ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ


Team Udayavani, Dec 12, 2019, 4:13 PM IST

kolar-tdy-1

ಮುಳಬಾಗಿಲು: ನೋಂದಣಿ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ದಲ್ಲಾಳಿಗಳಿಗೆ ಕಡಿವಾಣ, ಅಕ್ರಮಗಳಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ನೋಂದಣಿ ಇಲಾಖೆ ಎದುರು ಪ್ರತಿಭಟನೆ ನಡೆಸಿ, ಉಪ ನೋಂದಣಾಧಿಕಾರಿ ಬೈರಾರೆಡ್ಡಿಗೆ ಮನವಿ ಸಲ್ಲಿಸಿದರು.

ದಲ್ಲಾಳಿಗಳಿಂದ ನೋಂದಣಿ ಕಚೇರಿ ರಕ್ಷಿಸಿ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಸರ್ಕಾರಿ ಗೋಮಾಳ ಗುಂಡು, ತೋಪು, ಕೆರೆ ಹಾಗೂ ಪಿ ನಂಬರ್‌ ಹೊಂದಿರುವ ಜಮೀನು ಮತ್ತು ಸರ್ಕಾರದಿಂದ ಮಂಜೂರಾಗಿರುವ 50, 53, 57 ನಮೂನೆ ಜಮೀನುಗಳನ್ನು 15 ವರ್ಷ ಮಾರಾಟ ಹಾಗೂ ನೋಂದಣಿ ಮಾಡ ಬಾರದು ಎಂದು ಸರ್ಕಾರದ ಆದೇಶವಿದೆ. ಆದರೆ ನೋಂದಣಿ ಕಚೇರಿಯಲ್ಲಿ ಅಧಿಕಾರಿಗಳು ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜತೆಗೆ ಕಾರ್ಪೋರೇಟ್‌ ಹಾಗೂ ರಿಯಲ್‌ ಎಸ್ಟೇಟ್‌ ದಂಧೆಕೋರರು, ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ವ್ಯಾಪಕ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇದರಿಂದ ಬಡವರು, ಒಂದು ಗುಂಟೆ ಜಮೀನು ನೋಂದಣಿ ಮಾಡಿಸಬೇಕಾದರೆ, ನೂರೆಂಟು ಕಾನೂನು ಹೇಳಿ ವಾಪಸ್‌ ಕಳುಹಿಸಿದ್ದಾರೆ. ಆದರೆ ಬಡವರು ದಲ್ಲಾಳಿಗಳ ಮೂಲಕ ಹಣ ಖರ್ಚು ಮಾಡಿಕೊಂಡು ಬಂದರೆ ಅಡೆ ತಡೆಯಿಲ್ಲದೇ ಕೆಲಸ ಮಾಡಿಕೊಡುತ್ತಾರೆ. ಮೂಲಕ ನೋಂದಣಿ ಇಲಾಖೆಯನ್ನು ಅಡವಿಟ್ಟಿದ್ದಾರೆ. ಇದರಿಂದ ಬಡವರು ತಮ್ಮ ಸಣ್ಣ ಕೆಲಸಗಳಿಗಾಗಿ ದಲ್ಲಾಳಿಗಳ ಹಿಂದೆ ತಿರುಗಬೇಕಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಅಧಿಕಾರಿಗಳು ದಲ್ಲಾಳಿಗಳೊಂದಿಗೆ ಶಾಮೀಲು: ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌ ಮಾತನಾಡಿ, ಜಮೀನಿನ ಬೆಲೆಗೆ ತಕ್ಕಂತೆ ಸರ್ಕಾರಕ್ಕೆ ಶುಲ್ಕ ಪಾವತಿಸಬೇಕು. ಆದರೆ ಕೋಟಿ ರೂಪಾಯಿ ಬೆಲೆ ಬಾಳುವ ಜಮೀನಿಗೆ 10 ಲಕ್ಷ ಬೆಲೆ ತೋರಿಸಿ, 90 ಲಕ್ಷಕ್ಕೆ ಸರ್ಕಾರಕ್ಕೆ ಬರುವ ಆದಾಯವನ್ನು ಅಧಿಕಾರಿಗಳು ಮತ್ತು ದಲ್ಲಾಳಿಗಳು ಹಂಚುಕೊಳ್ಳುತ್ತಿದ್ದಾರೆ. ಅದರ ಜೊತೆಗೆ ನೋಂದಣಿಗೆ ಬರುವ ಜನ ಸಾಮಾನ್ಯರಿಗೆ ಮೂಲಭೂತ ಸೌಕರ್ಯಗಳಿಲ್ಲ. ಜೊತೆಗೆ ಅಧಿಕಾರಿಗಳು, ಬಡವರ ಜಮೀನು ನೋಂದಣಿ ಮಾಡಬೇಕಾದರೆ ಸರ್ವರ್‌ ಸಮಸ್ಯೆ ಹಾಗೂ ನೂರೊಂದು ಸಮಸ್ಯೆ ಹೇಳುತ್ತಾರೆ. ಆದರೆ ದಲ್ಲಾಲಿಗಳು ಕಮೀಷನ್‌ ನೀಡಿದರೆ, ಅವರಿಗೆ ರಾಜ ಮರ್ಯಾದೆ ನೀಡುತ್ತಾರೆ. ಜತೆಗೆ ನೋಂದಣಿ ಮಾಡಿಕೊಡಲು ಸರ್ವರ್‌ ಸಮಸ್ಯೆ ಇರುವುದಿಲ್ಲವೆ? ಎಂದು ಪ್ರಶ್ನಿಸಿದರು.

ಬಾರಿಕೋಲು ಚಳವಳಿ ಎಚ್ಚರಿಕೆ: ಅಲ್ಲದೆ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಬೇಕು. ಕಚೇರಿಯನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಬೇಕು ಹಾಗೂ ಬಡವರ ಮತ್ತು ಜನಸ್ನೇಹಿಯಾಗಿ ಪರಿವರ್ತಿಸಬೇಕು. ಇಲ್ಲವಾದರೆ ನೋಂದಣಿ ಇಲಾಖೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಬಾರಿಕೋಲು ಚಳವಳಿ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ತಾಲೂಕು ಅಧ್ಯಕ್ಷ ಪಾರುಕ್‌ ಪಾಷ, ಯಲುವಹಳ್ಳಿ ಪ್ರಭಾಕರ್‌, ರಾಜೇಶ್‌ಕಲೆ, ವಿಜಯ್‌ಪಾಲ್‌, ಅಣ್ಣೆಹಳ್ಳಿ ನಾಗರಾಜ್‌, ವೆಂಕಟರವಣಪ್ಪ, ನವೀನ್‌, ಕೇಶವ, ಸಾಗರ್‌, ಸುಪ್ರಿಂ ಚಲ, ಜುಬೇರ್‌ಪಾಷ, ಸಾಗರ್‌, ವೇಣು, ನವೀನ್‌, ರಂಜಿತ್‌ ಸುಧಾಕರ್‌, ನಂಗಲಿ ಕಿಶೋರ್‌, ಶಿವ, ಮಂಗಸಂದ್ರ ವೆಂಕಟೇಶಪ್ಪ, ತೆರ್ನಹಳ್ಳಿ ಆಂಜಿನಪ್ಪ, ಸಹದೇವಣ್ಣ, ಮೀಸೆ ವೆಂಕಟೇಶಪ್ಪ, ಹೊಸಹಳ್ಳಿ ವೆಂಕಟೇಶ್‌, ಈಕಂಬಳ್ಳಿ ಮಂಜುನಾಥ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.