ಜಂಕ್ಫುಡ್ ಸೇವನೆ ಬಿಟ್ಟು ಬಿಡಿ
Team Udayavani, Jun 9, 2021, 11:46 AM IST
ಕೋಲಾರ: ನಗರದ ಗೌರಿಪೇಟೆ ಬಸವ ಮಂದಿರದಲ್ಲಿ ಜಯ ಕರ್ನಾಟಕ ಸಂಘಟನೆ ವಿಶ್ವ ಆರೋಗ್ಯ ಸುರಕ್ಷತಾ ದಿನ ಆಚರಿಸುವ ಮೂಲಕ ಆಹಾರ ಪೊಟ್ಟಣದ ಜತೆಗೆ ಹಣ್ಣು ವಿತರಿಸಿತು.
ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗಾನಂದ ಕೆಂಪರಾಜ್ ಮಾತನಾಡಿ, ನಾವು ತಿನ್ನುತ್ತಿರುವ ಆಹಾರ ವಿಷದಿಂದ ಕೂಡಿದ್ದು ಶೇ.70 ರಿಂದ 80 ಕಳಪೆ, ಕಲಬೆರಕೆಯಿದೆ. ಇದರಿಂದ ಕ್ಯಾನ್ಸರ್ ಸೇರಿ ಹಲವಾರು ಮಾರಕ ರೋಗಗಳಿಗೆ ಮನುಷ್ಯ ಬಲಿಯಾಗುತ್ತಿದ್ದಾನೆಂದರು.
ವಿಶ್ವ ಸಂಸ್ಥೆ ಜೂ.7 ರಂದು ವಿಶ್ವ ಆಹಾರ ಸುರಕ್ಷತಾ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಆಹಾರ ಉತ್ಪನ್ನ ತಯಾರಿಸುವ ಸಂಸ್ಥೆಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಮುಖ್ಯವಾಗಿ ಪೋಷ ಕರು ತಮ್ಮ ಮಕ್ಕಳನ್ನು ಜಂಕ್ ಫುಡ್ಗಳ ಸೇವನೆಯಿಂದ ಹೊರತಂದು ಪೌಷ್ಟಿಕಾಂಶ ಆಹಾರ ನೀಡುವ ಮೂಲಕ ಅವರ ಆರೋಗ್ಯ ಕಾಪಾಡ ಬೇಕಿದೆ ಎಂದರು.
ಕರಾರಸಾ ಸಂಸ್ಥೆ ಮುಖಂಡರಾದ ನಾರಾಯಣ ಸ್ವಾಮಿ ಮಾತನಾಡಿ, ಕೊರೊನಾದಿಂದ ಬಡವರ್ಗ, ನಿರಾಶ್ರಿತರ ಸೇವೆಗೆ ತೊಡಗಿರುವ ಕೆ.ಆರ್.ತ್ಯಾಗರಾಜ್, ತಂಡದವರ ಸೇವೆಯನ್ನು ಪ್ರಶಂಸಿಸಿದರು. ರೈಲ್ವೆ ನಿಲ್ದಾಣ, ಗಡಿಯಾರ ವೃತ್ತ, ಬಸ್ ನಿಲ್ದಾಣ ಮುಂತಾದ ಕಡೆ ಆಹಾರ, ಹಣ್ಣು ನೀಡಲಾಯಿತು. ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಸುಧಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಿ ವೆಂಕಟೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಿ.ಟಿ.ಪ್ರಭಾವತಿ, ಪುಷ್ಪ ಲತಾ, ನಂದಿನಿ, ಜಿಲ್ಲಾ ಸಂಚಾಲಕ ಕೊಂಡರಾಜ ನಹಳ್ಳಿ ವಿ.ಜಗದೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಮರನಾಥ ಸ್ವಾಮಿ, ಕೆಎಸ್ಆರ್ಟಿಸಿ ನಾರಾಯಣಸ್ವಾಮಿ, ಆಟೋ ಘಟಕದ ತಾಲೂಕು ಅಧ್ಯಕ್ಷ ಮಂಜುನಾಥರಾವ್, ಮೋನಿಶ್ ಶೈಲೇಂದ್ರ ಟಿ.ವಿಕ್ರಮಾದಿತ್ಯ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು