ರೈಲೆ ನಿಲ್ದಾ ಣದಲ್ಲಿ ಮೂಲ ಸೌಲಭ್ಯ ಕಲ್ಪಿಸಿ
Team Udayavani, Sep 24, 2019, 5:02 PM IST
ಬಂಗಾರಪೇಟೆ: ಪಟ್ಟಣದಲ್ಲಿರುವ ರೈಲ್ವೆ ಜಂಕ್ಷನ್ನಲ್ಲಿ ಪ್ರಯಾಣಿಕರಿಗೆ ಎಕ್ಸಲೇಟರ್ ಸೇರಿ ಮೂಲ ಸೌಲಭ್ಯ ಒದಗಿಸಬೇಕು ಎಂದು ಜೈ ಭಾರತ್ ಯುವ ಸೇನೆಯ ತಾಲೂಕು ಅಧ್ಯಕ್ಷ ಎನ್. ಶಿವಕುಮಾರ್ ರೈಲ್ವೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಿಲ್ದಾಣದಿಂದ 25 ಸಾವಿರ ಪ್ರಯಾಣಿಕರು ಬೆಂಗಳೂರು, ಚೆನ್ನೈ ಮುಂತಾದ ನಗರಗಳಿಗೆ ಪ್ರಯಾಣ ಮಾಡುತ್ತಿದ್ದಾರೆ. ಪ್ರತಿ ದಿನ ಸಾವಿರಾರು ಜನರು, ಮಹಿಳೆಯರು, ವಯೋವೃದ್ಧರು ರೈಲುಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅವರಿಗೆ ಮೆಟ್ಟಿಲು ಹತ್ತಲು ಹಾಗೂ ಇಳಿಯಲು ಆಗುತ್ತಿಲ್ಲ. ಆದ್ದರಿಂದ ಇವರಿಗೆ ಸುಲಭವಾಗಿ ಓಡಾಡಲು ಎಕ್ಸಲೇಟರ್ಅನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು. ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಮುಖ್ಯರಸ್ತೆಗಳಲ್ಲಿ ವಿದ್ಯುತ್ ದೀಪಗಳು ರಿಪೇರಿಯಾಗಿರುವುದರಿಂದ ರಾತ್ರಿ ವೇಳೆಯಲ್ಲಿ ಓಡಾಡಲು ಪ್ರಯಾಣಿಕರು ಭಯಪಡುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದೆ. ರೈಲ್ವೆ ನಿಲ್ದಾಣ ದಿಂದ ಹೊಸ ಬಸ್ ನಿಲ್ದಾಣಕ್ಕೆ
ಹೋಗುವ ರಸ್ತೆ ಸಂಪೂರ್ಣ ನಾಶವಾಗಿ ದ್ದರೂ ಇನ್ನೂ ರಿಪೇರಿ ಮಾಡದೇ ನಿರ್ಲಕ್ಷ್ಯವಹಿಸಿರುವುದರ ಬಗ್ಗೆ ಎಚ್ಚೆತ್ತುಕೊಳ್ಳ ಬೇಕೆಂದು ಒತ್ತಾಯಿಸಿ ರೈಲ್ವೆ ಅಧಿಕಾರಿಗಳಿಗೆ ಮನವಿ ನೀಡಿದರು. ಜೈ ಭಾರತ್ ಯುವ ಸೇನೆಯ ತಮ್ಮೆನ ಹಳ್ಳಿಹಾಲಪ್ಪ, ಸಾಯಿ, ಪಾರ್ತಿಭನ್, ಕುಟ್ಟಿ, ಆರ್.ರಾಮ್ಕುಮಾರ್, ಚಲಪತಿ, ಜಗದೀಶ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