ಅ.15ರ ಒಳಗಾಗಿ ದೋಷರಹಿತ ಮತದಾರರ ಪಟ್ಟಿ ಸಿದ್ಧ ಪಡಿಸಿ


Team Udayavani, Sep 10, 2019, 3:48 PM IST

kolar-tdy-2

ಮಾಲೂರು ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರ ಪಟ್ಟಿ ಪರಿಷ್ಕರಣೆಯ ಬಿಎಲ್ಒಗಳ ತರಬೇತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಸೋಮಶೇಖರ್‌ ಮಾತನಾಡಿದರು.

ಮಾಲೂರು: 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ನಾಗರಿಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡುವುದು ಕಡ್ಡಾಯ ಎಂದು ಉಪವಿಭಾಗಾಧಿಕಾರಿ ಸೋಮಶೇಖರ್‌ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕರ ಜೂನಿಯರ್‌ ಕಾಲೇಜು ಸಭಾಂಗಣದಲ್ಲಿ ನಡೆದ ಬಿಎಲ್ಒ ಮತ್ತು ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿಗಳ ತರಬೇತಿ ಸಭೆಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಡ್ಡಾಯ ಮತದಾನ ಮತ್ತು 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ನಮ್ಮ ಹೆಸರು ನೋಂದಣಿ ಮಾಡಿಸಬೇಕು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಬೂನಾದಿಯಾಗಿರುವ ಚುನಾವಣೆಯಲ್ಲಿನ ಲೋಪ ತಡೆಯಲು ಪ್ರತಿಯೊಬ್ಬರು ಜವಾಬ್ದಾರಿ ಹೊರಬೇಕಾಗಿದೆ ಎಂದು ಹೇಳಿದರು.

ಅ.15 ಕೊನೆ ದಿನ: ಅ.15ರ ಒಳಗಾಗಿ ಸಂಪೂರ್ಣ ದೋಷ ರಹಿತ ಮತದಾರರಪಟ್ಟಿ ಮತ್ತು ಬಣ್ಣದ ಭಾವಚಿತ್ರವಿರುವ ಮತದಾರರಪಟ್ಟಿ ಸಿದ್ಧ ಪಡಿಸಬೇಕಾಗಿದೆ. ಇದರಿಂದ ಶೇ.99 ಚುನಾವಣೆ ದೋಷ ತಡೆಯಲು ಸಾಧ್ಯ. ಹೀಗಾಗಿ ಚುನಾವಣೆ ಆಯೋಗ ಸೆ.1ರಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ ಎಂದು ಹೇಳಿದರು.

ಅಗತ್ಯ ದಾಖಲೆ ಒದಗಿಸಿ: ಈ ಅವಧಿಯಲ್ಲಿ ಹೆಚ್ಚು ಜವಾಬ್ದಾರಿವುಳ್ಳ ಬಿಎಲ್ಒ ಮತ್ತು ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯ ಬೂತ್‌ಗಳ ಪ್ರತಿ ಮನೆಗೂ ತೆರಳಿ 18 ವರ್ಷ ಪೂರ್ಣಗೊಂಡವರಿಂದ ವಯಸ್ಸಿನ ದೃಢೀಕರಣದ ದಾಖಲೆ ಪಡೆದು, ಮೃತ ಪಟ್ಟ ವ್ಯಕ್ತಿಗಳ ಹೆಸರು ಪಟ್ಟಿಯಿಂದ ಕೈಬಿಡುವ ನಿಟ್ಟಿನಲ್ಲಿ ಅರ್ಜಿ ನಮೂನೆ 6 ಮತ್ತು 8ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಚುನಾವಣಾ ಶಾಖೆಗೆ ಒದಗಿಸುವಂತೆ ತಿಳಿಸಿದರು.

ತಿದ್ದುಪಡಿಗೆ ಅವಕಾಶ: ಪ್ರತಿಯೊಬ್ಬರು ಶೇ.100 ಗುಣಮಟ್ಟದ ಮತದಾರ ಪಟ್ಟಿ ಸಿದ್ಧಪಡಿಸಲು ಶ್ರಮವಹಿಸಬೇಕಾಗಿದೆ. ಅದೇರೀತಿಯಲ್ಲಿ ಮತದಾ ರರ ಪಟ್ಟಿಯಲ್ಲಿನ ಹೆಸರು ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ವರ್ಗಾವಣೆಗೆ ಅವಕಾಶ ವಿದ್ದು, ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹು ದಾಗಿದೆ. ಬಿಎಲ್ಒಗಳು ಮನೆಗಳಿಗೆ ಭೇಟಿ ನೀಡುವ ಸಮಯದಲ್ಲಿ ಪಟ್ಟಿಯಲ್ಲಿ ಹೆಸರು ತಪ್ಪಾಗಿದ್ದಲ್ಲಿ ಸರಿಪಡಿಸಲು ಅವಕಾಶ ಇದೆ ಎಂದರು.

ಕೊಡುಗೆ ನೀಡಿದಂತೆ: ಎಲ್ಲಾ ಪ್ರಕ್ರಿಯೆಗಳ ಪೂರ್ಣವಾದ ನಂತರ ಶೇ.100 ದೋಷರಹಿತ ಮತದಾರ ಪಟ್ಟಿಯು ಸಿದ್ಧವಾಗಬೇಕಾಗಿದೆ. ಇದರ ಫ‌ಲಿತಾಂಶವನ್ನು 2020ರ ಚುನಾವಣೆಯಲ್ಲಿ ಕಾಣಬಹುದಾಗಿದೆ ಎಂದ ಅವರು, ದೋಷರಹಿತ ಪಟ್ಟಿಯಿಂದ ಬಿಎಲ್ಒಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಮತದಾನವಾದಲ್ಲಿ ಅ ಪ್ರಗತಿಗೆ ತಮ್ಮದೇ ಕೊಡುಗೆಯಾಗಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್‌ ವಿ.ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಪ್ರಸಾದ್‌ರೆಡ್ಡಿ, ತರಬೇತು ದಾರ ಮಂಜುನಾಯಕ್‌ ಮತ್ತಿತರರ ಇದ್ದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.