ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ


Team Udayavani, Nov 22, 2019, 3:30 PM IST

kolar-tdy-2

ಬೇತಮಂಗಲ: ಕಳೆದ 6 ತಿಂಗಳಿನಿಂದಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಶಾಸಕರು, ಸಂಸದರು, ಜಿಪಂ ಸದಸ್ಯರು, ಗ್ರಾಪಂ ಅಧ್ಯಕ್ಷರು ವಿಫ‌ಲರಾಗಿದ್ದಾರೆ ಎಂದು ಆರೋಪಿಸಿ ಕರಡುಗೂರು ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಕ್ಯಾಸಂಬಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮದಿಂದ ಶ್ರೀನಿವಾಸಸಂದ್ರ ಗ್ರಾಪಂವರೆಗೆ ಖಾಲಿ ಬಿಂದಿಗೆ ತಲೆಯ ಮೇಲೆ ಹೊತ್ತು ಮೆರವಣಿಗೆ ನಡೆಸಿದ ಗ್ರಾಮಸ್ಥರು, ಗ್ರಾಪಂ ಕಚೇರಿಗೆ ಬೀಗ ಹಾಕಿ, ನೀರಿನ ಸಮಸ್ಯೆನಿವಾರಣೆಗೆ ಆಗ್ರಹಿಸಿದರು.

ಗ್ರಾಮದ ಯುವ ಮುಖಂಡ ಅಭಿಲೇಶ್‌ ಮಾತನಾಡಿ, ಗ್ರಾಮದಲ್ಲಿ 300 ಮನೆಗಳು ಇದ್ದು, 1500 ಜನಸಂಖ್ಯೆ ಇದೆ. ಗ್ರಾಮದಲ್ಲಿ ಇದ್ದ 2 ಕೊಳವೆಬಾವಿಗಳು ಬತ್ತಿ ಹೋಗಿದ್ದು, ಪಂಚಾಯ್ತಿ ವತಿಯಿಂದ ನಿತ್ಯ ಟ್ಯಾಂಕರ್‌ ಮೂಲಕ ತಾತ್ಕಾಲಿಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಇದು ಸಾಕಾಗುವುದಿಲ್ಲ ಎಂದು ಹೇಳಿದರು.

ಟ್ಯಾಂಕರ್‌ನಿಂದ ಪೂರೈಕೆ ಮಾಡಲಾಗುತ್ತಿರುವ ನೀರಿಗೆ ಗ್ರಾಮದಲ್ಲಿ ಸಣ್ಣ ಪುಟ್ಟ ಗಲಾಟೆಗಳು ನಡೆಯುತ್ತವೆ. ಆದ್ದರಿಂದ ನೂತನ ಕೊಳವೆಬಾವಿ ಕೊರೆಯಿಸಿ ಅಥವಾ ರೀಬೋರ್‌ ಮಾಡಿಸಿ ಎಂದು ಶಾಸಕಿ, ಸಂಸದರು, ಜಿಪಂ ಸದಸ್ಯರು, ಗ್ರಾಪಂ ಅಧ್ಯಕ್ಷರಿಗೆ ಮನವಿ ಮಾಡಿದ್ದರೂ ಇದುವರೆಗೂ ಸಮಸ್ಯೆ ಬಗೆಹರಿಸುವತ್ತ ಜನಪ್ರತಿನಿಧಿಗಳು ಗಮನಹರಿಸಿಲ್ಲ ಎಂದು ಹೇಳಿದರು.

ಹೈನೋದ್ಯಮವನ್ನೇ ನಂಬಿ ಜೀವನ ನಡೆಸುತ್ತಿರುವ ನಮಗೆ, ಟ್ಯಾಂಕರ್‌ ನೀರು ಸಾಕಾಗುತ್ತಿಲ್ಲ, ಒಂದು ಮನೆಗೆ 2 ರಿಂದ 4 ಹಸುಗಳಿದ್ದು, ಜನ ಜಾನುವಾರುಗಳಿಗೂ ನೀರು ಬೇಕಿದೆ. ಹೀಗಾಗಿ ನಮಗೆ ಟ್ಯಾಂಕರ್‌ ನೀರು ಸಾಕಾಗುವುದಿಲ್ಲ. ಶಾಶ್ವತ ಸೌಲಭ್ಯ ಒದಗಿಸಬೇಕು ಎಂದರು. ಮುಖಂಡ ಬಾಬುರೆಡ್ಡಿ ಮಾತನಾಡಿ, ನಮ್ಮ ಗ್ರಾಮದ ಅಕ್ಕಪಕ್ಕದ ಗ್ರಾಮಗಳಲ್ಲಿ ರೀ ಬೋರ್‌ಮಾಡಲಾಗುತ್ತಿದೆ. ಆದರೆ, ನಮ್ಮ ಗ್ರಾಮಕ್ಕೆ ರೀಬೋರ್‌ ಮಾಡಿಸದಿರುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಪ್ರಶ್ನಿಸಿದರು.

ಬೆಳಗ್ಗೆ 10 ಗಂಟೆಗೆ ಕಚೇರಿ ಬಳಿ ಜಮಾಯಿಸಿದ ಗ್ರಾಮಸ್ಥರು, ನೀರಿನ ಸಮಸ್ಯೆ ಬಗ್ಗೆ ಸ್ಪಷ್ಟೀಕರಣ ನೀಡಿ, ನಂತರ ಕಚೇರಿ ಬಾಗಿಲು ತೆರೆಯದಂತೆ ತಾಕೀತು ಮಾಡಿದರು. ಸ್ಥಳಕ್ಕೆ ಆಗಮಿಸಿದ ಪಿಡಿಒ ಲೋಕೇಶ್‌, ಶಾಸಕರ, ಜಿಲ್ಲಾ ಪಂಚಾಯ್ತಿ ಸದಸ್ಯರ ಹಾಗೂ ಇಒ ಅವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಕೊರಿದರು. ನಂತರ ಪಿಡಿಒ ಲೋಕೇಶ್‌, 4 ದಿನಗಳಲ್ಲಿ (ಸೋಮವಾರ ದೊಳಗೆ) ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಈ ವೇಳೆ ಗ್ರಾಮಸ್ಥರಾದ ಮಂಜುನಾಥ್‌, ರಾಮಪ್ಪ, ಚಕ್ರವರ್ತಿ, ಆಂಜಪ್ಪ, ಕೃಷ್ಣಮೂರ್ತಿ, ಇತರರು ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.