ಬಿರುಗಾಳಿಗೆ ನೆಲಕಚ್ಚಿದ ಪಾಲಿಹೌಸ್‌


Team Udayavani, Jun 2, 2019, 3:00 AM IST

birugali

ಮುಳಬಾಗಿಲು: ತಾಲೂಕಿನಲ್ಲಿ ಶುಕ್ರವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ 5 ಪಾಲಿಹೌಸ್‌ಗಳು ನಾಶವಾಗಿದ್ದು, ಕೋಟ್ಯಂತರ ರೂ. ನಷ್ಟವಾಗಿದೆ. ಇತರೆ ಹಳ್ಳಿಗಳಲ್ಲಿ 137 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಟೊಮೆಟೋ, ಮಾವು ನೆಲಕಚ್ಚಿದ್ದು, ನಗರದಲ್ಲಿ 2 ಮನೆಗಳ ಚಾವಣಿ ಹಾರಿ ಹೋಗಿದೆ.

ತಾಲೂಕಿನ ಕಪ್ಪಲಮಡಗು ಗ್ರಾಮ ಸಹಾಯಕ ಕೆ.ಎಚ್‌.ನಟರಾಜ್‌ ಅವರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಗ್ರೀನ್‌ಹೌಸ್‌, 5 ಲಕ್ಷ ರೂ. ವೆಚ್ಚದಲ್ಲಿ ನಾಟಿ ಮಾಡಿದ್ದ ಕ್ಯಾಪ್ಸಿಕಂ ಸಸಿ ಬಿರುಗಾಳಿ ಸಹಿತ ಮಳೆಗೆ ಸಂಪೂರ್ಣ ನಾಶವಾಗಿದೆ. ಈ ಗ್ರೀನ್‌ಹೌಸ್‌ ನಿರ್ಮಾಣಕ್ಕೆ 30 ಲಕ್ಷ ರೂ. ಸಾಲ ಪಡೆದಿದ್ದಾಗಿ ನಟರಾಜ್‌ ತಿಳಿಸಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಎನ್‌.ವಡ್ಡಹಳ್ಳಿ ಗ್ರಾಮದಲ್ಲಿ ಹನುಮಪ್ಪ ಅವರ 32 ಲಕ್ಷ ರೂ. ವೆಚ್ಚದ ಗ್ರೀನ್‌ಹೌಸ್‌ ಶೇ.25 ನಾಶವಾಗಿ, 6 ರಿಂದ 7 ಲಕ್ಷ ರೂ. ನಷ್ಟ ಉಂಟಾಗಿದೆ. ಬೆಳೆದಿದ್ದ ರೋಜ್‌ ಗಿಡಗಳಿಗೆ ತೊಂದರೆಯಾಗಿಲ್ಲ. ವಿ.ಗುಟ್ಟಹಳ್ಳಿ ರೈತ ಕಳೆದ ವರ್ಷ ಕೃಷಿಭಾಗ್ಯ ಯೋಜನೆಯಡಿ ಗ್ರೀನ್‌ಹೌಸ್‌ ನಿರ್ಮಿಸಿದ್ದರು. ಬೆಳೆ ಬೆಳೆಯಲು ಸಿದ್ಧತೆಯಲ್ಲಿರುವಾಗಲೇ ಬಿರುಗಾಳಿ ಸಹಿತ ಮಳೆಗೆ ಸಂಪೂರ್ಣ ನಾಶವಾಗಿ, 32 ಲಕ್ಷ ರೂ. ನಷ್ಟವಾಗಿದೆ.

