ವಿದ್ಯುತ್‌ ಕಡಿತ: ಕಚೇರಿಯಲ್ಲಿ ಸಾರ್ವಜನಿಕ ಕೆಲಸ ಸ್ಥಗಿತ


Team Udayavani, Nov 19, 2022, 4:59 PM IST

tdy-16

ಕೋಲಾರ: ಸುಮಾರು 4 ಲಕ್ಷಕ್ಕೂ ಅಧಿಕ ರೂ. ವಿದ್ಯುತ್‌ ಬಿಲ್‌ ಬಾಕಿ ಇಟ್ಟುಕೊಂಡಿದ್ದರಿಂದ ಬೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಕಡಿತ ಮಾಡಿಕೊಂಡು ಹೋಗಿದ್ದರಿಂದ ಶುಕ್ರವಾರ ಇಡೀ ದಿನ ನಗರದ ತಾಲೂಕು ಕಚೇರಿಯಲ್ಲಿ ಕೆಲಸ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಅನಗತ್ಯವಾಗಿ ಪರದಾಡಬೇಕಾಯಿತು.

ತಾಲೂಕು ಕಚೇರಿಯ ವಿದ್ಯುತ್‌ ಬಿಲ್‌ ಸುಮಾರು 4 ಲಕ್ಷ ರೂ.ಗೂ ಅಧಿಕ ಮೊತ್ತ ಪಾವತಿಸದೆ ನಿರ್ಲಕ್ಷ್ಯಸಿತ್ತು. ಇದರಿಂದ ಬೆಸ್ಕಾಂ ಸಿಬ್ಬಂದಿ ಶುಕ್ರವಾರ ಬೆಳಗ್ಗೆಯೇ ತಾಲೂಕು ಕಚೇರಿಗೆ ವಿದ್ಯುತ್‌ ಕಡಿತ ಮಾಡಿ ಹೋಗಿದ್ದರು. ವಿದ್ಯುತ್‌ ಕಡಿತಗೊಂಡ ನೆಪವನ್ನಿಟ್ಟುಕೊಂಡು ಕಚೇರಿಯ ಸಿಬ್ಬಂದಿ ಇಡೀ ದಿನ ವಿದ್ಯುತ ಇಲ್ಲ ಎಂಬ ನೆಪವೊಡ್ಡಿ ಕಳುಹಿಸುತ್ತಿದ್ದರು.ಸಾರ್ವಜನಿಕರು ವಿದ್ಯುತ್‌ ಈಗ ಬರಬಹುದು, ಆಗ ಬರಬಹುದು ಎಂದು ಸಂಜೆಯವರೆವಿಗೂ ಕಾದರೂ ಪ್ರಯೋಜನವಾಗಲಿಲ್ಲ.

ಸಾರ್ವಜನಿಕರು ಪರದಾಟ: ಸಾರ್ವಜನಿಕರ ದೂರಿನ ಮೇರೆಗೆ ತಹಶೀಲ್ದಾರ್‌ ನಾಗರಾಜ್‌ರಿಗೆ ಮಧ್ಯಾಹ್ನ 3.45ರ ಸುಮಾರಿಗೆ ಸಾರ್ವಜನಿಕರು ದೂರವಾಣಿ ಮಾಡಿ, ಕಚೇರಿಯಲ್ಲಿ ವಿದ್ಯುತ್‌ ಬಾಕಿ ಕಾರಣ ವಿದ್ಯುತ್‌ ಕಡಿತಗೊಂಡಿದ್ದು, ಸಾರ್ವಜನಿಕರು ಪರದಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದಕ್ಕೆ ಉತ್ತರಿಸಿದ ತಹಶೀಲ್ದಾರ್‌ ನಾಗರಾಜ್‌, ಯಾರು ಹೇಳಿದ್ದು, ತಮ್ಮ ಕಚೇರಿಯಲ್ಲಿ ಈಗಲೂ ವಿದ್ಯುತ್‌ ಇದೆ ಎಂಬ ಸುಳ್ಳು ಮಾಹಿತಿಯನ್ನು ಉತ್ತರವಾಗಿ ನೀಡಿದ್ದಾರೆ.

ಇದಾದ ನಂತರ ಬೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮಾಡಿ ಕೇಳಿದಾಗ, ತಾಲೂಕು ಕಚೇರಿಯಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯುತ್‌ ಬಿಲ್‌ ಬಾಕಿ ಇಟ್ಟು ಕೊಂಡಿದ್ದರಿಂದ ತಮ್ಮ ಸಿಬ್ಬಂದಿ ವಿದ್ಯುತ್‌ ಕಡಿತ ಗೊಳಿಸಿದ್ದಾರೆ. ಸಾರ್ವಜನಿಕರ ಕೆಲಸ ಕಾರ್ಯ ಗಳಿಗೆ ಅಡ್ಡಿ ಯುಂಟಾಗುತ್ತಿದೆಯೆಂಬ ಕಾರಣ ಕ್ಕಾಗಿ ಮಧ್ಯಾಹ್ನದ ನಂತರ ವಿದ್ಯುತ್‌ ಮರು ಸಂಪರ್ಕ ಕಲ್ಪಿ ಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದರು.

ಕೊನೆಗೆ ಸುಮಾರು 4.05 ನಿಮಿಷಕ್ಕೆ ಕಡಿತಗೊಂಡಿದ್ದ ವಿದ್ಯುತ್‌ ಮರು ಸಂಪರ್ಕವಾಯಿತು. ಕಚೇರಿ ಸಿಬ್ಬಂದಿ ಯಥಾ ಪ್ರಕಾರ ಸರ್ವರ್‌ ಡೌನ್‌ ಇತ್ಯಾದಿ ಉತ್ತರಗಳನ್ನು ನೀಡಿ,ಬೆಳಗ್ಗೆಯಿಂದಲೂ ಕಾದು ನಿಂತಿದ್ದ ಸಾರ್ವಜನಿಕರನ್ನು ಬರಿ ಗೈಯಲ್ಲಿ ವಾಪಸ್‌ ಕಳುಹಿಸಿದರು.

ಇದೇ ಅವಧಿಯಲ್ಲೇ ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮಮ್ಮನವರು ತಾಲೂಕು ಕಚೇರಿಗೆ ಸಾಮಾನ್ಯರಂತೆ ಭೇಟಿ ನೀಡಿ ಕಚೇರಿಯ ಅವ್ಯವಸ್ಥೆಗಳನ್ನು ಗಮನಿಸಿ, ತಹಶೀಲ್ದಾರ್‌ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿದರು.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.