ಮಳೆಗಾಲದಲ್ಲಿ ರಸ್ತೆಗಳ ಬಣ್ಣ ಬಯಲು; ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳು

ಕೆರೆ ಕಟ್ಟೆ ಬಳಿ ಹಾಗೂ ಪುತ್ರಸೊಣ್ಣೆನಹಳ್ಳಿ ಬಳಿಯಂತೂ ಹೇಳ ತೀರದಾಗಿದೆ.

Team Udayavani, Jul 29, 2022, 6:21 PM IST

ಮಳೆಗಾಲದಲ್ಲಿ ರಸ್ತೆಗಳ ಬಣ್ಣ ಬಯಲು; ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳು

ಬಂಗಾರಪೇಟೆ: ಹಾಕಿದ ಬಣ್ಣ ಮಳೆ ನೀರಿನಲ್ಲಿ ಕಳಚಿ ಹೋಗುತ್ತದೆ ಎಂಬ ಗಾದೆ ಮಾತಿನಂತೆ ಗ್ರಾಮೀಣ ಪ್ರದೇಶದ ರಸ್ತೆಗಳ ಬಣ್ಣ ಸಹ ಮಳೆಗಾಲದಲ್ಲಿ ಬಯಲಿಗೆ ಬರಲಿದೆ ಎಂಬುದಕ್ಕೆ ಪಟ್ಟಣದಿಂದ ಬಂಗಾರಪೇಟೆಯಿಂದ ಕಾಮಸಮುದ್ರಕ್ಕೆ ಹೋಗುವ ರಸ್ತೆಯೇ ಸಾಕ್ಷಿಯಾಗಿದೆ.

ಪಟ್ಟಣದಿಂದ ಕೇವಲ 15 ಕಿ.ಮೀ ದೂರವಿರುವ ಕಾಮಸಮುದ್ರ ಹೋಬಳಿ ಕೇಂದ್ರಕ್ಕೆ ಹೋಗುವ ಮುಖ್ಯ ರಸ್ತೆ ಅರ್ಧದಷ್ಟು ಭಾಗ ಸಂಪೂರ್ಣ ಹಾಳಾಗಿ, ವಾಹನಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಒಂಡೆದೆ ಲೋಕೋಪಯೋಗಿ ಇಲಾಖೆ ಅನುದಾನ ಕೊರತೆಯ ನಡುವೆಯೂ ಗ್ರಾಮೀಣ ರಸ್ತೆ ಹಾಗೂ ಪ್ರಮುಖ ರಸ್ತೆಗಳಿಗೆ ಡಾಂಬರು ಭಾಗ್ಯ ಕಾಣಿಸಿ, ರಸ್ತೆಗಳ ಗುಣಮಟ್ಟಕ್ಕೆ ಶ್ರಮಿಸುತ್ತಿದ್ದರೆ. ಮತ್ತೂಂದೆಡೆ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಡಾಂಬರು
ಕಂಡ ರಸ್ತೆಗಳು, ಕೆಲವೇ ತಿಂಗಳಲ್ಲಿ ಮತ್ತೆ ಹಳೇ ಸ್ಥಿತಿಗೆ ಮರುಳುತ್ತಿರುವುದು ವಿಪರ್ಯಾಸವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ವಾಹನ ಸವಾರರ ಪರದಾಟ: ಪಟ್ಟಣದಿಂದ ಕಾಮಸಮುದ್ರಕ್ಕೆ ಹೋಗುವ ರಸ್ತೆ ದಿನ್ನಕೊತ್ತೂರು ಗ್ರಾಮದ ಬಳಿ ಸಂಪೂರ್ಣ ಹಾಳಾಗಿ, ಹಳ್ಳಗಳಿಂದ ಕೂಡಿದೆ. ಮೊದಲೇ ವಾಹನಗಳ ಸಂಚಾರಕ್ಕೆ ಸಾಹಸ ಮಾಡಿಕೊಂಡು ಹೋಗಬೇಕು. ಇನ್ನು ಮಳೆ ಬಂದರಂತೂ ಯಾವುದು ರಸ್ತೆ, ಯಾವುದು ಹಳ್ಳ ಎಂಬ ವ್ಯತ್ಯಾಸ ತಿಳಿಯದೆ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯನ್ನು ಇದುವರೆಗೂ 10 ಬಾರಿ ತೇಪೆ ಕೆಲಸ ಮಾಡಲಾಗಿದೆ. ಆದರೆ, ಅದು ಕೇವಲ ವಾರದೊಳಗೆ ಕಿತ್ತು ಮತ್ತೆ ಹಳೇ ಸ್ಥಿತಿಗೆ ಬಂದರೂ, ಲೋಕೋಪಯೋಗಿ ಇಲಾಖೆ ಮಾತ್ರ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ.

