ಬೆಳೆ ಬೆಳೆಯುವ ರೈತರಿಗೆ ಸಾಲ ನೀಡಲು ಆದ್ಯತೆ


Team Udayavani, Jul 6, 2021, 2:33 PM IST

ಬೆಳೆ ಬೆಳೆಯುವ ರೈತರಿಗೆ ಸಾಲ ನೀಡಲು ಆದ್ಯತೆ

ಕೋಲಾರ: ಅನ್ನದಾತರು ಸಂಕಷ್ಟದಲ್ಲಿದ್ದಾರೆ, ಅವರ ನೆರವಿಗೆ ಬ್ಯಾಂಕ್‌ ನಿಲ್ಲಬೇಕಾಗಿದೆ, ಬೆಳೆ ಬೆಳೆಯುವಪ್ರಾಮಾಣಿಕ ರೈತರನ್ನು  ಗುರುತಿಸಿ ಅವರಿಗೆ ಸಾಲ ಸೌಲಭ್ಯ ನೀಡುವ ಜವಾಬ್ದಾರಿ ನಮ್ಮದಾಗಿದ್ದು, ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ ಠೇವಣಿ ಸಂಗ್ರಹಕ್ಕೂ ಒತ್ತು ನೀಡಿ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು ಮಾಡಿದರು.

ಬ್ಯಾಂಕಿನ ಸಭಾಂಗಣದಲ್ಲಿ ಉಭಯ ಜಿಲ್ಲೆಗಳ ಎಲ್ಲಾ ಶಾಖೆಗಳ ಅಧಿಕಾರಿ, ಸಿಬ್ಬಂದಿಯೊಂದಿಗೆ ಆನ್‌ಲೈನ್‌ ಸಭೆ ನಡೆಸಿ ಮಾತನಾಡಿದ ಅವರು, ಸಣ್ಣ, ಅತಿಸಣ್ಣರೈತರಿಗೆ ಸಾಲ ನೀಡಲು ಆದ್ಯತೆ ನೀಡಿ, ಬಡವರುಎಂದೂ ಬ್ಯಾಂಕಿಗೆ ವಂಚನೆ ಮಾಡುವುದಿಲ್ಲ, 10 ಗುಂಟೆ, 20 ಗುಂಟೆ ಜಮೀನಿನಲ್ಲೂ ಬದುಕು ಕಟ್ಟಿಕೊಳ್ಳುವ ಸಣ್ಣ ರೈತರಿದ್ದಾರೆ. ಅವರಿಗೆ ಮೊದಲು ಸಾಲ ನೀಡಿ ಕೈಹಿಡಿಯೋಣ ಎಂದು ಹೇಳಿದರು.

ಪ್ರಸ್ತಾವನೆ ಸಿದ್ಧಮಾಡಿಕೊಳ್ಳಿ: ಸಾಲ ನೀಡಿಕೆಗೆ ಜಾತಿ, ಧರ್ಮ, ಪಕ್ಷ ನೋಡದಿರಿ, ನಿಜವಾಗಿಯೂ ಬೆಳೆಬೆಳೆಯುವ ರೈತರೇ ನಮ್ಮ ಆದ್ಯತೆಯಾಗಬೇಕು, ಸೊಸೈಟಿಗಳಿಗೆ ಸಾಲಕ್ಕೆ ಪ್ರಸ್ತಾವನೆ ಸಿದ್ಧಪಡಿಸಿಕೊಳ್ಳಲು ತಿಳಿಸಿ ಎಂದ ಅವರು, ಈ ಕೂಡಲೇ ಉಪನೋಂದಣಾಧಿಕಾರಿಗಳಿಗೂ ಬ್ಯಾಂಕಿನ ಕೇಂದ್ರ ಕಚೇರಿಯಿಂದ ಪತ್ರಬರೆದು ಸಾಲಕ್ಕಾಗಿ ಜಮೀನುಮಾರ್ಟ್‌ಗೇಜ್‌ ಮಾಡುವ ರೈತರನ್ನು ಅಲೆಸದೇ ಅರ್ಜಿ ಹಾಕಿದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೋರಲು ತಿಳಿಸಿದರು.

