ಆಮೆಗತಿಯಲ್ಲಿ ಸಾಗಿದ ಪ್ಲಾಟ್ಫಾರಂ ಕಾಮಗಾರಿ

ಕೋಲಾರ ಮಾರ್ಗದ ರೈಲ್ವೆ ಕಾಮಗಾರಿ ಕಳಪೆ • ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ

Team Udayavani, Jul 31, 2019, 2:07 PM IST

kolar–tdy-3

ಬಂಗಾರಪೇಟೆ ಪಟ್ಟಣ ರೈಲ್ವೆ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಕೋಲಾರ ಮಾರ್ಗದ ರೈಲ್ವೆ ಪ್ಲಾಟ್ಫಾರಂ ಕಾಮಗಾರಿ ಕುಂಟುತ್ತಾ ಸಾಗಿದೆ.

ಬಂಗಾರಪೇಟೆ: ಪಟ್ಟಣದಲ್ಲಿ ಕೋಲಾರ ರೈಲ್ವೆ ಪ್ಲಾಟ್ಫಾರಂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಲ್ಲದೆ, ಕಾಮಗಾರಿ ಇನ್ನೂ ಮುಗಿದೇ ಇಲ್ಲ,. ಅಷ್ಟರಲ್ಲಾಗಲೇ ಅಲ್ಲಲ್ಲಿ ಸಿಮೆಂಟ್ ಬಿರುಕು ಬಿಟ್ಟು ಕಳಪೆ ಪ್ರದರ್ಶನ ವಾಗಿದೆ. ಆದರೂ ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿ ಕಾರಿಗಳು ಕ್ರಮ ಜರುಗಿಸದೇ ಕಣ್ಣು ಮುಚ್ಚಿ ಕುಳಿತಿದ್ದಾರೆ.

ವರ್ಷದಿಂದ ನಡೆಯುತ್ತಿರುವ ಈ ಕಾಮಗಾರಿ ಇನ್ನು ಪೂರ್ಣಗೊಳಿಸಿಲ್ಲ, ಕಾಮಗಾರಿ ಸ್ಥಗಿತವಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಒಂದು ಭಾಗದಲ್ಲಿ ಪ್ಲಾಟ್ಫಾರಂ ಕಾಮಗಾರಿ ನಡೆದಿದ್ದು, ಅದೂ ಕಳಪೆಯಾಗಿದೆ, ಕೆಲವು ಕಡೆ ಪ್ಲಾಟ್ಫಾರಂ ಬಿರುಕು ಬಿಟ್ಟಿದ್ದು, ಉದ್ಘಾಟ ನೆಗೆ ಮುಂಚೆಯೇ ಈ ರೀತಿಯಾಗಿರುವುದು ಖಂಡ ನೀಯ. ಈ ಬಗ್ಗೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರು ವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅದೇ ರೀತಿ ಕೋಲಾರ ಪ್ಲಾಟ್ಫಾರಂ ಕಾಮಗಾರಿ ಮಾಡುವಾಗ ಅವೈಜ್ಞಾನಿಕವಾಗಿ ಇದ್ದ ರೈಲ್ವೆಗೇಟ್ ಅನ್ನು ಬಂದ್‌ ಮಾಡಿದ್ದು, ಅರ್ಧ ಕಿ.ಮೀ. ಸುತ್ತಿಕೊಂಡು ಹೋಗಬೇಕಾಗಿದೆ. ಕೊಂಕಣ ಸುತ್ತಿ ಮೈಲಾರಕ್ಕೆ ಬಂದಂತಾಗಿದೆ. ಕೋಲಾರ ಮತ್ತು ಬೂದಿಕೋಟೆ ಎರಡು ರೈಲ್ವೆ ಗೇಟ್ ಸುತ್ತಿಕೊಂಡು ಬರುವ ವೇಳೆಗೆ ಪ್ರಯಾಣಿಕರು ಸುಸ್ತಾಗುತ್ತಾರೆ. ಪ್ರತಿ ದಿನ ಕೆಲಸಕ್ಕೆ ಹೋಗುವವರಿಗೆ, ಕೂಲಿ ಕಾರ್ಮಿಕರಿಗೆ ಅಸ್ಪತ್ರೆಗೆ ಹೋಗುವವರಿಗೆ ತುಂಬಾ ತೊಂದರೆಯಾಗುತ್ತಿದೆ. ಬೂದಿಕೋಟೆ ಮಾಲೂರು ಕಡೆಗೆ ಹೋಗುವ ಪ್ರಯಾಣಿ ಕರಿಗೂ ತೊಂದರೆ ಉಂಟಾಗಿದೆ.

ಈ ರೈಲ್ವೆ ಗೇಟ್ ನಿರ್ಮಾಣ ಮಾಡುವಾಗ ಅವೈಜ್ಞಾನಿಕವಾಗಿ ರಸ್ತೆ ಮಾಡಿದ್ದು, ಇದರಿಂದ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ಸಾರ್ವಜನಿಕರು ಪರದಾಡು ವಂತಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ರೈಲ್ವೆ ಅಧಿಕಾರಿ ಗಳ ವಿರುದ್ಧ ಪ್ರತಿಭಟನೆ ಮಾಡಲಾಗಿತ್ತು. ಆದರೆ, ಇದಕ್ಕೆಲ್ಲ ರೈಲ್ವೆ ಇಲಾಖೆ ಕಿವಿಗೊಡುತ್ತಿಲ್ಲ.

ಸ್ಥಳೀಯ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಆಕ್ರೋಶಗೊಂಡು, ಕಾರ್ಯಕ್ರಮವೊಂದರಲ್ಲಿ ಸಂಸದ ಎಸ್‌.ಮುನಿಸ್ವಾಮಿಗೆ ಸೂಚಿಸಿ ರೈಲ್ವೆ ಗೇಟ್ ಅನ್ನು ಈ ಹಿಂದೆ ಇದ್ದ ಕಡೆ ತೆರೆಯಬೇಕು, ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಸಾವಿರಾರು ಸಂಖ್ಯೆಯಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ಸಹ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಬದಲಾವಣೆಗಳಾಗದೇ ಪ್ರಯಾಣಿಕರು, ಸಾರ್ವಜನಿಕರು ಪರದಾಡುವಂತಾಗಿದೆ.

ಇನ್ನು ರೈಲ್ವೆ ಇಲಾಖೆ ನಿರ್ಮಾಣ ಮಾಡಿರುವ ಅಂಡರ್‌ಪಾಸ್‌ಗಳು ಮಳೆ ಬಂದಲ್ಲಿ ನದಿಗಳಂತೆ ನೀರು ತುಂಬಿ ವಾಹನ ಸವಾರರು, ಹಳ್ಳಿಗಳಿಗೆ ಹೋಗುವ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ರೈಲ್ವೆ ಅಧಿಕಾರಿಗಳು ಗಮನ ಹರಿಸದೇ ಇರುವುದು ವಿಪರ್ಯಾಸವೇ ಸರಿ. ಕಾಮಗಾರಿ ಪೂರ್ಣಗೊಳಿಸುವ ನೆಪದಲ್ಲಿ ಸಾರ್ವಜನಿಕರಿಗೆ ಅನಾನುಕೂಲ ಮಾಡುವುದು ಸರಿಯೇ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

● ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.