ಗುಣಮಟ್ಟದ ಹಾಲು ಸಂಗ್ರಹ: ಕೋಲಾರ ನಂ.1 ಮಾಡ್ತೇನೆ

ಉಳಿದ 23 ಹಾಲಿನ ಡೇರಿಗಳಲ್ಲೂ ಬಿಎಂಸಿ ಸ್ಥಾಪನೆ • ಪ್ಲಾಸ್ಟಿಕ್‌ ಕ್ಯಾನ್‌ ಮುಕ್ತ ತಾಲೂಕಿಗೆ ಕ್ರಮ: ಹರೀಶ್‌

Team Udayavani, Sep 1, 2019, 1:13 PM IST

kolar-tdy-3

ಕೋಲಾರದ ಕೆಇಬಿ ಸಮುದಾಯ ಭವನದಲ್ಲಿ ಕೋಚಿಮುಲ್ ಕರೆದಿದ್ದ ಪ್ರಾದೇಶಿಕ ಸಭೆಯನ್ನು ನಿರ್ದೇಶಕ ಡಿ.ವಿ.ಹರೀಶ್‌ ಉದ್ಘಾಟಿಸಿದರು. ಒಕ್ಕೂಟದ ವ್ಯವಸ್ಥಾಪಕ ವೇಣುಗೋಪಾಲ್ ಇದ್ದರು.

ಕೋಲಾರ: ಗುಣಮಟ್ಟದ ಹಾಲು ಶೇಖರಣೆಯಲ್ಲಿ ತಾಲೂಕು 2ನೇ ಸ್ಥಾನದಲ್ಲಿದ್ದು, ಬಾಕಿ ಉಳಿದಿರುವ 23 ಎಂಪಿಸಿಎಸ್‌ಗಳಲ್ಲೂ (ಬಲ್ಕ್ಮಿಲ್ಕ್ ಕೂಲರ್‌)ಬಿಎಂಸಿ ಕೇಂದ್ರ ಸ್ಥಾಪಿಸಿ ಪ್ಲಾಸ್ಟಿಕ್‌ ಕ್ಯಾನ್‌ ಮುಕ್ತ ತಾಲೂಕನ್ನಾಗಿಸುವುದಾಗಿ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್‌ ಭರವಸೆ ನೀಡಿದರು.

ನಗರದ ಕೆಇಬಿ ಸಮುದಾಯ ಭವನದಲ್ಲಿ ಕೋಚಿಮುಲ್ ಕರೆದಿದ್ದ ಪ್ರಾದೇಶಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋಲಾರ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ತಾಲೂಕು ಅತೀ ಹೆಚ್ಚು ಅಂದರೆ 258 ಡೇರಿಗಳು, ಪ್ರತಿ ನಿತ್ಯ 1.52 ಲಕ್ಷ ಲೀಟರ್‌ ಹಾಲು ಸಂಗ್ರಹಿಸುತ್ತಿದೆ. ಹಾಲಿನ ಗುಣಮಟ್ಟದಲ್ಲಿ 2ನೇ ಸ್ಥಾನದಲ್ಲಿದೆ. ಮಾಲೂರು ತಾಲೂಕು ಸಂಪೂರ್ಣ ಬಿಎಂಸಿ ಕೇಂದ್ರ ಹೊಂದಿದೆ. ಅದೇ ರೀತಿ ಕೋಲಾರ ತಾಲೂಕಿನಲ್ಲೂ ಇನ್ನೂ 32 ಬಿಎಂಸಿ ಕೇಂದ್ರಗಳನ್ನು ಸ್ಥಾಪಿಸಿ, ಪ್ಲಾಸ್ಟಿಕ್‌ ಕ್ಯಾನ್‌ ಮುಕ್ತ ತಾಲೂಕನ್ನಾಗಿ ಮಾಡಿ ಗುಣಮಟ್ಟದ ಹಾಲಿನ ಶೇಖರಣೆಯಲ್ಲಿ ನಂ.1ಸ್ಥಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಉತ್ಪಾದಕರಿಗೆ ನೀಡಬಹುದಾದ ಹಾಲಿನ ದರ 4 ರೂ. ಹೆಚ್ಚಿಸುವಂತೆ ಒಕ್ಕೂಟಗಳು ಸಲ್ಲಿಸಿದ ಪ್ರಸ್ತಾವನೆ ಕೆಎಂಎಫ್‌ನಲ್ಲಿ ಬಾಕಿ ಇದೆ, ಮಂಡಳಿ ಇಲ್ಲದೆ ವಿಳಂಬವಾಗಿದ್ದು, ನೂತನ ಅಧ್ಯಕ್ಷರ ಆಯ್ಕೆ ಬಳಿಕ ಕೋಚಿಮುಲ್ನಿಂದ ನಿಯೋಗ ಕರೆದೊಯ್ಯುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

