ಕೋಲಾರ: ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ


Team Udayavani, Feb 10, 2021, 3:08 PM IST

ಕೋಲಾರ: ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೋಲಾರ: ತಾಲೂಕಿನ ವಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಕೆ.ಎನ್‌.ರಾಜಣ್ಣ, ಉಪಾಧ್ಯಕ್ಷ ಸ್ಥಾನಕ್ಕೆ ಎಲ್‌.ಗೀತಮ್ಮ ಕೆಂಬೋಡಿ ಕ್ಷೇತ್ರದ ಇಬ್ಬರೂ ಆಯ್ಕೆಯಾಗಿದ್ದಾರೆ.

ತಾಲೂಕಿನ ಉರಿಗಿಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಅನು ಆಯ್ಕೆಯಾಗಿದ್ದಾರೆ. ಒಟ್ಟು 15 ಮಂದಿ ಮತಚಲಾಯಿಸಿದ್ದು, ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಾದ ರಾಜೇಶ್ವರಿ 8 ಮತ ಮತ್ತು ಅನು 8 ಮತ ಪಡೆದು ಜಯಗಳಿಸಿದ್ದಾರೆ. ತಾಲೂಕಿನ ಹೋಳೂರು ಗ್ರಾಪಂಅಧ್ಯಕ್ಷೆಯಾಗಿ ಪ್ರಿಯಾಂಕ ಬಿ.ಗೋವರ್ಧನ್‌ ಚುನಾಯಿತರಾದರೆ ಉಪಾಧ್ಯಕ್ಷರಾಗಿ ಶ್ರೀನಿವಾಸ್‌ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ ಪ.ಜಾತಿಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಪ್ರಿಯಾಂಕ ಗೋವರ್ಧನ್‌ ಹಾಗೂ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ವಾಣಿ ನಾಮಪತ್ರಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್‌ ಏಕೈಕಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಒಟ್ಟು 20 ಸದಸ್ಯ ಬಲದ ಗ್ರಾಪಂನಲ್ಲಿ ಪ್ರಿಯಾಂಕ 13 ಮತ ಪಡೆದು ಎದುರಾಳಿ ವಾಣಿ (7) ಅವರನ್ನು 5 ಮತಗಳ ಅಂತರದಿಂದ ಪರಾಭವಗೊಳಿಸಿದರು. ಅಧ್ಯಕ್ಷರಾಗಿ ಬಾಬುಮೌನಿ ಮತ್ತು ಉಪಾಧ್ಯಕ್ಷರಾಗಿಗಾಯತ್ರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೊರದೇವಂಡಹಳ್ಳಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ ಬೆಂಬಲಿತ ಪೂರ್ಣಿಮ, ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟಚಲಪತಿ ನಾಮಪತ್ರ ಸಲ್ಲಿಸಿದ್ದರು. ಎದುರಾಳಿಯಾಗಿ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಧಿಕಾರಿ ಘೋಷಿಸಿದರು. ಬೆಳಮಾರನಹಳ್ಳಿ ಪಂಚಾಯ್ತಿಯಲ್ಲಿಅಧ್ಯಕ್ಷರಾಗಿ ಚಂದ್ರಶೇಖರ್‌ ಮತ್ತು ಉಪಾಧ್ಯಕ್ಷರಾಗಿ ಶೋಭಾ ಆಯ್ಕೆಯಾಗಿದ್ದಾರೆ.

ಬಂಗಾರಪೇಟೆ: 6 ಗ್ರಾಪಂ ಕಾಂಗ್ರೆಸ್‌ ಬೆಂಬಲಿತರ ವಶಕ್ಕೆ :

ಬಂಗಾರಪೇಟೆ: ತಾಲೂಕಿನ ಆರು ಗ್ರಾಪಂಗಳಿಗೆ ಮಂಗಳವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ನಿರೀಕ್ಷೆಯಂತೆ ಆರೂಪಂಚಾಯತಿಗಳಲ್ಲಿ ಕಾಂಗ್ರೆಸ್‌ ಬೆಂಬಲಿತರೇಆಯ್ಕೆಯಾಗುವ ಮೂಲಕ ಆಡಳಿತರೂಢ ಬಿಜೆಪಿಗೆ ಹಿನ್ನಡೆ ಉಂಟಾಗುವಂತೆ ಮಾಡಿದ್ದಾರೆ.

