ಕುಡಿವ ನೀರಿಗೆ ಸಿಡಿದೆದ್ದ ನಾಗರಿಕರು

ಕೋಲಾರ ನಗರಸಭೆ ಮುಂದೆ ಧರಣಿ, ಆಕ್ರೋಶ • 5, 15, 16ನೇ ವಾರ್ಡಿನ ನಿವಾಸಿಗಳಿಂದ ಪ್ರತಿಭಟನೆ

Team Udayavani, Jul 30, 2019, 3:28 PM IST

kolar-tdy-1

ಕೋಲಾರ: ನಗರಸಭೆ ಅಕ್ರಮಗಳಿಂದ ನಾರುತ್ತಿದೆ, ಜನರ ಕಷ್ಟಗಳನ್ನು ಕೇಳುವವರು ಇಲ್ಲವಾಗಿದೆ. 5ನೇ ವಾರ್ಡ್‌ನಲ್ಲಿ ಕುಡಿಯುವ ನೀರು ನೀಡಿ ತಿಂಗಳುಗಳೇ ಉರುಳಿವೆ. ಈ ಎಲ್ಲಾ ಸಮಸ್ಯೆಗಳಿಗೆ ಕಡಿವಾಣ ಹಾಕಿ ಎಂದು ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಕಾರ್ಯಕರ್ತರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್‌, 5ನೇ ವಾರ್ಡ್‌ನ ಅಂಬೇಡ್ಕರ್‌ ಕಾಲೋನಿಯಲ್ಲಿ ಕುಡಿಯುವ ನೀರಿಲ್ಲದೆ ಜನತೆ ಪರದಾಡುವಂತಾಗಿದೆ. 600 ರೂ. ನೀಡಿ ಖಾಸಗಿ ಟ್ಯಾಂಕರ್‌ ನೀರು ಪಡೆಯುವ ಸ್ಥಿತಿಯಲ್ಲಿ ಬಡ ನಿವಾಸಿಗಳಿಲ್ಲ. ಎಂಟು ತಿಂಗಳ ಹಿಂದೆ ಇದ್ದ ನೀರಿನ ಸಂಪರ್ಕ ಕಡಿತ ಮಾಡಿ ಹೊಸಲೈನ್‌ ಎಳೆದಿದ್ದರೂ ನೀರೇ ಬರುತ್ತಿಲ್ಲ ಎಂದು ಆರೋಪಿಸಿದರು.

ನೀರುಗಂಟಿ ಬದಲಿಸಿ: ನೀರಿನ ಸಮಸ್ಯೆ ಇದ್ದರೂ ನೀರುಗಂಟಿ ಸ್ಪಂದಿಸುತ್ತಿಲ್ಲ, ಪ್ರಶ್ನಿಸಿದರೆ ನಗರಸಭೆ ಪೌರಾಯುಕ್ತ, ಡಿ.ಸಿ.ಗೆ ದೂರು ನೀಡ್ತಿರೋ ನೀಡಿ ಎಂದು ಬೇಜವಾಬ್ದಾರಿಯಿಂದ ಉತ್ತರಿಸುತ್ತಿದ್ದಾರೆ. ಈ ಕೂಡಲೇ ಇವರನ್ನು ಬದಲಿಸಬೇಕು ಎಂದು ಒತ್ತಾಯಿಸಿದರು.

ಕಳಪೆ ಕಾಮಗಾರಿ: ನಗರಸಭೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದೆ. ಹಲವು ಬೋರ್‌ವೆಲ್ಗಳಲ್ಲಿ ಪಂಪ್‌ಮೋಟಾರ್‌ ಕಾಣೆಯಾಗಿದೆ, ದುರಸ್ತಿಗೆ 1 ಲಕ್ಷ ರೂ. ಖರ್ಚು ಮಾಡಿರುವ ರೀತಿ ಬಿಲ್ ಸಿದ್ದಪಡಿಸಿ ದ್ದಾರೆ. ನಗರಸಭೆ ಆರೋಗ್ಯ ವಿಭಾಗದಲ್ಲಿ ರೋಗಗಳ ನಿಯಂತ್ರಣಕ್ಕೆ ತಂದಿರುವ ನೈರ್ಮಲ್ಯ ಸಾಮಗ್ರಿ ಬಳಸಿಲ್ಲ. ಚಿಕ್ಕಚನ್ನಂಜಪ್ಪ ಉದ್ಯಾನದಲ್ಲಿ ಕಳಪೆ ಕಾಮ ಗಾರಿ ನಡೆದಿದೆ ಎಂದು ಆರೋಪಿಸಿದರು.

ಕಟ್ಟಡ ಪರವಾನಗಿ ಸಂಬಂಧ ನಗರಸಭೆಯ ಎಇಇ ಬಳಿ ಇರಬೇಕಾದ ಯೋಜನೆ ಅನುಮೋದನೆ ನಕಾಶೆಯ ಆನ್‌ಲೈನ್‌ ಕೀ ಖಾಸಗಿ ವ್ಯಕ್ತಿಯ ಬಳಿ ಇದ್ದು, ಕಟ್ಟಡ ಪರವಾನಗಿಗೆ 1ರಿಂದ 2 ಲಕ್ಷ ರೂ. ಹಣ ವಸೂಲಿ ಮಾಡಲಾಗುತ್ತಿದೆ. ಉಚಿತವಾಗಿ ನೀಡಬೇಕಿರುವ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ದತಿಯ ರಸೀದಿದೆ 100 ರಿಂದ 200 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ ಅವರು ಈ ಎಲ್ಲ ಅಂಶಗಳ ಬಗ್ಗೆ ತನಿಖೆ ನಡೆಸಿ ಪೌರಾಯುಕ್ತರು, ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಗ್ರೇಡ್‌2 ತಹಶೀಲ್ದಾರ್‌ ಸುಜಾತ ಅವರಿಗೆ ಮನವಿ ಸಲ್ಲಿಸಿದರು. ಸಮಿತಿ ಯುವ ಘಟಕದ ರಾಜ್ಯಾಧ್ಯಕ್ಷ ನವೀನ್‌ ಮಹರಾಜ್‌, ಪದಾಧಿಕಾರಿ ಗಳಾದ ವಿಜಯಕುಮಾರ್‌, ಶ್ರೀನಿವಾಸ್‌, ಸಿದ್ಧಿಕ್‌ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.