ಗುಂಡಿಗೆ ಇದ್ರೆ ಗುಂಡಿ ರಸ್ತೆಗೆ ಬನ್ನಿ

18 ವರ್ಷಗಳಿಂದ ಡಾಂಬರೀಕರಣ ಕಂಡಿಲ್ಲ ಹೊಸಬಡಾವಣೆ ರಸ್ತೆ

Team Udayavani, Jul 28, 2019, 12:41 PM IST

kolar-tdy-1

ಬೇತಮಂಗಲ ಹೊಸ ಬಡಾವಣೆಯಲ್ಲಿನ ಕೆಜಿಎಫ್-ಕೋಲಾರ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ 18 ವರ್ಷಗಳಿಂದ ಅಭಿವೃದ್ಧಿಯಾಗದೆ ನೆನಗುದಿಗೆ ಬಿದ್ದಿದೆ.

ಬೇತಮಂಗಲ: ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳಡಿಯಲ್ಲಿ ಕೋಟ್ಯಂತರ ರೂ. ಬಿಡುಗಡೆ ಮಾಡುತ್ತಿದೆಯಾದ್ರೂ ಸಮರ್ಪಕವಾಗಿ ಬಳಕೆ ಮಾಡುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ವಿಫ‌ಲವಾಗಿದ್ದಾರೆ ಎಂಬುದಕ್ಕೆ ಗ್ರಾಮದ ಹೊಸಬಡಾವಣೆಯ ಕೋಲಾರ-ಕೆಜಿಎಫ್ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯೇ ಸಾಕ್ಷಿ.

1.3 ಕಿ.ಮೀ. ಇರುವ ರಸ್ತೆಗೆ ಡಾಂಬರೀಕರಣ ಮಾಡಿ 18 ವರ್ಷ ಕಳೆದಿವೆ. ಗ್ರಾಮವಷ್ಟೇ ಅಲ್ಲದೆ, ಕೋಲಾರ ಕಡೆಯಿಂದ ಕೆಜಿಎಫ್ನ ನೂರಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಈ ರಸ್ತೆ ಸಂಪರ್ಕ ಸೇತುವೆಯಾಗಿದೆ. 2004ರ ಜಾತಿ ಗಣತಿ ಪ್ರಕಾರ ಕೇವಲ 5 ಸಾವಿರ ಜನಸಂಖ್ಯೆ ಹೊಂದಿದ್ದ ಬೇತಮಂಗಲ ಗ್ರಾಮವು ಇದೀಗ 15 ಸಾವಿರಕ್ಕೂ ಹೆಚ್ಚು ಜನರನ್ನು ಹೊಂದಿದೆ. ಆದ್ರೆ ಸರಿಯಾದ ರಸ್ತೆಗಳಿಲ್ಲ.

ಪ್ರವಾಸಿಗರಿಗೂ ಬೇಸರ: ಗ್ರಾಮದ ಪಾಲಾರ್‌ ಕೆರೆಯಿಂದ ಕೆಜಿಎಫ್ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. 1400ಕ್ಕೂ ಹೆಚ್ಚು ಎಕರೆ ಪ್ರದೇಶ ಹೊಂದಿರುವ ಪಾಲಾರ್‌ ಕೆರೆ ಮತ್ತು ಬ್ರಿಟೀಷರ ಕಾಲದಲ್ಲಿ ನಿರ್ಮಿತಗೊಂಡಿದ್ದ ಅತಿಥಿ ಗೃಹ ಇದೆ. ಆದರೆ, ಇದನ್ನು ನೋಡಲು ಬರುವ ಜನರಿಗೆ ಈ ಹದಗೆಟ್ಟ ರಸ್ತೆ ಅಡ್ಡಿಯಾಗಿದೆ.

ಭರವಸೆಗೆ ಸೀಮಿತ: ಈ ಹೊಸಬಡಾವಣೆಯ ರಸ್ತೆ ಲೋಕೋಪಯೋಗಿ ಇಲಾಖೆಗೆ ಸೇರುತ್ತೆ. ಒಮ್ಮೆ ಮಾತ್ರ ಡಾಂಬರೀಕರಣ ಮಾಡಿ ನಂತರ ಮರೆತೇ ಬಿಟ್ರಾ. ಕ್ಷೇತ್ರದಲ್ಲಿ ಈವರೆಗೂ ಗೆದ್ದ ಶಾಸಕರು ಕೇವಲ ದುರಸ್ತಿಯ ಭರವಸೆ ಕೊಡುತ್ತಾರೆ ಹೊರೆತು, ಈವರೆಗೂ ಕೆಲಸವಾಗಿಲ್ಲ.

ರಸ್ತೆ ತುಂಬಾ ಗುಂಡಿ: ಸ್ಮಶಾನ, ಪಶುಆಸ್ಪತ್ರೆ, ಶುದ್ಧ ಕುಡಿಯುವ ನೀರಿ ಘಟಕ, ಶಾಲಾ ಕಾಲೇಜುಗಳು ಈ ರಸ್ತೆಯಲ್ಲಿ ಬರುವ ಕಾರಣ ಕೂಲಿ ಕಾರ್ಮಿಕರು ರೈತರು ಹಾಗೂ ಶಾಲಾ ಮಕ್ಕಳು ಈ ರಸ್ತೆಯನ್ನೇ ಬಳಸುತ್ತಾರೆ. ರಸ್ತೆಯ ಡಾಂಬರು ಕಿತ್ತು ಹೋಗಿ ಜಲ್ಲಿ ಕಲ್ಲುಗಳು ರಸ್ತೆಯಲ್ಲಿ ತುಂಬಿವೆ. ಅಲ್ಲಲ್ಲಿ, ಕಡಿದಾದ ಗುಂಡಿಗಳು ಬಿದ್ದಿವೆ. ಮೊಣಕಾಲುದ್ದ ಬಿದ್ದಿರುವ ಗುಂಡಿಗಳು ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿವೆ. ಸ್ವಲ್ಪ ಮಳೆಯಾದ್ರೆ ರಸ್ತೆ ಕೆಸರು ಗದ್ದೆಯಾಗುತ್ತದೆ.

ಬೇತಮಂಗಲ ಗ್ರಾಮವು ಈ ಹಿಂದೆ ವಿಧಾನಸಭಾ ಕ್ಷೇತ್ರವಾಗಿತ್ತು. ನಂತರ ತಾಲೂಕು ವಿಂಗಡಣೆಯಾಗಿ ಬೇತಮಂಗಲ ಕೇವಲ ಗ್ರಾಮವಾಗಿ ಉಳಿದಿದೆ. ಸರ್ಕಾರವು ಕೋಟ್ಯಂತರ ರೂ. ಅನುದಾನ ನೀಡಿದರೂ ಅವಶ್ಯಕ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಪಡಿಸದಿರುವುದು ದುರ್ದೈವ.

 

● ಆರ್‌.ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.