ಸೀಲ್ಡೌನ್ ಮಾಡಿದ್ದಕ್ಕೆ ಪ್ರತಿಭಟನೆ
Team Udayavani, Aug 2, 2020, 9:53 AM IST
ಬಂಗಾರಪೇಟೆ: ತಾಲೂಕಿನ ದೊಡ್ಡಪನ್ನಾಂಡಹಳ್ಳಿಯ 22 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಇಡೀ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ. ಇದರಿಂದ ಬೇಸತ್ತ ಗ್ರಾಮದ ಕೆಲವರು, ಯಾರಿಗೂ ಸೋಂಕು ಬಂದಿಲ್ಲ, ಇದರಿಂದ ಗ್ರಾಮಕ್ಕೆ ಕಳಂಕ ಬಂದಿದೆ ಎಂದು ಆರೋಪಿಸಿ ಪ್ರತಿಭಟಿಸಿದರು.
ಕಳೆದ ವಾರ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ 60 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ಖಚಿತವಾಗಿತ್ತು. ಹೀಗಾಗಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದ 53 ಮಂದಿಯನ್ನು ಆರೋಗ್ಯ ಇಲಾಖೆ ಪರೀಕ್ಷೆ ಮಾಡಿತ್ತು. ಇದರಲ್ಲಿ 22 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದನ್ನು ನಿರಾಕರಿಸಿರುವ ಕೆಲ ಗ್ರಾಮಸ್ಥರು ಯಾರಿಗೂ ಸೋಂಕು ಬಂದಿಲ್ಲ, ಇದರಿಂದ ಗ್ರಾಮಕ್ಕೆ ದೊಡ್ಡ ಕಳಂಕ ಬಂದಿದೆ ಎಂದು ಆರೋಪಿಸಿ ಪ್ರತಿಭಟಿಸಿದರು. ಸಾವನ್ನಪ್ಪಿದ ವೃದ್ಧೆ, 22 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ರಿಪೋರ್ಟ್ ಕೊಡಿ ಎಂದು ಆರೋಗ್ಯ ಅಧಿಕಾರಿಗಳನ್ನು ಆಗ್ರಹಿಸಿದರು.
ಶನಿವಾರ ಮಧ್ಯಾಹ್ನ ವೇಳೆಗೆ ಸ್ಥಳಕ್ಕೆ ಡೀಸಿ ಆಗಮಿಸಬೇಕೆಂದು ಪಟ್ಟುಹಿಡಿದ್ದಿದ್ದರು. ಆದರೆ, ಯಾವುದೇ ಅಧಿಕಾರಿಗಳು ಆಗಮಿಸದ ಕಾರಣ ಕೆಲ ಕಾಲ ಪ್ರತಿಭಟಿಸಿ, ವಾಪಸ್ಸಾಗಿದ್ದಾರೆ. ಪ್ರತಿಭಟನೆಯಲ್ಲಿ ಮುಖಂಡರಾದ ಮಂಜುನಾಥರಾವ್, ಸಿಂಗೋಲೆ, ಶಂಕರ್, ಲಕ್ಷ್ಮಣ್ ರಾವ್, ಕೃಷ್ಣೋಜಿರಾವ್, ಸುರೇಶ್, ಬಾಬುರಾವ್, ರಾಮ್ಶೆಟ್ಟಿ, ರಾಮೋಜಿರಾವ್ ಭಾಗವಹಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರಿ, ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಗ್ರಾಮದಲ್ಲಿ 22 ಮಂದಿಗೆ ಕೋವಿಡ್ ಬಂದಿರುವುದು ದೃಢವಾಗಿದೆ. ಇದರ ಸಂಪೂರ್ಣ ದಾಖಲೆ ಇದೆ. ಇವರ ರ್ಯಾಪಿಡ್ ಪರೀಕ್ಷೆ ಮಾಡಲಾಗಿದೆ. ಈ ಪರೀಕ್ಷೆಯನ್ನು ನಾವೇನು ಮಾಡಿಲ್ಲ. ಜಿಲ್ಲಾ ಆರೋಗ್ಯ ಇಲಾಖೆ ಮಾಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್