ಜಿಪಂ: ಮಧ್ಯವರ್ತಿಗಳ ಹಾವಳಿ ತಪ್ಪಿಸಿ
Team Udayavani, Feb 13, 2021, 4:08 PM IST
ಕೋಲಾರ: ಸರ್ಕಾರದಿಂದ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಜಾರಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಸರ್ಕಾರಿಸೌಲಭ್ಯಗಳ ಪ್ರಯೋಜನ ಪೂರ್ಣ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದುಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸೂಚಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಜಿಲ್ಲೆಯಲ್ಲಿ ಪಶುಸಂಗೋಪನೆ ಜೊತೆಗೆ ಕೋಳಿ ಸಾಕಾಣಿಕೆಹೆಚ್ಚಾಗಿ ಮಾಡಲಾಗುತ್ತದೆ. ಕೋಳಿಸಾಕಾಣಿಕೆದಾರರೊಂದಿಗೆ ಕಂಪನಿಗಳುಒಪ್ಪಂದ ಮಾಡಿಕೊಂಡಿದ್ದು, ಸಾಕಾಣಿಕೆಗೆಕೋಳಿ ಮರಿಗಳನ್ನು ನೀಡದೆ, ಕಿರುಕುಳನೀಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು,ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಗತಿ ಸಾಧಿಸಿ: ಕೋವಿಡ್ ಲಸಿಕೆ ಬಗ್ಗೆ ತಪ್ಪು ತಿಳುವಳಿಕೆಯಿಂದಾಗಿ ನೋಂದಾಯಿಸಿರುವಸಿಬ್ಬಂದಿಗಳು ಸಹ ಲಸಿಕೆ ಪಡೆಯಲುಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಸೂಕ್ತ ಅರಿವುಮೂಡಿಸಿ ಲಸಿಕೆ ನೀಡುವಲ್ಲಿ ಗಣನೀಯ ಪ್ರಗತಿ ಸಾಧಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲಕ್ಕೆ ವೇತನ: ರಸ್ತೆ ಬದಿ ನೆಟ್ಟಿರುವ ಗಿಡಗಳಿಗೆ ನೀರು ಹಾಕಿ ಪೋಷಣೆ ಮಾಡುವ ಕೆಲಸ ಮಾಡಬೇಕು. ಅರಣ್ಯ ಇಲಾಖೆವತಿಯಿಂದ ಗಿಡಗಳ ಪೋಷಣೆಗೆನೇಮಿಸಿರುವ ಕಾರ್ಮಿಕರಿಗೆ ಸಕಾಲದಲ್ಲಿವೇತನ ಪಾವತಿ ಮಾಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಗಳಲ್ಲಿ ಅಧಿಕಾರಿಗಳು ಹಾಜರಿರಲಿ: ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಗೆ ಅಧಿಕಾರಿಗಳು ತಮ್ಮಪರವಾಗಿ ಯಾರನ್ನು ನಿಯೋಜಿಸದೇ ತಾವೇಹಾಜರಾಗಬೇಕು. ಜಿಲ್ಲಾ ಪಂಚಾಯತ್ಸಭೆಗಳಲ್ಲಿ ಜಿಲ್ಲೆಯ ಪ್ರಮುಖ ವಿಷಯಗಳಕುರಿತು ಚರ್ಚೆ ಹಾಗೂ ಅಭಿವೃದ್ಧಿ ಕುರಿತ ಮಹತ್ವವಾದ ಅಂಶಗಳನ್ನುಚರ್ಚಿಸಲಾಗುತ್ತದೆ ಎಂದು ತಿಳಿಸಿದರು.
ಬೇಕಾದವರಿಗೆ ಗುತ್ತಿಗೆ: ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಅರುಣ್ಪ್ರಸಾದ್ ಮಾತನಾಡಿ, ಬೆಟ್ಟೆಬೆಣೆಜೇನಹಳ್ಳಿ ಶಾಲೆಯು ಕುಸಿಯುವ ಸ್ಥಿತಿಯಲ್ಲಿದೆ.ಹಲವಾರು ಸಭೆಗಳಲ್ಲಿ ಈ ಬಗ್ಗೆ ಮಾಹಿತಿನೀಡಲಾಗಿದ್ದು, ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರೂ ದುರಸ್ತಿ ಮಾಡಿಸಿಲ್ಲ.ಅಂಬೇಡ್ಕರ್ ಭವನಗಳ ನಿರ್ಮಾಣಕಾಮಗಾರಿಗಳನ್ನು ನಿರ್ಮಿತಿ ಕೇಂದ್ರಕ್ಕೆವಹಿಸಿದ್ದು, ಅವರು ತಮಗೆ ಬೇಕಾದಗುತ್ತಿಗೆದಾರರಿಗೆ ನೀಡುತ್ತಿದ್ದಾರೆ ಆರೋಪಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಇರುವ ಯೋಜನೆಗಳು ಹಾಗೂ ಅವುಗಳ ಪ್ರಗತಿ ಅಂಕಿಅಂಶಗಳ ಮಾಹಿತಿಯನ್ನು ಸಭೆಗೆ ನೀಡಿದರು.ಸಭೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಲ್ ಪಾವತಿಸಿದರೂ ಶಾಲೆಗಳಿಗೆ ಪೀಠೊಪಕರಣ ಸರಬರಾಜು ಆಗಿಲ್ಲ : ಶಿಕ್ಷಣ ಇಲಾಖೆಯಿಂದ ಪೀಠೊಪಕರಣಗಳ ಖರೀದಿಗೆ ಟೆಂಡರ್ ಆಗಿದ್ದರೂ ಟೆಂಡರ್ದಾರರು ಪೀಠೊಪಕರಣಗಳನ್ನು ಶಾಲೆಗಳಿಗೆ ಸರಬರಾಜು ಮಾಡಿರುವುದಿಲ್ಲ. ಆದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಿಲ್ ಪಾವತಿ ಮಾಡಿದ್ದು, ಈ ಸಂಬಂಧ ತಪ್ಪಿತಸ್ಥರ ಮೇಲೆ
ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾ ಸಿಇಒ ಎನ್.ಎಂ.ನಾಗರಾಜ್ ಸೂಚಿಸಿದರು. ಇಲಾಖೆಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಪಿ.ಆರ್.ಇ.ಡಿ ಗೆ ನೀಡಿ ಸುಮ್ಮನಿರುವುದು ಸೂಕ್ತವಲ್ಲ. ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆ ಮಾಡಿ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕಟ್ಟಡ ಕಾರ್ಮಿಕರು ಕಾರ್ಮಿಕಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಪಂಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ ಅನುದಾನ ಮೀಸಲಿಡಬೇಕು ಎಂದು ಸಿಇಒ ಎನ್.ಎಂ.ನಾಗರಾಜ್ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್