ಬೆಳೆ ಪರಿಹಾರ ಬಿಡುಗಡೆ ಮಾಡಿ
Team Udayavani, Aug 18, 2020, 2:37 PM IST
ಸಾಂದರ್ಭಿಕ ಚಿತ್ರ
ಕೋಲಾರ: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಹೂ ಮತ್ತು ಟೊಮೆಟೋ ಬೆಳೆಗಳಿಗೆ ಸರ್ಕಾರವು ಘೋಷಿಸಿದ್ದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹೊರತುಪಡಿಸಿ ಅರ್ಜಿ ಸಲ್ಲಿಸಿದ್ದ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಒತ್ತಾಯಿಸಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಮುಂದೆ ಹೋರಾಟ ಮಾಡಿ ಉಪ ನಿರ್ದೇಶಕರನ್ನು ಒತ್ತಾಯಿಸಲಾಯಿತು.
ಹೋರಾಟದ ನೇತೃತ್ವವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಲಾಕ್ ಡೌನ್ ಸಮಯದಲ್ಲಿ ಹೂ ಮತ್ತು ಟೊಮೆಟೋ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರವು ಹೂ ಬೆಳೆ ಪ್ರತಿ ಹೆಕ್ಟೇರ್ಗೆ 25 ಸಾವಿರ ರೂ.ಗಳಂತೆ ಇನ್ನಿತರೆ ವಾಣಿಜ್ಯ ಬೆಳೆಗಳಿಗೂ ಪರಿಹಾವನ್ನು ಘೋಷಣೆ ಮಾಡಿತ್ತು. ಆದರೆ, ಬೆಳೆ ಸಮೀಕ್ಷೆ ಮಾಡಿ ಅಧಿಕಾರಿಗಳು ವರದಿ ನೀಡಿದ್ದವರಿಗೆ ಮಾತ್ರವೇ ಇದೀಗ ಪರಿಹಾರ ಬಂದಿದ್ದು, ರೈತರೇ ಹೋಗಿ ಸ್ವ ಇಚ್ಛೆಯಿಂದ ಅರ್ಜಿ ಸಲ್ಲಿಸಿದ್ದ ಬೆಳೆಗಳಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ದೂರಿದರು.
ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಇವತ್ತು ನಾಳೆ ಎನ್ನುತ್ತಿದ್ದು, ಅವರ ವೈಫಲ್ಯದಿಂದಲೇ ರೈತರಿಗೆ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಿ ಸರ್ಕಾರಕ್ಕೆ ಒತ್ತಡ ಹಾಕಿ ಬೆಳೆ ನಷ್ಟ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಉಪನಿರ್ದೇಶಕಿ ಗಾಯಿತ್ರಿ, ಅರ್ಜಿ ಸಲ್ಲಿಸಿರುವ ಹೂ ಬೆಳೆಗಾರರಿಗೆ 15-20 ದಿನಗಳಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