲ. ಇದನ್ನು ಬಲವಂತದಿಂದ ಮಾಡಿಸಲೂ ಆಗುವುದಿಲ್ಲ. ಮುಂದಿನ ಭವಿಷ್ಯದ ಒಳಿತಿಗಾಗಿ ಪ್ರತಿಯೊಬ್ಬರೂ ಸ್ವ ಪ್ರೇರಣೆಯಿಂದ ಮಾಡಲೇಬೇಕಾದ ಜವಾಬ್ದಾರಿಯಾಗಿದೆ. ಇದನ್ನು ಎಲ್ಲರೂ ಅರ್ಥಮಾಡಿಕೊಂಡು ಪರಿಸರವನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.