ಅದೇರೀತಿ ನಗರದ ಹೊರವಲಯದ ಕೆಜಿಎಫ್ ರಸ್ತೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಕೃಷಿಭಾಗ್ಯ ಯೋಜನೆಯಡಿ ರಮಾದೇವಿ ಮತ್ತು ವಿಶ್ವನಾಥ್‌ ಪ್ರತ್ಯೇಕವಾಗಿ ತಲಾ 32 ಲಕ್ಷ ರೂ. ವೆಚ್ಚದಲ್ಲಿ ಎರಡು ಗ್ರೀನ್‌ಹೌಸ್‌ ನಿರ್ಮಿಸಿದ್ದರು. ಅದರಲ್ಲಿ ರೋಜ್‌ ಹೂ ಬೆಳೆದಿದ್ದರು. ಬೆಂಗಳೂರು, ಕೋಲ್ಕತ್ತಾ ಮುಂತಾದ ನಗರಗಳಿಗೆ ಸಾಗಾಣಿಕೆ ಮಾಡುತ್ತಿದ್ದರು. ಈಗ ಗ್ರೀನ್‌ಹೌಸ್‌ ಬಿರುಗಾಳಿ ಸಹಿತ ಮಳೆಗೆ ಶೇ.25 ಹಾನಿಯಾಗಿ 15 ಲಕ್ಷ ರೂ. ನಷ್ಟ ಸಂಭವಿಸಿದೆ.

ಹಳ್ಳಿಗಳಲ್ಲಿ ರೈತರು ಬೆಳೆದಿರುವ 70-80 ಹೆಕ್ಟೇರ್‌ ಟೊಮೆಟೋ, 55 ಹೆಕ್ಟೇರ್‌ ಮಾವು ಮತ್ತು ಅನಹಳ್ಳಿ ಗ್ರಾಮದಲ್ಲಿ ಗೋಪಾಲ್‌, ಸುಬ್ಬಣ್ಣ ಮತ್ತು ಗೋಪಾಲ್‌, ನಾಗಪ್ಪ ಎಂಬ ಇಬ್ಬರು ರೈತರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಎರಡು ಬಾಳೆ ತೋಟ ನಾಶವಾಗಿದೆ.

ತಾಯಲೂರು ಜಿಪಂ ಸದಸ್ಯೆ ಮುನಿಲಕ್ಷ್ಮಮ್ಮ 10 ತಿಂಗಳ ಹಿಂದೆ ಕಪ್ಪಲಮಡಗು ಸಮೀಪ 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕುರಿಶೆಡ್‌ ಸಂಪೂರ್ಣ ನಾಶವಾಗಿ 20 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಆಕೆಯ ಪುತ್ರ ಶಂಕರ್‌ ತಿಳಿಸಿದರು. ಅದೇ ರೀತಿ ಮುಳಬಾಗಿಲು ನಗರದ ಖಲೀಪಾಮೊಹಲ್ಲಾ ವಾಸಿಯಾದ ಚಾನ್‌ಷರೀಫ್ ಅವರು

-ಕದರೀಪುರ ಗ್ರಾಮದಂಚಿನಲ್ಲಿ 5 ವರ್ಷಗಳ ಹಿಂದೆ ನಿರ್ಮಿಸಿದ್ದ ನೆಲಗಡಲೆ ಮಿಲ್‌ನ ಚಾವಣಿಗೆ ಹಾಕಲಾಗಿದ್ದ ಜಿಂಕ್‌ಶೀಟ್‌ಗಳು ಸಂಪೂರ್ಣ ಹಾರಿ ಹೋಗಿ ದೂರದಲ್ಲಿ ಬಿದ್ದಿದ್ದರಿಂದ 5 ರಿಂದ 6 ಲಕ್ಷ ರೂ. ನಷ್ಟ ಉಂಟಾಗಿದೆ. ಅಲ್ಲದೇ, ನಗರದ ಬೋವಿ ಕಾಲೋನಿಯ ಮುನಿಯಪ್ಪ ಮತ್ತು ವೆಂಕಟೇಶಪ್ಪ ಅವರ ಮನೆಗಳ ಚಾವಣಿ ಹಾರಿ ಹೋಗಿದ್ದು, 1.50 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.