ಇದೇ ಮಾರ್ಗದಲ್ಲಿ ಪರವನಹಳ್ಳಿ ಕೆರೆ ಕಟ್ಟೆ ಬಳಿ ಹಾಗೂ ಪುತ್ರಸೊಣ್ಣೆನಹಳ್ಳಿ ಬಳಿಯಂತೂ ಹೇಳ ತೀರದಾಗಿದೆ. ವರದಾಪುರ ಗೇಟ್‌ ಬಳಿಯೂ ವಾಹನಗಳ ಸವಾರರು ಜನಪ್ರತಿನಿಧಿಗಳನ್ನು ಶಪಿಸಿಕೊಂಡೇ ಹೋಗುವುದು ನಿತ್ಯ ಕಾಯಕವಾಗಿದೆ.

ಎಂಜಿನಿಯರ್‌ ಬರುವುದೇ ಅಪರೂಪ: ರಾತ್ರಿ ವೇಳೆ ರಸ್ತೆ ಮಧ್ಯದಲ್ಲಿರುವ ಗುಂಡಿಗಳು ತಿಳಿಯದೆ ಹಲವು ದ್ವಿಚಕ್ರ ವಾಹನಗಳ ಸವಾರರು ಬಿದ್ದು, ಗಾಯ ಗೊಂಡಿರುವ ಉದಾಹರಣೆಗಳಿವೆ. ಇಲ್ಲಿನ ಸಹಾಯಕ ಎಂಜಿನಿಯರ್‌ ಆಗಿರುವ ಚಂದ್ರಯ್ಯ ಕಚೇರಿಗೆ ಬರುವುದೇ ಅಪರೂಪವಾಗಿದೆ. ಯಾವುದಾದರೂ ಕಾಮಗಾರಿ ಬಿಲ್‌ ಮಾಡಬೇಕಾದರೆ ಮಾತ್ರ ಕಚೇರಿ ಸಿಗಲಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ.

ಕಳಪೆ ಕಾಮಗಾರಿ ಕಂಡರೆ ಅಂತಹ ಗುತ್ತಿಗೆ ದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹಲವು ಬಾರಿ ಶಾಸಕರು ಹೇಳಿದ್ದರೂ ಇದುವರೆಗೂ ಯಾವ ಗುತ್ತಿಗೆದಾರರು ಅಂತಹ ಪಟ್ಟಿಯಲ್ಲಿ ಹೆಸರು ಪಡೆದಿಲ್ಲ. ರಸ್ತೆಗಳು ಮಾತ್ರ ಕಳಪೆ ಕಾಮಗಾರಿಯಿಂದ ಕೂಡಿರುವುದು ಕಣ್ಣಿಗೆ ರಾಚುತ್ತಿದೆ. ಇನ್ನಾದರೂ ಅಧಿಕಾರಿಗಳು ಗುಣಮಟ್ಟದ ರಸ್ತೆಗಳಿಗೆ ಆದ್ಯತೆ ನೀಡಲಿ, ಅವ್ಯವಸ್ಥೆಯಿಂದ ಕೂಡಿರುವ ರಸ್ತೆಗಳಿಗೆ ಮೋಕ್ಷ ಕಲ್ಪಿಸಿ, ವಾಹನಗಳು ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಲಿ ಎಂಬುದು ವಾಹನ ಸವಾರರು ಒತ್ತಾಯಿಸಿದ್ದಾರೆ.

ಹಲವು ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದೊಂದೇ ಸ್ಥಳದಲ್ಲಿ ತೇಪೇ ಕೆಲಸ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ. ಈ ಜಾಗದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿ ಸಿದ್ದರೂ ಇದುವರೆಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ಹೇಳಿ ಹೇಳಿ ಸಾಕಾಗಿದೆ.
●ಕೆ.ಎಂ.ಮಂಜುನಾಥ್‌,
ಮಾಜಿ ಅಧ್ಯಕ್ಷ, ಕೆಸರನಹಳ್ಳಿ ಗ್ರಾಪಂ

ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ರಸ್ತೆ ಅಭಿವೃದ್ಧಿಯನ್ನು ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್‌ಎಚ್‌ಡಿಪಿ) ಇವರು ನಿರ್ವಹಣೆ ಮಾಡಲಿದ್ದಾರೆ. ಈ ಕಾಮಗಾರಿಯು ಶೀಘ್ರದಲ್ಲೇ ಆರಂಭಗೊಳ್ಳಲಿದೆ.
●ಎಂ.ಸರಸ್ವತಿ, ಎಇಇ, ಲೋಕೋಪಯೋಗಿ
ಇಲಾಖೆ, ಬಂಗಾರಪೇಟ

●ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.