ರಸ್ತೆದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Oct 14, 2020, 3:46 PM IST

KOLAR-TDY-1

ಕೋಲಾರ: ನಗರದ ಬಹಳಷ್ಟು ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆಯೂ ಹಳ್ಳ ಗಳಿಂದಕೂಡಿದ್ದು ಹದಗೆಟ್ಟ ರಸ್ತೆಗಳನ್ನು ಸರಿಪ ಡಿಸಲು ಒತ್ತಾಯಿಸಿ ಮಂಗಳವಾರಕೋಲಾರ ಪ್ರಗತಿಪರ ಸಂಘಟನೆಗಳ ಮುಖಂಡರು, ಎಂ.ಬಿ.ರಸ್ತೆ ವಿನಯ್‌ ಸಭಾಂಗಣದ ಮುಂಭಾಗ ರಸ್ತೆಯನ್ನು ಸಂಪೂರ್ಣ ಬಂದ್‌ ಮಾಡಿ ಪ್ರತಿಭಟಿಸಿದರು.

ಪ್ರತಿಭಟನಾಕಾರರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್‌ ಮಾಡಿ ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬರುವರೆಗೂ ಪ್ರತಿಭಟನೆ ಮುಂದು ವರಿಸುವುದಾಗಿ ಪಟ್ಟು ಹಿಡಿದರು.

ಕಾಲಹರಣ: ಒಂದು ಗಂಟೆ ನಂತರ ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆ ಅಧಿಕಾ ರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ನಗರಸಭೆ ಅಧಿಕಾರಿಗಳು ಪಿಡಬ್ಲ್ಯೂಡಿ ಅಧಿಕಾರಿಗಳ ಮೇಲೆ, ಪಿಡಬ್ಲ್ಯೂಡಿ ಅಧಿಕಾರಿಗಳು ನಗರಸಭೆಯ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿರುವ ಕಾರಣ ನಗರದ ಎಲ್ಲಾ ರಸ್ತೆ ಹಾಳಾಗಿದ್ದು, ಜನ ಓಡಾಡಲು ಪರಿತಪಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ವಿಫ‌ಲ: ಸುಮಾರು 2 ವರ್ಷಗಳ ಹಿಂದೆ ಈ ವಿಷಯದಲ್ಲಿ ಕೋಲಾರ ಬಂದ್‌ಗೆಕರೆ ನೀಡಿದಾಗ ಆಗಿನ ಜಿಲ್ಲಾಧಿಕಾರಿ ತಿಂಗಳೊಳಗಾಗಿ ರಸ್ತೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರೂಇದುವರೆಗೂ ನಗರದ ರಸ್ತೆ ಸರಿಪಡಿಸುವಲ್ಲಿ ಲೋಕೋಪ ಯೋಗಿ ಇಲಾಖೆ ಮತ್ತು ನಗರಸಭೆ ಸಂಪೂ ರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಕೇಬಲ್‌ ಅಳವಡಿಕೆ: ಈಗಾಗಲೇ ಕೋಲಾರನಗರದ ಅಗಲೀಕರಣವಾಗುತ್ತಿರುವ ರಸ್ತೆಗಳಎರಡೂ ಬದಿ ಚರಂಡಿ ಪಕ್ಕದಲ್ಲಿ ವಿವಿಧ ರೀತಿಯ ಕೇಬಲ್‌ ಹಾದುಹೋಗಲು ಪ್ರತ್ಯೇಕ ಡ್ರೈನೇಜ್‌ ವ್ಯವಸ್ಥೆ ಮಾಡಲು ಪ್ರತಿಭಟನಾಕಾರರು ಆಗ್ರಹಿಸಿದರು.ಇದಕ್ಕೆ ಉತ್ತರಿಸಿದ ಅಧಿಕಾರಿಗಳು,ಪ್ರಗತಿಪರ ಸಂಘಟನೆಗಳ ಮುಖಂಡರನ್ನು ಶನಿವಾರ ಸಭೆ ಕರೆದು ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಹೊಳಲಿಪ್ರಕಾಶ್‌, ಕುರುಬರಪೇಟೆ ವೆಂಕಟೇಶ್‌, ರೈತಸಂಘಗಳ ಮುಖಂಡ‌ರಾದ ನಾರಾಯಣ ಗೌಡ, ನಳಿನಿಗೌಡ, ಜಿ.ನಾರಾಯಣಸ್ವಾಮಿ, ರಾಮು ಶಿವಣ್ಣ , ಚಿನ್ನಿ ಶ್ರೀನಿವಾಸ್‌, ಕರವೇ

ಸಂಘಟನೆಯ  ನ‌ವೀನ್‌, ಲೋಕೇಶ್‌, ಮಂಜುನಾಥ್‌, ಸೈಯದ್‌, ಶ್ರೀನಿವಾಸ್‌, ಶೇಷಾದ್ರಿಶಾಸ್ತ್ರಿ, ಮಾನವ ಹ‌ಕ್ಕುಗಳ ಶಿವಕುಮಾರಗೌಡ, ದಿಂಬಚಾಮನಹಳ್ಳಿ ಅಂಬರೀಶ್‌, ಚರ್ಚ್‌ ಛೇರ್ಮನ್‌ ಸುಧೀರ್‌, ಜಬೀ, ಸೈಯದ್‌ ಫಿರ್ದೋಸ್‌, ಅತಾವುಲ್ಲಾ, ಸಾಬಿರ್‌ ಪಾಷಾ, ಸಾದಿಕ್‌ ಪಾಷಾ, ಇಮ್ರಾನ್‌ ಖಾನ್‌ ಮತ್ತಿತರರಿದ್ದರು.

ಅಧಿಕಾರಿಗಳಿಗೆ ಮುಖಂಡರ ಎಚ್ಚರಿಕೆ :  ರಸ್ತೆ ಸರಿಪಡಿಸಲು ನಿರ್ಲಕ್ಷ್ಯ ಧೋರಣೆ ತಾಳಿರುವ ಅಧಿಕಾರಿ ಮತ್ತು ಜನಪ್ರತಿನಿಧಿಗಳನ್ನು ಜನ ಪ್ರತಿನಿತ್ಯ ಛೀಮಾರಿ ಹಾಕುತ್ತಾ ದಾರಿಯಲ್ಲಿ ಹೋಗುತ್ತಿದ್ದಾರೆ. ಸಂಬಂಧಪಟ್ಟವರಿಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೇ ರೀತಿ ಮುಂದುವರಿದರೆ 15 ದಿನಗಳಲ್ಲಿಕೋಲಾರ ನಗರ ಬಂದ್‌ಕರೆ ನೀಡುತ್ತೇವೆ ಎಂದು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಎಚ್ಚರಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.