1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ


Team Udayavani, Jan 23, 2022, 2:29 PM IST

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

ಕೋಲಾರ: ಡಿಸಿಸಿ ಬ್ಯಾಂಕಿನಲ್ಲಿ ಠೇವಣಿ ಇಡುವ ಮೂಲಕ ಕಷ್ಟಕಾಲದಲ್ಲಿ ಅವಿಭಜಿತ ಜಿಲ್ಲೆಯ ರೈತರ 1500 ಕೋಟಿ ರೂ. ಬೆಳೆಸಾಲದ ಬೇಡಿಕೆ ಈಡೇರಿಸುವ ಶಕ್ತಿ ತುಂಬುವಂತೆ ಸಾರ್ವಜನಿಕರಲ್ಲಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು.

ನಗರದ ಬ್ಯಾಂಕಿನ ಸಭಾಂಗಣದಲ್ಲಿ ಶನಿವಾರಡಿಸಿಸಿ ಬ್ಯಾಂಕಿನ ಠೇವಣಿ ಸಂಗ್ರಹದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡೂ ಜಿಲ್ಲೆಯಲ್ಲಿ ಒಳ್ಳೆಯ ಮಳೆಯಾಗಿದೆ,ಕೆರೆಗಳು ತುಂಬಿದ್ದು, ಬೆಳೆ ಇಡುವ ತವಕದಲ್ಲಿ ರೈತರಿದ್ದಾರೆ ಎಂದು ಹೇಳಿದರು.

ರೈತರಿಗೆ ಕಷ್ಟಕಾಲದಲ್ಲಿ ನೆರವಾಗುವ ಅಗತ್ಯವಿದೆ,ಉತ್ತಮ ಮಳೆ, ಕೆರೆಗಳ ಭರ್ತಿಯಿಂದ ಅಂತರ್ಜಲವೃದ್ಧಿಯಾಗಿ ಕೊಳವೆ ಬಾವಿಗಳಲ್ಲೂ ನೀರು ಬಂದಿದೆ. ಇಂತಹ ಸಂದರ್ಭದಲ್ಲಿ ರೈತರು ಬೆಳೆಯಿಡಲು ಖಾಸಗಿಲೇವಾದೇವಿದಾರರ ಶೋಷಣೆಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ತಿಳಿಸಿದರು.

3.16 ಕೋಟಿ ರೂ. ಠೇವಣಿ: ನಮ್ಮ ಜಿಲ್ಲೆಯವರಲ್ಲದಿದ್ದರೂ, ಕೋಲಾರ ಡಿಸಿಸಿ ಬ್ಯಾಂಕ್‌ ಮಹಿಳೆಯರಿಗೆ ಹಾಗೂ ರೈತರಿಗೆ ನೆರವಾಗುತ್ತಿರುವುದನ್ನು ಕಂಡು ಹೊಸಕೋಟೆಯ ವ್ಯಕ್ತಿಯೊಬ್ಬರು 3.16ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ಹೆದ್ದಾರಿ ಅಗಲೀಕರಣದಿಂದಾದ ಭೂಸ್ವಾ ಧೀನಕ್ಕೆ ಸಿಕ್ಕ ಪರಿಹಾರದಹಣವನ್ನು ತಮ್ಮ ಡಿಸಿಸಿ ಬ್ಯಾಂಕ್‌ ಮೇಲಿನ ನಂಬಿಕೆ,ಧೈರ್ಯದಿಂದ ಠೇವಣಿ ಇಡಲು ಮುಂದೆ ಬಂದಿದ್ದು,ಜಿಲ್ಲೆಯಲ್ಲಿನ ಠೇವಣಿ ದಾರರಿಗೆ ಆದರ್ಶವಾಗಿದ್ದಾರೆ ಎಂದು ಹೇಳಿದರು.

ಉಳ್ಳುವರು ಮುಂದೆ ಬರಲಿ: ಇಂತಹ ಇಚ್ಛಾಶಕ್ತಿ ಜಿಲ್ಲೆಯಲ್ಲಿನ ಉಳ್ಳವರಿಗೆ ಬರಬೇಕು, ನಾವು ಉಳಿತಾಯ ಮಾಡುವ ಹಣಕ್ಕೆ ಬಡ್ಡಿ ಬರುವುದು ಮಾತ್ರವಲ್ಲ, ಮತ್ತಷ್ಟು ರೈತರ ಬದುಕು ಹಸನಾಗಲು ಕಾರಣವಾಗುತ್ತದೆ ಎಂಬ ಸತ್ಯ ಅರಿತು ಡಿಸಿಸಿ ಬ್ಯಾಂಕಿನಲ್ಲಿಠೇವಣಿ ಇಡಲು ಮುಂದೆ ಬರಬೇಕು ಎಂದರು. ಡಿಸಿಸಿ ಬ್ಯಾಂಕಿನಲ್ಲಿ ಇಡುವ ಠೇವಣಿಗೆ ಇತರೆಲ್ಲಾ ಬ್ಯಾಂಕುಗಳಿಗಿಂತ ಹೆಚ್ಚಿನ ಬಡ್ಡಿ ನೀಡಲಾಗುತ್ತದೆಮತ್ತು ನಿಮ್ಮ ಹಣದಿಂದ ರೈತರು, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ನೆರವು ಒದಗಿಸುವ ಕೆಲಸ ಆಗುವುದರಿಂದ ಸಾರ್ಥಕತೆ ಇದೆ ಎಂದು ಹೇಳಿದರು.

