ನೀರಾವರಿ ಯೋಜನೆ ಜಾರಿಗೆ ಆದ್ಯತೆ: ಸಂಸದ

28 ವರ್ಷಗಳ ಬಳಿಕ ಅಭಿವೃದ್ಧಿಗೆ ಒತ್ತು • ಕೆಜಿಎಫ್ ಗಣಿ ಪುನಾರಂಭಕ್ಕೆ ಚರ್ಚೆ: ಮುನಿಸ್ವಾಮಿ

Team Udayavani, Jun 14, 2019, 9:44 AM IST

kolar-tdy-2..

ಶ್ರೀನಿವಾಸಪುರ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಜಿಲ್ಲೆಯ ನೂತನ ಸಂಸದ ಮುನಿಸ್ವಾಮಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಶ್ರೀನಿವಾಸಪುರ: ಅಭಿವೃದ್ಧಿ ಕಾಮಗಾರಿ ಮತ್ತು ಅತ್ಯವಸರವಿರುವ ಮೂಲಭೂತ ಸೌಲಭ್ಯಗಳೊಂದಿಗೆ ಬಯಲು ಸೀಮೆಗೆ ಶೀಘ್ರವಾಗಿ ನೀರು ಹರಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕೋಲಾರ ಜಿಲ್ಲೆಯ ನೂತನ ಸಂಸದ ಮುನಿಸ್ವಾಮಿ ಹೇಳಿದರು.

ಪಟ್ಟಣದ ಕುವೆಂಪು ವೃತ್ತದ ಸಮೀಪದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ನೂತನ ಸಂಸದರಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

28 ವರ್ಷ ಸುದೀರ್ಘ‌ವಾಗಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿ, ರೈತಪರ ಯೋಜನೆಗಳನ್ನು ಮಾಡದೆ ಜಿಲ್ಲೆಗೆ ಅಪಾರ ನಷ್ಟವನ್ನು ಉಂಟು ಮಾಡಿದ ಮತ್ತು ಎರಡು ಪಕ್ಷಗಳ ಹೊಂದಾಣಿಕೆಯಿಂದ ಗೆಲುವು ಪಡೆಯುತ್ತಿದ್ದ ವ್ಯಕ್ತಿಯನ್ನು ಜನ ಮನೆಗೆ ಕಳುಹಿಸಿ ಆಗಿದೆ.

ನೀರಾವರಿ ಯೋಜನೆಗ ಆದ್ಯತೆ: ಇನ್ನು ಮುಂದಿನ ದಿನಗಳಲ್ಲಿ ರೈತಪರ ಕಾರ್ಯ ಕ್ರಮಗಳನ್ನು ಪಕ್ಷಾತೀತವಾಗಿ ಹಮ್ಮಿಕೊಳ್ಳುವುದ ರೊಂದಿಗೆ, ಬಯಲು ಸೀಮೆಗೆ ಅತ್ಯವಶ್ಯಕವಾಗಿ ಬೇಕಾಗಿರುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮೆಚ್ಚುಗೆ: ವಿಧಾನ ಪರಿಷತ್‌ ಶಾಸಕ ವೈ.ಎ.ನಾರಾ ಯಣಸ್ವಾಮಿ ಮಾತನಾಡಿ, 70 ವರ್ಷಗಳ ನಂತರ ಇಂತಹ ವೇದಿಕೆ ಸಿಕ್ಕಿರುವುದು ಸೌಭಾಗ್ಯವೆಂದರೇ ತಪ್ಪಾಗಲಾರದು. 2ನೇ ಭಾರಿಗೆ ಮೋದಿ ಆಯ್ಕೆ ಮಾಡಿ ನೀಡಿರುವ ಜನಾದೇಶವನ್ನು ಇಡೀ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಮೋದಿಯವರ ದಿಟ್ಟ ನಿರ್ಧಾರ, ಅವರ ನೇರ ನುಡಿ ಹಾಗೂ ಕಾರ್ಯಕ್ಷಮತೆಯನ್ನು ನಮ್ಮ ದೇಶದಲ್ಲಿ ಮಾತ್ರವಲ್ಲ, ಗಡಿದಾಟಿ ಹೊರದೇಶಗಳಲ್ಲೂ ಅವರನ್ನು ನಾಯಕ ರೆಂದು ಗುರ್ತಿಸಿದ್ದಾರೆಂದರು.