ಬೋರ್‌ವೆಲ್ ಕೊರೆಯಲಿ: ಹಾಲಿನ ಉಪ ಉತ್ಪನ್ನಗಳ ತಯಾರಿಕಾ ಘಟಕ ಆರಂಭಿಸಬೇಕು, ಡೇರಿ ಕಾರ್ಯದರ್ಶಿ, ಪರಿವೀಕ್ಷಕರಿಗೆ ನಿವೃತ್ತಿ ವೇತನ ನೀಡಲು ಇರುವ ತಾಂತ್ರಿಕ ದೋಷ ನಿವಾರಿಸಬೇಕು, ಒಕ್ಕೂಟವು ನೀರಿಗಾಗಿ ವಾರ್ಷಿಕ 1.75 ಕೋಟಿ ರೂ. ವ್ಯಯಿಸುವುದನ್ನು ತಪ್ಪಿಸಲು ಹೊಳಲಿ ಕೆರೆಗೆ ಕೆ.ಸಿ. ವ್ಯಾಲಿ ನೀರು ಬಂದ ಮೇಲೆ ಕೆರೆಯಲ್ಲಿ ಬೋರ್‌ವೆಲ್ ಕೊರೆಯಬೇಕೆಂದು ಆಗ್ರಹಿಸಿದರು.

ಕಲ್ಯಾಣ ಮಂಟಪ: ನೂತನ ಶಿಬಿರ ಕಚೇರಿ ಮೇಲ್ಭಾಗದಲ್ಲಿ ಸಭಾಂಗಣ ನಿರ್ಮಿಸಿ ಮುಂದಿನ ವರ್ಷ ಅಲ್ಲೇ ಪ್ರಾದೇಶಿಕ ಸಭೆ ನಡೆಸಲಾಗುವುದು ಎಂದ ಅವರು, ಟಮಕದಲ್ಲಿರುವ ಒಕ್ಕೂಟದ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಿಸಿ ಹಾಲು ಉತ್ಪಾದಕರಿಗೆ ರಿಯಾಯ್ತಿ ದರದಲ್ಲಿ ನೀಡುವಂತಾಗಬೇಕೆಂದು ನುಡಿದರು.

ಒಕ್ಕೂಟ ಹಾಲು ಉತ್ಪಾದಕರಿಗೆ ಏನೂ ಮಾಡಿಲ್ಲ ಎಂದು ದೂಷಿಸುವುದು ಬೇಡ, ಎಲ್ಲ ಯೋಜನೆಗಳಲ್ಲಿ ಶೇ.50 ಹಣವನ್ನು ಒಕ್ಕೂಟ ಭರಿಸುತ್ತಿದೆ. ಏನೇನು ಸಾಧ್ಯವೋ ಎಲ್ಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು.