ಹುಲಿಬೆಲೆ, ಬಲಮಂದೆ, ಗುಲ್ಲಹಳ್ಳಿ, ಆಲಂಬಾಡಿ ಜೋತೇನಹಳ್ಳಿ, ಚಿನ್ನಕೋಟೆ ಮತ್ತುಚಿಕ್ಕಅಂಕಂಡಹಳ್ಳಿ ಗ್ರಾಪಂಗೆ ಚುನಾವಣೆ ನಡೆದಿದ್ದು, 6ರಲ್ಲಿ 5 ಕಡೆ ಅವಿರೋಧ ಆಯ್ಕೆಯಾದರೆಹುಲಿಬೆಲೆ ಪಂಚಾಯತಿಯಲ್ಲಿ ಮಾತ್ರ ಚುನಾವಣೆ ನಡೆದಿದ್ದು, ಅಲ್ಲಿಯೂ ಕಾಂಗ್ರೆಸ್‌ ಬೆಂಬಲಿತ

ಅಭ್ಯರ್ಥಿ ಆರ್‌.ವಿ.ಸುರೇಶ್‌ ಮತ್ತು ಶೋಭಾರಾಣಿ ತಲಾ 7 ಮತಗಳ ಅಂತರದಿಂದ ಚುನಾಯಿತರಾಗಿ ಮಾಜಿ ಬೂದಿಕೋಟೆ ಬ್ಲಾಕ್‌ ಅಧ್ಯಕ್ಷ ಮಂಜುನಾಥಗೌಡರನ್ನು ಮಣಿಸಿದ್ದಾರೆ. ಬಲಮಂದೆ ಗ್ರಾಪಂ ಅಧ್ಯಕ್ಷ ರಾಮಪ್ಪ ಮತ್ತುಉಪಾಧ್ಯಕ್ಷೆ ಗೀತಾ, ಆಲಂಬಾರಿ ಜೋತೇನಹಳ್ಳಿ ಅಧ್ಯಕ್ಷೆ ನಾರಾಯಣಮ್ಮ, ಉಪಾಧ್ಯಕ್ಷೆ ಚೌಡಮ್ಮ, ಚಿಕ್ಕಅಂಕಂಡಹಳ್ಳಿ ಅಧ್ಯಕ್ಷ ಹರೀಶ್‌, ಉಪಾಧ್ಯಕ್ಷೆ ನಗೀನಾತಾಜ್‌, ಗುಲ್ಲಹಳ್ಳಿ ಅಧ್ಯಕ್ಷೆ ನೀಲಾಬಾಯಿ ಗೋವಿಂದರಾವ್‌, ಉಪಾಧ್ಯಕ್ಷೆ ಸುಷ್ಮಾ ಮತ್ತು ಚಿನ್ನಕೋಟೆ ಅಧ್ಯಕ್ಷ ಸುಬ್ರಹ್ಮಣಿ ಮತ್ತು ಉಪಾಧ್ಯಕ್ಷೆ ಸುನಂದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಆರೂ ಗ್ರಾಪಂ ಕಳೆದ ಅವಧಿಯಲ್ಲಿಯೂ ಸಹ ಕಾಂಗ್ರೆಸ್‌ ವಶದಲ್ಲಿತ್ತು ಎಂಬುದು ಇಲ್ಲಿನ ಗಮನಾರ್ಹ. ಸೋಮವಾರ ನಡೆದ 6 ಗ್ರಾಪಂಗಳಲ್ಲಿ 4ರಲ್ಲಿ ಕಾಂಗ್ರೆಸ್‌ ಜಯಗಳಿಸಿದ್ದರೆ, 2ರಲ್ಲಿ ಮಾತ್ರ ಬಿಜೆಪಿ ಖಾತೆ ತೆರೆದಿದೆ. ಈ ವರೆಗೂ ನಡೆದಿರುವ 12 ಪಂಚಾಯತಿ ಪೈಕಿ 10ರಲ್ಲಿ ಕಾಂಗ್ರೆಸ್‌ ಬೆಂಬಲಿಗರೇ ಅಧಿಕಾರ ಚುಕ್ಕಾಣಿ ಹಿಡಿದಿರುವುದಕ್ಕೆ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ. ಉಳಿದಿರುವ 9ರಲ್ಲಿ 8 ಕಡೆ ಕಾಂಗ್ರೆಸ್‌ ಬೆಂಬಲಿಗರುಅಧಿಕಾರ ಹಿಡಿಯಲಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದರು.

ಈ ವೇಳೆ ತಾಪಂ ಅಧ್ಯಕ್ಷ ಮಹಾದೇವ್‌, ಸದಸ್ಯಅಮರೇಶ್‌, ಬೂದಿಕೋಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುಲ್ಲಹಳ್ಳಿ ನಾಗರಾಜ್‌, ಮುಖಂಡರಾದಮುನಿಕೃಷ್ಣಪ್ಪ, ಆಲಂಬಾಡಿ ಸುರೇಶ್‌, ಮುನಿಯಪ್ಪ,ಎಂ.ಜಿ.ಪ್ರಕಾಶ್‌, ವೀಣಾ ವೆಂಕಟೇಶ್‌, ವಿಜಯಕೃಷ್ಣಪಿಡಿಒಗಳಾದ ಮಧು, ಗಂಗೋಜಿರಾವ್‌, ನಾರಾಯಣಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.