ರಾಜಕಾಲುವೆ, ಕೆರೆಕಟ್ಟೆ, ಕೋಡಿ ದುರಸ್ತಿ ಮಾಡಿ

ಸೋಮಾಂಬುಧಿ ಅಗ್ರಹಾರ ಕೆರೆಗೆ ಸ್ವೀಕರ್‌ ರಮೇಶ್‌ಕುಮಾರ್‌ ಭೇಟಿ • ಜಾಲಿ, ಒತ್ತುವರಿ ತೆರವಿಗೆ ಸೂಚನೆ

Team Udayavani, Jun 23, 2019, 12:58 PM IST

kolar-tdy-1..

ಕೋಲಾರ ತಾಲೂಕಿನ ಸೋಮಾಂಬುಧಿ ಅಗ್ರಹಾರ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ವೀಕರ್‌ ರಮೇಶ್‌ಕುಮಾರ್‌, ಕಟ್ಟೆ, ಕೋಡಿ ದುರಸ್ತಿ ಪರಿಶೀಲಿಸಿದರು.

ಕೋಲಾರ: ತಾಲೂಕಿನ ದೊಡ್ಡ ಕೆರೆಯಾಗಿರುವ ಸೋಮಾಂಬುಧಿ ಅಗ್ರಹಾರ ಕೆರೆಯ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ, ಕೆರೆಯ ಕೋಡಿ, ಕಟ್ಟೆ ದುರಸ್ತಿ ಕಾರ್ಯವನ್ನು ಶೀಘ್ರ ಮುಗಿಸಿ ಎಂದು ಕೆ.ಸಿ. ವ್ಯಾಲಿ ಕಾಮಗಾರಿ ವಹಿಸಿಕೊಂಡಿರುವ ಮೆಘಾ ಕನ್‌ಸ್ಟ್ರಕ್ಷನ್‌ ಕಂಪನಿ ಎಂಡಿಗೆ ಸ್ವೀಕರ್‌ ರಮೇಶ್‌ಕುಮಾರ್‌ ಸೂಚನೆ ನೀಡಿದರು.

ತಾಲೂಕಿನ ಸೋಮಾಂಬುಧಿ ಅಗ್ರಹಾರ ಕೆರೆಗೆ ಶನಿವಾರ ಅಧಿಕಾರಿಗಳೊಂದಿಗೆ ಆಗಮಿಸಿದ್ದ ರಮೇಶ್‌ಕುಮಾರ್‌, ಈ ಕೆರೆಗೆ ನೀರು ಬಂದು ಹಲವು ವರ್ಷಗಳೇ ಉರುಳಿರುವುದರಿಂದ ಇದರ ಕೋಡಿ ಮತ್ತು ಕಟ್ಟೆ ದುರಸ್ತಿಗೆ ಕ್ರಮವಹಿಸಲು ಸೂಚಿಸಿದರು. ರಾಜಕಾಲುವೆಯನ್ನು ಇಂದೇ ಸರಿಪಡಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಿ, ನಂತರ ನೀರು ಹೆಚ್ಚಾದರೆ ಈ ಕೆಲಸ ಮಾಡಲು ಆಗುವುದಿಲ್ಲ ಎಂದು ಹೇಳಿದರು. ರಾಜಕಾಲುವೆಯಲ್ಲಿ ಮರಳಿಗಾಗಿ 15 ಅಡಿ ಆಳದ ಗುಂಡಿಗಳನ್ನು ತೋಡಿರುವುದರಿಂದ ನೀರು ಹರಿಯದೇ ಅಲ್ಲೇ ನಿಲ್ಲುತ್ತಿದ್ದು, ಕೆರೆಯಂಗಳಕ್ಕೆ ಬರುತ್ತಿಲ್ಲ, ಇದನ್ನು ಮೊದಲು ಸರಿಪಡಿಸಲು ಸೂಚಿ ಸಿದ ಅವರು, ನಮ್ಮ ಕಡೆ ನೀರು ಬರಲು ಒಂದು ತಿಂಗಳು ತಡವಾದರೂ ಪರವಾಗಿಲ್ಲ, ಈ ಕೆರೆ ಭರ್ತಿ ಯಾದ ನಂತರ ಕೋಡಿ ಹರಿಯಲಿ, ಈ ದೊಡ್ಡ ಕೆರೆ ತುಂಬಿದರೆ ಈ ಭಾಗದ ಕನಿಷ್ಠ 10 ಕಿ.ಮೀ. ವ್ಯಾಪ್ತಿ ಯಲ್ಲಿ ಅಂತರ್ಜಲ ವೃದ್ಧಿಯಾಗಿ ರೈತರ ಬದುಕು ಹಸನಾಗಲಿದೆ ಎಂದು ಅಭಿಪ್ರಾಯಪಟ್ಟರು.

