ಆಸ್ತಿ ನೋಂದಣಿ: ರೆಡ್ ಝೋನ್ನವರೇ ಹೆಚ್ಚು
Team Udayavani, Apr 28, 2020, 5:31 PM IST
ಸಾಂದರ್ಭಿಕ ಚಿತ್ರ
ಮಾಲೂರು: ಸರ್ಕಾರದ ನಿಯಮದಂತೆ ತಾಲೂಕು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಸ್ತಿ ಮತ್ತು ವಿವಾಹ ನೋಂದಣಿ ಕಾರ್ಯವನ್ನು ಆರಂಭಿಸಿದ್ದು, ನೋಂದಣಿಗಾಗಿ ಬಂದ ಬಹುಪಾಲ ಜನರು ಬೆಂಗಳೂರಿನ ವಿವಿಧೆಡೆಗಳಿಂದ ಬಂದವರೇ ಹೆಚ್ಚು. ಕೋವಿಡ್ ಸೋಂಕು ಗಂಭೀರ ಸ್ವರೂಪದಲ್ಲಿರುವ ಕಾಲಘಟ್ಟದಲ್ಲಿಯೇ ಹಸಿರು ವಲಯವಾಗಿರುವ ತಾಲೂಕಿನಲ್ಲಿಯೂ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯಾರಂಭಕ್ಕೆ ಅವಕಾಶ ಕಲ್ಪಿಸಿದ್ದು, ಕಾಗದ ಪತ್ರ, ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಸೋಮವಾರ ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿಗೆ ಬಂದು ಬಹುಪಾಲು ಜನರು ಬೆಂಗಳೂರು ಸುತ್ತಮುತ್ತಲಿನ ಪ್ರದೇಶದವರೇ ಆಗಿದ್ದು, ಆ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಿದ್ದು, ಕೆಂಪು ವಲಯವಾಗಿ ಗುರುತಿಸಿಕೊಂಡಿರುವ ಕಾರಣ ಉಪನೋಂದಣಾಧಿಕಾರಿಗಳ ಕಚೇರಿಯ ಸಿಬ್ಬಂದಿ, ಸ್ಥಳೀಯರು ಆತಂಕದಲ್ಲಿದ್ದಾರೆ.
ಈ ಬಗ್ಗೆ ತಮ್ಮ ಹೆಸರು ಬಹಿರಂಗ ಪಡಿಸಲು ಇಚ್ಚಿಸದ ಕಚೇರಿಯ ಸಿಬ್ಬಂದಿಯೊಬ್ಬರು ಮಾತನಾಡಿ, ಸಾರ್ ಇಲ್ಲಿನ ಅಧಿಕಾರಿಗಳು ಹೊರಗಿನವರನ್ನು ಕರೆಸಿಕೊಂಡು ನೋಂದಣಿ
ಮಾಡುತ್ತಿರುವ ಕಾರಣಗಳಿಂದ ಬೆಂಗಳೂರು ಸುತ್ತಮುತ್ತಲಿನಿಂದ ನೋಂದಣಿದಾರರ ಹೆಚ್ಚಾಗಿ ಬಂದಿದ್ದಾರೆ. ನಾವುಗಳು ಸಹ ಮನುಷ್ಯರೇ ನಮಗೂ ಜೀವ ಇದೆ. ಕುಟುಂಬಗಳಿವೆ, ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು. ಈ ಬಗ್ಗೆ ಸ್ಥಳೀಯ ಪತ್ರಬರಹಗಾರರು ಅಧಿಕಾರಿಗಳನ್ನು ಪ್ರಶ್ನಿಸಿದಲ್ಲಿ ಆನ್ಲೈನ್ನಲ್ಲಿ ದಾಖಲೆಗಳು ಬಂದಿರುವುದಾಗಿ ಅಧಿಕಾರಿಗಳು ಉತ್ತರಿಸುತ್ತಿದ್ದಾರೆ. ಡೀಸಿ ನಿರ್ದೇಶನದಂತೆ ನೋಂದಣಿ ಮಾಡಲಾಗುತ್ತಿದೆ ಎಂದು ಉಪನೋಂದಣಾಧಿಕಾರಿ ಪದ್ಮಾವತಿ ಹೇಳಿದ್ದಾರೆ.
ಮಾಲೂರು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಬೆಂಗಳೂರು ಸುತ್ತಮುತ್ತಲಿನವರ ದಾಖಲೆ ನೋಂದಾಯಿಸುತ್ತಿರುವ ಬಗ್ಗೆ ಆರಂಭದಲ್ಲಿ ತಹಶೀಲ್ದಾರ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಸ್ಥಳೀಯ ಉಪನೋಂದಣಾಧಿಕಾರಿಗಳು ಎರಡು ದಾಖಲೆ ನೋಂದಣಿಗೆ ಮುಂದಾಗಿದ್ದಾರೆ. ಅಂತಿಮವಾಗಿ ಜಿಲ್ಲೆಯ ಹಸಿರು ವಲಯದ ವಾಸಿಗಳ ಪತ್ರ ಮಾತ್ರ ನೋಂದಣಿಗೆ ಡೀಸಿ ನಿರ್ದೇಶನ ನೀಡಿದ್ದಾರೆ.
●ಗೋವಿಂದ ಸ್ವಾಮಿ, ಅಧ್ಯಕ್ಷ, ಸಮತಾ ಸೈನಿಕ ದಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?