ಭವಿಷ್ಯ ನಿಜವಾಗುತ್ತಿದೆ: ಕೋಲಾರ ಜಿಲ್ಲೆಯಲ್ಲಿ 1991ರಲ್ಲಿ ಕೇಸರೀಕರಣ ಆಗಬೇಕಿತ್ತು. ರಾಜೀವ್‌ಗಾಂಧಿ ಹತ್ಯೆಯಿಂದ ಸಿಂಪತಿ ಮತಗಳಿಂದ ಗೆದ್ದು ಅಂದೇ ಆಗಬೇಕಿದ್ದ ಕೇಸರೀಕರಣ ಕೋಲಾರವನ್ನು ಇಂದು ಕೇಸರಿಮಯವಾಗಿ ನೋಡುತ್ತಿದ್ದೇವೆ. ಅಂದಿನ ಇಂದಿರಾಗಾಂಧಿ, ವಾಜಪೇಯಿ ಮುಂದಾ ಳತ್ವದಲ್ಲಿ ಬಿಜೆಪಿ ಸೋತಾಗ ಅವರನ್ನು ನೋಡಿ ನಕ್ಕಿದ್ದರು. ಅಂದೇ ವಾಜಪೇಯಿಯವರು ಭವಿಷ್ಯ ವನ್ನು ನುಡಿದಿದ್ದರು. ನೀವು ಹಿಂದಿನ ಖುರ್ಚಿಯಲ್ಲಿ ಕೂಡಲಾಗದ ಸ್ಥಿತಿ ಎದುರಾಗುತ್ತದೆ. ಅಂದು ದೇಶ ನಿಮ್ಮನ್ನು ನೋಡಿ ನಗುತ್ತದೆ ಎಂದು ಭವಿಷ್ಯವನ್ನು ನುಡಿದಿದ್ದರು. ಅದರೊಂದಿಗೆ ‘ಕತ್ತಲು ಹಿಂದೆ ಸರಿದು, ಸೂರ್ಯ ಉದಯಿಸಿ ಬಿಜೆಪಿ ಕಮಲ ಅರಳುತ್ತಿದೆ’. ದೇಶ ವೆಲ್ಲಾ ಕೇಸರಿಮಯವಾಗುತ್ತದೆಂದು ನುಡಿದ್ದ ಭವಿ ಷ್ಯತ್‌ ವಾಣಿ ಇಂದು ನಿಜವಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲ್ಲಿ ತಳ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಬೇಕಾದ ಕಾರ್ಯತಂತ್ರವನ್ನು ರೂಪಿಸು ವುದರೊಂದಿಗೆ ನಾಲ್ಕು ಶಾಸಕರನ್ನಾದರೂ ಗೆಲ್ಲಿಸು ವಂತಹ ಕೆಲಸ ನಮ್ಮ ಸಂಸದರ ಮೇಲಿದೆ. ಅವರಿಗೆ ನಮ್ಮೆಲ್ಲರ ಸಹಕಾರ ಇರುತ್ತದೆಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟಮುನಿಯಪ್ಪ, ತಾಲೂಕು ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಜಯರಾಮ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಚಂದ್ರೇ ಗೌಡ, ಡಾ.ವೇಣುಗೋಪಾಲ್, ಲಕ್ಷ್ಮಣಗೌಡ, ಈ. ಶಿವಣ್ಣ, ವಕೀಲ ನಾಗರಾಜ್‌, ಷೇಕ್‌ಶಫೀವುಲ್ಲಾ, ಪಕ್ಷದ ಮತ್ತು ತಾಲೂಕಿನ ವಿವಿಧ ಘಟಕಗಳ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.