ಹದಗೆಟ್ಟ ರಸ್ತೆ ಗುಂಡಿ ಸರಿಪಡಿಸಿ


Team Udayavani, May 22, 2022, 3:19 PM IST

ಹದಗೆಟ್ಟ ರಸ್ತೆ ಗುಂಡಿ ಸರಿಪಡಿಸಿ

ಬಂಗಾರಪೇಟೆ: ಹದಗೆಟ್ಟಿರುವ ಬಂಗಾರಪೇಟೆ, ಕೆ.ಜಿ.ಎಫ್‌, ರಸ್ತೆಯ ಗುಂಡಿಗಳಿಗೆ ವಿಮುಕ್ತಿ ನೀಡಿ, ಜನ ಸಾಮಾನ್ಯರ ಅಮೂಲ್ಯ ಜೀವವನ್ನು ಉಳಿಸಬೇಕೆಂದು ರೈತ ಸಂಘದಿಂದ ದೇಶಿಹಳ್ಳಿ ಕೆರೆ ಮುಂದೆ ರೋಜ ಹೂಗಳನ್ನು ಅಧಿಕಾರಿಗಳಿಗೆ ನೀಡುವ ಮೂಲಕ ಹೋರಾಟ ಮಾಡಿಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಕೆರೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು, ವಾಣಿಜ್ಯ ಮಳಿಗೆ ಹಾಗೂ ಕಲ್ಯಾಣ ಮಂಟಪಗಳನ್ನು ನಿರ್ಮಾಣ ಮಾಡಿ ಮಳೆ ನೀರು,ಕೆರೆಗೆ ಹರಿಯದೆ ಜನ ಸಾಮಾನ್ಯರ ಮನೆತೋಟಗಳಿಗೆ ಹಾಗೂ ರಸ್ತೆಗಳಿಗೆ ನುಗ್ಗಿ ಬಡವರಬದುಕನ್ನು ಕಸಿದುಕೊಳ್ಳುತ್ತಿರುವ ಶ್ರೀಮಂತರ ವಿರುದ್ದ ಕ್ರಮ ಕೈಗೊಳ್ಳದೆ ಮೌವಾಗಿರುವ ತಾಲೂಕು ಆಡಳಿತದ ವಿರುದ್ಧ, ಜನ ಸಾಮಾನ್ಯ ಆಕ್ರೋಶ ವ್ಯಕ್ತವಾಗುತ್ತದೆ. ತಾಲೂಕು ಆಡಳಿತಕ್ಕೆ ಹಾಗೂ ಸ್ಥಳೀಯ ಶಾಸಕರಿಗೆ ತಾಕತ್ತಿದ್ದರೆ. ಬಡವರ ಬದುಕು ಕಸಿಯುತ್ತಿರುವ ಶ್ರೀಮಂತರ ಆಸ್ತಿ ಹರಾಜು ಹಾಕಿ ಬಡವರಿಗೆ ಪರಿಹಾರ ನೀಡಲಿ ಎಂದು ಸ್ಥಳೀಯ ಶಾಸಕರಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ ಸವಾಲು ಹಾಕಿದರು.

ಹದಗೆಟ್ಟಿರುವ ಬಂಗಾರಪೇಟೆ ಕೆಜಿಎಫ್ ಮುಖ್ಯ ರಸ್ತೆಯಲ್ಲಿ ಜನ ಸಾಮಾನ್ಯರು ಸಂಚರಿಸಬೇಕಾದರೆ ಯಮಧರ್ಮರಾಜನಿಗೆ ಪತ್ರ ಬರೆದು ಜೀವವನ್ನು ಅಂಗೈಯಲ್ಲಿಟ್ಟುಕೊಂಡು ಸಂಚಾರ ಮಾಡಬೇಕಾದ ಮಟ್ಟಕ್ಕೆ ರಸ್ತೆ ಹದಗೆಟ್ಟಿದೆ. ಇಂಚು ಇಂಚಿಗೂ ಬಾಯಿ ತೆರೆದು ಅಪಘಾತಕ್ಕೆ ಕಾದು ಕುಳಿತಿರುವ ಗುಂಡಿಗಳಿಗೆ ಜಲ್ಲಿ ಅಳವಡಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳು ವಿಫಲವಾಗಿ ಜನ ಸಾಮಾನ್ಯರ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಸಮಯದಲ್ಲಿ ತಾಲೂಕನ್ನು ಸಿಂಗಪೂರ್‌ ಮಾಡಿದ್ದೇವೆ. ರಸ್ತೆಗಳು ಜನರ ಪಾಲಿಗೆ ಸಂಚಾರಿ ರಸ್ತೆಗಳಾಗದೆ ಇದ್ದರೂ ಶಾಸಕರು, ಸಂಸದರು, ಜನ ಸಾಮಾನ್ಯರ ಕಣ್ಣೊರೆಸಲು ತಮ್ಮ ಸ್ವಂತ ಹಣದಿಂದ ರಸ್ತೆಯ ಹಳ್ಳಗಳನ್ನು ಮುಚ್ಚುತ್ತೇವೆ ಎಂದು ಪತ್ರಿಕಾ ಮತ್ತು ಮಾದ್ಯಮಕ್ಕೆ ಕಾಣಿಸಿಕೊಂಡು ಈಗ ನಾಪತ್ತೆಯಾಗಿದ್ದಾರೆಂದು ವಂಗ್ಯವಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಯಾಗಿದೆ. ಮಳೆ ಸುರಿಯುತ್ತಿರುವುದರಿಂದ ಕಾಮಗಾರಿ ಪ್ರಾರಂಭವಾಗಿಲ್ಲ. ಮಾನವೀಯತೆ ದೃಷ್ಟಿಯಿಂದ ರಸ್ತೆಯ ಗುಂಡಿಗಳಿಗೆ ಜಲ್ಲಿ ಅಳವಡಿಸಿ ಜನ ಸಾಮಾನ್ಯರ ಜೀವ ರಕ್ಷಣೆಗೆ ಮುಂದಾಗುವ ಭರವಸೆಯನ್ನು ನೀಡಿದರು.