ರೈತರಿಗೆ ನೆರವಾಗಿ: ನಿಮ್ಮ ಹಣಕ್ಕೆ ಸುರಕ್ಷತೆಯ ಖಾತರಿ ನೀಡಲಾಗುತ್ತದೆ. ಸಮಾಜದ ಪ್ರತಿಯೊಬ್ಬರೂ ಡಿಸಿಸಿಬ್ಯಾಂಕಿನಲ್ಲೇ ಠೇವಣಿ ಇಡುವ ಮೂಲಕ ರೈತರಿಗೆನೆರವಾಗಿ, ದಶಕದ ಹಿಂದೆ ಬ್ಯಾಂಕ್‌ ಸಂಕಷ್ಟಕ್ಕೆಸಿಲುಕಿತ್ತು ಎಂಬ ಒಂದೇ ಆರೋಪ ಬೇಡ, ನಮ್ಮಆಡಳಿತ ಮಂಡಳಿ ಬಂದ ನಂತರ ಈಗ ಇತರೆಲ್ಲಾವಾಣಿಜ್ಯ ಬ್ಯಾಂಕುಗಳಿಗಿಂತಲೂ ಡಿಸಿಸಿ ಬ್ಯಾಂಕ್‌ ಸದೃಢವಾಗಿದೆ ಎಂದು ವಿವರಸಿದರು.

ಸರ್ಕಾರದಿಂದ ಹಣ ಬರಲ್ಲ: ಸರ್ಕಾರದಿಂದ ಡಿಸಿಸಿ ಬ್ಯಾಂಕಿಗೆ ಹಣ ಬರುತ್ತದೆ ಎಂಬ ಕಲ್ಪನೆ ತಲೆಯಲ್ಲಿದ್ದರೆತೆಗೆದುಹಾಕಿ, ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದಸಾಲ ವಿತರಿಸಲು ನಯಾಪೈಸೆ ಹಣ ಬರುವುದಿಲ್ಲಎಂದು ಸ್ಪಷ್ಟಪಡಿಸಿದ ಅವರು, ನಮ್ಮ ಠೇವಣಿಸಂಗ್ರಹದ ಆಧಾರದ ಮೇಲೆ ನಮಗೆ ನಬಾರ್ಡ್‌,ಅಪೆಕ್ಸ್‌ ಬ್ಯಾಂಕ್‌ ಸಾಲ ನೀಡುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಠೇವಣಿ ಸಂಗ್ರಹದ ಗುರಿಸಾಧನೆ ಮಾಡುವಂತೆ ಅವಿಭಜಿತ ಜಿಲ್ಲೆಯ ಎಲ್ಲಾಡಿಸಿಸಿ ಬ್ಯಾಂಕ್‌ ಶಾಖೆಗಳ ಸಿಬ್ಬಂದಿ ಅಧಿಕಾರಿಗಳಿಗೆತಾಕೀತು ಮಾಡಿದ ಅವರು, ಇದು ಜನರ ಬ್ಯಾಂಕ್‌ಎಂಬ ಭಾವನೆ ಬಲಗೊಳಿಸಿ, ಜನರ ಮನವೊಲಿಸಿ ಠೇವಣಿ ಹೆಚ್ಚಿಸಿ ಎಂದು ವಿವರಿಸಿದರು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ನಾಗನಾಳ ಸೋಮಣ್ಣ, ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್‌, ಎಜಿಎಂಗಳಾದ ಬೈರೇಗೌಡ, ಖಲೀಮುಲ್ಲಾ, ನಾಗೇಶ್‌, ದೊಡ್ಡಮನಿ, ಯಲ್ಲಪ್ಪರೆಡ್ಡಿ,ಬೇಬಿ ಶ್ಯಾಮಿಲಿ, ಅಮ್ಜದ್‌ಖಾನ್‌, ಅರುಣ್‌ ಕುಮಾರ್‌, ತಿಮ್ಮಯ್ಯ ಭಾನುಪ್ರಕಾಶ್‌, ಶುಭಾ,ಪದ್ಮಮ್ಮ, ಶೃತಿ, ವಿ-ಸಾಫ್ಟ್‌ನ ವಿಶ್ವಪ್ರಸಾದ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.