ತೆಲಂಗಾಣದಿಂದ ಕರೆತಂದಿದ್ದ 11 ಜೀತದಾಳುಗಳ ರಕ್ಷಣೆ


Team Udayavani, Aug 21, 2019, 5:42 PM IST

kolar-tdy-02

ಮುಳಬಾಗಿಲು: ಉಪಗುತ್ತಿಗೆದಾರನೊಬ್ಬ ತೆಲಂಗಾಣದ ಮೆಹಬೂಬನಗರದಿಂದ 11 ಜನರನ್ನು ಜೀತಕ್ಕೆ ಕರೆತಂದು ತಾಲೂಕಿನ ಸರ್ಕಾರಿ ಪದವಿ ವಸತಿ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದು, ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಎಸಿ ಸೋಮಶೇಖರ್‌ ಸಮ್ಮುಖದಲ್ಲಿ ಬಿಡುಗಡೆ ಮಾಡಿಸಿತು.

ತಾಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದ ಬಳಿ ಸರ್ಕಾರ ಪದವಿ ವಸತಿ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವನ್ನು ಆಂಧ್ರ ಮೂಲದ ಉಪಗುತ್ತಿಗೆದಾರ ರಾಮಾನಾಯ್ಕ, ವೆಂಕಟ್ನಾಯ್ಕ ಗುತ್ತಿಗೆ ಪಡೆದಿದ್ದರು. ಮಹಬೂಬ್‌ನಗರದ ನಾಯಕ ಜನಾಂಗಕ್ಕೆ ಸೇರಿದ ಅಪ್ರಾಪ್ತರು ಒಳಗೊಂಡ 11 ಜನರಿದ್ದ 3 ಕುಟುಂಬಗಳನ್ನು ತಲಾ 60 ಸಾವಿರ ರೂ.ನಂತೆ 3 ವರ್ಷಗಳಿಂದ ಆಂಧ್ರ, ತಮಿಳುನಾಡು, ಕರ್ನಾಟಕ, ಮುಂತಾದ ಸ್ಥಳಗಳಲ್ಲಿ ದುಡಿಸಿ ಕೊಳ್ಳುತ್ತಿದ್ದರು. ತಿಂಗಳಿಗೆ ಸಾವಿರ ರೂ. ನೀಡಿ ಜೀತಕ್ಕೆ ಇಟ್ಟುಕೊಂಡಿದ್ದರು ಎಂಬ ಮಾಹಿತಿ ಆಂಧ್ರದ ಜೀತ ಪದ್ಧತಿ ನಿರ್ಮೂಲನಾ (ಐಜೆಎಂ) ಎನ್‌ಜಿಒ, ಬೆಂಗಳೂರಿನ ಮುಕ್ತಿ ಒಕ್ಕೂಟ ಬೃಂದಾ ಅಡುಗೆ ಅವರಿಗೆ ನೀಡಿತ್ತು.

ಕಾರ್ಮಿಕರ ವಿಚಾರಣೆ: ಅದರಂತೆ ಕಾರ್ಯ ಪ್ರವೃತ್ತರಾದ ಬೆಂಗಳೂರಿನ ಮುಕ್ತಿ ಒಕ್ಕೂಟ, ಕಂದಾಯ, ಪೊಲೀಸ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಅದರಂತೆ ಮಂಗಳವಾರ ಸಂಜೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ತಂಡ ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ತಲ್ಲೀನರಾಗಿದ್ದ ಕಾರ್ಮಿಕರನ್ನು ವಿಚಾರಣೆ ಮಾಡಿದರು.

ಅಳಲು ತೋಡಿಕೊಂಡ ಮಹಿಳೆ: ಗುತ್ತಿಗೆದಾರರು ನಮಗೆ ಕೆಲಸ ನೀಡುವುದಾಗಿ ತಿಳಿಸಿ, ಪರಿಚಯ ವಿಲ್ಲದ ಪ್ರದೇಶಗಳಿಗೆ ಕರೆತಂದು ಸರಿಯಾಗಿ ಊಟ ಉಪಚಾರವಿಲ್ಲದೆ ಉಳಿಯುವುದಕ್ಕೆ ವಸತಿ ಇಲ್ಲದೆ, ದುಡಿಯುತ್ತಿದ್ದೇವೆ ಎಂದು ಕಾರ್ಮಿಕ ಮಹಿಳೆ ಸತ್ಯಮ್ಮ ಅಧಿಕಾರಿಗಳ ಬಳಿ ತನ್ನ ಅಳಲು ತೋಡಿಕೊಂಡರು.

ಜೀತದಾಳುಗಳು ತವರಿಗೆ: ಈಗಾಗಲೇ 11 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಇವರ ಬಗ್ಗೆ ಮುಂಜಾಗ್ರತೆ ವಹಿಸಲು ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿರುತ್ತೇವೆ ಎಂದು ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌ ತಿಳಿಸಿದರು. ಪ್ರಕರಣ ದಾಖಲಿಸಿಕೊಂಡ ನಂತರ ವಶಕ್ಕೆ ಪಡೆದ ಎಲ್ಲ ಜೀತದಾಳುಗಳನ್ನು ಎಸಿ ಸೋಮಶೇಖರ್‌ ಮುಂದೆ ಹಾಜರು ಪಡಿಸಿ, ಜೀತದಿಂದ ವಿಮುಕ್ತಿಗೊಳಿಸಿ ಅವರ ತವರಿಗೆ ಕಳುಹಿಸಿಕೊಟ್ಟರು. ಪಿಎಸ್‌ಐ ಕೆ.ವಿ.ಶ್ರೀಧರ್‌, ಬೆಂಗಳೂರು ಮುಕ್ತಿ ಒಕ್ಕೂಟ, ಬೃಂದಾ ಅಡುಗೆ, ಐಕ್ಯಮತ್ಯ ಒಕ್ಕೂಟ, ಎನ್‌ಎಎಸ್ಸಿ ಡಾ.ಕೃಷ್ಣನ್‌, ರಾಜಸ್ವ ನಿರೀಕ್ಷಕ ಸುಬ್ರಮಣ್ಯಂ, ಆರ್‌.ಬಲರಾಮಕೃಷ್ಣ, ಕಾರ್ಮಿಕ ಉಪ ನಿರೀಕ್ಷಕ ಲೋಕೇಶ್‌, ಕೋಲಾರ ಮಹಿಳಾ ಮತ್ತು ಮಕ್ಕಳ ಇಲಾಖೆ ನಂದನ, ಪೇದೆ ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.