ಠೇವಣಿ ಸಂಗ್ರಹ ಗುರಿ ಸಾಧಿಸಿ: ನಿಮಗೆ ಬ್ಯಾಂಕ್‌ ಅನ್ನ ನೀಡುತ್ತಿದೆ, ನಿಮ್ಮ ಕುಟುಂಬ ಪೋಷಿಸುತ್ತಿದೆ.ಆದ್ದರಿಂದ ನಿಮಗೆ ಜವಾಬ್ದಾರಿ ಇರಬೇಕು, ಠೇವಣಿ ಸಂಗ್ರಹದಲ್ಲಿ ನಾವು ಹಿಂದುಳಿದರೆ ರೈತರು, ಮಹಿಳೆಯರಿಗೆ ನೆರವಾಗಲು ಕಷ್ಟವಾಗುತ್ತದೆ. ಅಪೇಕ್ಸ್‌ ಬ್ಯಾಂಕ್‌, ನಬಾರ್ಡ್‌ಗಳಲ್ಲಿ ನಮ್ಮ ಬ್ಯಾಂಕಿಗೆ ಹೆಚ್ಚಿನ ಗೌರವವಿದೆ. ಅದಕ್ಕೆ ಚ್ಯುತಿಯಾಗಬಾರದು, ನಾವು ತಲೆಯೆತ್ತಿ ಅಲ್ಲಿಗೆ ಹೋಗುವ ವಾತಾವರಣ ನಿರ್ಮಿಸುವುದು ನಿಮ್ಮ ಹೊಣೆ ಎಂದು ಹೇಳಿದರು.

ಜು.30ರೊಳಗೆ ಇ-ಶಕ್ತಿ ಮುಗಿಸಿ: ಎರಡೂ ಜಿಲ್ಲೆಗಳ ಬ್ಯಾಂಕಿನ ಎಲ್ಲಾ ಶಾಖೆಗಳು ಜು.30ರೊಳಗೆ ಇ-ಶಕ್ತಿಅನುಷ್ಠಾನವನ್ನು ಶೇ.100 ಮುಗಿಸಿರಬೇಕು, ಇ-ಶಕ್ತಿಅನುಷ್ಠಾನದ ಹೊಣೆ ಹೊತ್ತಿರುವ 235 ಪ್ರೇರಕರನ್ನು ಮುಂದಿನ ಸಭೆಗೆ ಕರೆ ತನ್ನಿ, ಅದು ಬ್ಯಾಂಕ್‌ ಮ್ಯಾನೇಜರ್‌ಗಳ ಜವಾಬ್ದಾರಿ ಎಂದ ಅವರು, ಮಹಿಳಾಸ್ವಸಹಾಯ ಸಂಘಗಳ ಸಾಲಗಳ ನವೀಕರಣ ಪ್ರಸ್ತಾವನೆಶೀಘ್ರ ಸಲ್ಲಿಸಿ, ಯಾವುದೇ ಸಾಲ ಎನ್‌ಇಎಸ್‌ ಆಗದಂತೆವಸೂಲಾಗಿ ಬದ್ಧತೆಯಿಂದ ಮಾಡಿ, ರಜೆ, ಸ್ವಂತ ಕೆಲಸಬಿಟ್ಟು ಬ್ಯಾಂಕಿನಕೆಲಸ ಮಾಡಿ ಎಂದರು.

ಸಭೆಯಲ್ಲಿ ಎಜಿಎಂಗಳಾದ ಬೈರೇಗೌಡ, ಖಲೀಮುಲ್ಲಾ, ಅರುಣ್‌ಕುಮಾರ್‌, ಸಿಬ್ಬಂದಿ ಹ್ಯಾರೀಸ್‌,ಜಬ್ಟಾರ್‌, ಶುಭಾ, ಮಮತಾ, ಬಾಲಾಜಿ, ಬೇಬಿ ಶಾಮಿಲಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.