ಪ್ರಾತ್ಯಕ್ಷಿಕೆ ಕೇಂದ್ರ: ಹಾಲು ಉತ್ಪಾದಕರನ್ನು ಗುಜರಾತ್‌ನ ಅಮುಲ್, ಆಂಧ್ರದ ವಿಶಾಖಪಟ್ಟಣಂನ ಖಾಸಗಿ ಡೇರಿಗೆ ಅಧ್ಯಯನ ಪ್ರವಾಸಕ್ಕೆ ಕಳುಹಿಸುವ ಬದಲು ಕೋಲಾರದ ಹೊಳಲಿಯಲ್ಲಿ ಒಕ್ಕೂಟಕ್ಕೆ ಡಿ.ಕೆ.ರವಿ ಜಿಲ್ಲಾಕಾರಿಗಳಾಗಿದ್ದಾಗ ಮಂಜೂರು ಮಾಡಿರುವ 50 ಎಕರೆ ಜಮೀನಿನಲ್ಲೇ ಪ್ರಾತ್ಯಕ್ಷಿಕೆ ಕೇಂದ್ರ ಆರಂಭಿಸಿ, ಇತರೆ ಜಿಲ್ಲೆ, ರಾಜ್ಯದ ಹೈನುಗಾರರು ಇಲ್ಲಿ ನೋಡಿಕೊಂಡು ಹೋಗುವಂತೆ ಅಭಿವೃದ್ಧಿಪಡಿಸಬೇಕೆಂದು ಸಲಹೆ ನೀಡಿದರು.

ಪಶುಆಹಾರ ಘಟಕ: ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ತಿಪ್ಪಾರೆಡ್ಡಿ, ಶಿಡ್ಲಘಟ್ಟದ ಸಾದಲಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 500 ಮೆಟ್ರಿಕ್‌ ಟನ್‌ ಉತ್ಪಾದನಾ ಸಾಮರ್ಥ್ಯದ ಪಶುಆಹಾರ ಘಟಕ ಸ್ಥಾಪಿಸಲಾಗುತ್ತಿದೆ.

ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಘಟಕ ಸ್ಥಾಪನೆಯಾದರೆ ಸಕಾಲಕ್ಕೆ ಪಶು ಆಹಾರ ಲಭ್ಯವಾಗಲಿದೆ. ಮೆಕ್ಕೆಜೋಳದ ಬೆಲೆ ಹೆಚ್ಚಾಗಿರುವುದರಿಂದ ಪಶು ಆಹಾರದ ಬೆಲೆ ಹೆಚ್ಚಳವಾಗಿದೆ ಎಂದು ನುಡಿದರು.

ರಾಮಸಂದ್ರ ಡೇರಿ ಅಧ್ಯಕ್ಷ ಶಿವರುದ್ರಪ್ಪ, ಪಶು ಆಹಾರ ಬೆಲೆ ಹೆಚ್ಚಳವಾಗಿದೆ, ಹಾಲು ಖರೀದಿ ದರ ಹೆಚ್ಚಿಸಿಲ್ಲ, ನಾನಾ ಹೆಸರಿನಲ್ಲಿ ಬಿಲ್ನಿಂದ ಹಣ ಕಡಿತ ಮಾಡಲಾಗುತ್ತಿದೆ, ಚಿಕ್ಕಬಳ್ಳಾಪುರದಲ್ಲಿ 3 ಚಿಲ್ಲಿಂಗ್‌ ಸೆಂಟರ್‌ ಇದೆ, ಪಶು ಆಹಾರ ಸೇರಿದಂತೆ ಕೋಲಾರ ಭಾಗದಲ್ಲಿ ಯಾವುದೇ ಘಟಕ ನಿರ್ಮಿಸಲು ನಿಮಗೆ ಆಸಕ್ತಿ ಇಲ್ಲ ಎಂದು ವಾಗ್ಧಾಳಿ ನಡೆಸಿದರೆ ನೋ ಪೇಮೆಂಟ್ ಬಗ್ಗೆ ಕಲ್ಲಂಡೂರು ಡೇರಿ ಅಧ್ಯಕ್ಷ ಕೃಷ್ಣಪ್ಪ ಗಮನ ಸೆಳೆದರು.

ಒಕ್ಕೂಟದ ವ್ಯವಸ್ಥಾಪಕ ವೇಣುಗೋಪಾಲ್, ಶಿಬಿರ ಕಚೇರಿ ಉಪವ್ಯವಸ್ಥಾಪಕ ಡಾ.ಶ್ರೀನಿವಾಸಗೌಡ, ಅಧಿಕಾರಿಗಳಾದ ಮೋಹನ್‌ಬಾಬು, ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.