ಹಸಿರು ಸೇನೆ ಜಿಲ್ಲಾಧ್ಯಕ್ಷ ಕಿರಣ್‌, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ತಾಲೂಕು ಅಧ್ಯಕ್ಷ ಮರ ಗಲ್‌ ಮುನಿಯಪ್ಪ, ಐತಂಡಹಳ್ಳಿ ಮುನ್ನ, ರಾಜಣ್ಣ,ಮುನಿರಾಜು, ನಾಗಯ್ಯ, ಮುನಿಕೃಷ್ಣ, ಕೋಲಾರತಾಲ್ಲುಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ,ಮುಳಬಾಗಿಲು ತಾಲೂಕು ಅಧ್ಯಕ್ಷ ಯಲುವಳ್ಳಿಪ್ರಭಾಕರ್‌, ರಾಮಸಾಗರ ವೇಣು, ಸಂದೀಪ್‌,ಸಂದೀಪ್‌ರೆಡ್ಡಿ, ಸುರೇಶ್‌ಬಾಬು, ಹಸಿರು ಸೇನೆತಾಲೂಕು ಅಧ್ಯಕ್ಷ ಚಲಪತಿ, ಬಾಬಾಜಾನ್‌, ಹಾರೀಪ್‌, ಗೌಸ್‌ ಇತರರಿದ್ದರು.

ಶಾಸಕರ ಮನೆ ಮುತ್ತಿಗೆ ಎಚ್ಚರಿಕೆ :

ಮುಂಗಾರು ಮಳೆ ಆರ್ಭಟಕ್ಕೆ ರಸ್ತೆಗಳು ಕೆರೆ ಕುಂಟೆಗಳಾಗಿ ಮಾರ್ಪಟ್ಟು ರಾತ್ರಿವೇಳೆ ರಸ್ತೆ ಕಾಣಿಸದೆ, ವಾಹನ ಸವಾರರು ಪರದಾಡುವ ಜೊತೆಗೆ ಅಪಘಾತಗಳಾಗಿ ಕೈಕಾಲುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ರಸ್ತೆ ಹದಗೆಟ್ಟಿದೆ. ಗುತ್ತಿಗೆದಾರರು ಕನಿಷ್ಠ ಪಕ್ಷ 6 ತಿಂಗಳ ಕಾಲ ರಸ್ತೆ ಕಾಮಗಾರಿ ಪ್ರಾರಂಭ

ಮಾಡಲು ಸಾಧ್ಯವಿಲ್ಲದ ಕಾರಣ ಬಿದ್ದಿರುವ ಗುಂಡಿಗಳಿಗೆ ಜಲ್ಲಿ ಅಳವಡಿಸುವ ಮೂಲಕ ಜನ ಸಾಮಾನ್ಯರ ಅಮೂಲ್ಯ ಜೀವ ರಕ್ಷಣೆಗೆ ಗುತ್ತಿಗೆದಾರರು ಮುಂದಾಗಬೇಕೆಂದು ಒತ್ತಾಯ ಮಾಡಿದರು. 24 ಗಂಟೆಯಲ್ಲಿ ಹದಗೆಟ್ಟಿರುವ ರಸ್ತೆಯ ಗುಂಡಿಗಳಿಗೆ ಜಲ್ಲಿ ಅಳವಡಿಸಿ ಜನ ಸಾಮಾನ್ಯರ ಜೀವ ರಕ್ಷಣೆಮಾಡದೇ ಇದ್ದರೆ, ಬುಡ್ಡಿ ದೀಪಗಳೊಂದಿಗೆ, ಸ್ಥಳೀಯ ಶಾಸಕರ ಮನೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ರಾಜ್ಯ ಉಪಧ್ಯಕ್ಷ ಕೆ.ನಾರಾಯಣಗೌಡ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.