ಕೋಲಾರಕ್ಕೆ ಏ.5 ರಂದು ರಾಹುಲ್, ಕಾಂಗ್ರೆಸ್ ಶಕ್ತಿ ಪ್ರದರ್ಶನ
Team Udayavani, Mar 29, 2023, 6:45 AM IST
ಬೆಂಗಳೂರು: ರಾಹುಲ್ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹತೆ ಬಳಿಕ ಮೊದಲ ಬಾರಿಗೆ ಎ. 5ರಂದು ಕೋಲಾರದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದೆ.
ಕೋಲಾರ ಹೊರವಲಯದ ಟಮಕ ಬಳಿ ಸಮಾವೇಶಕ್ಕೆ ಸ್ಥಳ ನಿಗದಿಯಾಗಿದ್ದು, 2 ಲಕ್ಷ ಜನರನ್ನು ಸೇರಿಸಲು ನಿರ್ಧರಿಸಲಾಗಿದೆ. ಇದೊಂದು ರೀತಿಯಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡುವ ಸಮಾವೇಶವೂ ಆಗಲಿದೆ ಎಂದು ಹೇಳಲಾಗಿದೆ.
ಕೋಲಾರದಲ್ಲಿ ಕಳೆದ ಲೋಕಸಭೆ ಚುನಾವಣೆ ವೇಳೆ ಮಾಡಿದ ಭಾಷಣ ಹಿನ್ನೆಲೆಯಲ್ಲಿ ರಾಹುಲ್ ಲೋಕಸಭೆ ಸದಸ್ಯತ್ವ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಅದೇ ನೆಲದಲ್ಲಿ ಬೃಹತ್ ಸಮಾವೇಶ ಮಾಡಿ ಸಂದೇಶ ರವಾನಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ರಾಹುಲ್ಗಾಂಧಿ ಸಮಾವೇಶಕ್ಕೆ ಪೂರ್ವಭಾವಿಯಾಗಿ ಮಾ. 29ರಿಂದ ಎ. 3ರ ವರೆಗೆ ಪ್ರತೀ ತಾಲೂಕಿನಲ್ಲಿ ಮುಖಂಡರ ಸಭೆ ನಡೆಸಲಾಗುತ್ತಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಕೇಂದ್ರೀಕೃತವಾಗಿಟ್ಟುಕೊಂಡು ಸಮಾವೇಶ ಮಾಡಲಾಗುತ್ತಿದೆಯಾದರೂ ರಾಮನಗರ, ತುಮಕೂರು, ಬೆಂಗಳೂರು ನಗರದಿಂದಲೂ ಸಮಾವೇಶಕ್ಕೆ ಜನರನ್ನು ಕರೆತರಲು ನಿರ್ದೇಶನ ನೀಡಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