ಜಾಲಿಗಿಡ ನಾಶ, ಒತ್ತುವರಿ ತೆರವು: ನೆರಳು, ಹಣ್ಣು ನೀಡಲ್ಲ, ಪ್ರಾಣಿಗಳಿಗೆ ಮೇವು ಆಗಲ್ಲ, ಇಂತಹ ದರಿದ್ರ ಜಾಲಿಯನ್ನು ಕೆರೆಗಳಿಗೆ ಯಾರು ತಂದು ಹಾಕಿದರೋ ಎಂದು ಬೇಸರ ವ್ಯಕ್ತಪಡಿಸಿದ ಅವರು, ಯಾರ ಅನು ಮತಿಯೂ ಬೇಕಾಗಿಲ್ಲ. ಜೆಸಿಬಿ ಮೂಲಕ ಒಂದು ಕಡೆ ಎಳೆದು ತಂದು ಬೆಂಕಿ ಹಾಕಿ ಸುಟ್ಟುಬಿಡಿ ಎಂದು ಸೂಚಿಸಿದರು.

ಕೆರೆಯ ಗಡಿ ಗುರುತಿಸಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಮತ್ತೆ ಒತ್ತುವರಿಯಾಗದಂತೆ ಟ್ರಂಚ್ ಹೊಡೆಯಲು ಸೂಚಿಸಿದರು.ಕೆರೆ ಅಭಿವೃದ್ಧಿ ಕಾಮ ಗಾರಿಗೆ ಸಂಬಂಧಿಸಿದಂತೆ ಯಾರ ಅನುಮತಿಯೂ ಅಗತ್ಯವಿಲ್ಲ, ಮೆಘಾ ಕನ್ಸ್‌ಟ್ರಕ್ಷನ್‌ ಕಂಪನಿ ಎಂಡಿ ಸುಭಾಷ್‌ ಅವರಿಗೆ ಯಾವುದೇ ಸಲಹೆ, ಸಹಕಾರ ಬೇಕಿದ್ದರೆ ಕೆ.ಸಿ. ವ್ಯಾಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಕೃಷ್ಣಪ್ಪ ಸಹಕರಿಸುವರು ಎಂದರು.

ಕಾಮಗಾರಿಗೆ ಅನುಮತಿ ಅಗತ್ಯವಿಲ್ಲ, ನೀವೇ ಒಪ್ಪಿಗೆ ನೀಡಿ ಅನುದಾನ ನೀಡಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ ದುರಸ್ತಿ: ಸ್ವೀಕರ್‌ ರಮೇಶ್‌ಕುಮಾರ್‌ ಸೂಚನೆಯಂತೆ ಜೆಸಿಬಿಗಳ ಮೂಲಕ ರಾಜಕಾಲುವೆ ಸರಿಪಡಿಸುತ್ತಿದ್ದಂತೆ ಕೆ.ಸಿ. ವ್ಯಾಲಿ ನೀರು ಅಗ್ರಹಾರ ಕೆರೆಯ ಕಟ್ಟೆ, ಕೋಡಿಯ ಕಡೆಗೆ ಹರಿದಾಗ ಅಲ್ಲಿದ್ದವರ ಸಂತಸಕ್ಕೆ ಪಾರವಿಲ್ಲದಾಯಿತು. ಈ ಸಂದರ್ಭದಲ್ಲಿ ಮೆಘಾ ಕನ್‌ಸ್ಟ್ರಕ್ಷನ್‌ ಕಂಪನಿ ಎಂಡಿ ಸುಭಾಷ್‌, ಕೆ.ಸಿ. ವ್ಯಾಲಿ ಎಇಇ ಕೃಷ್ಣಪ್ಪ, ಸಣ್ಣ ನೀರಾವರಿ ಎಇಇ ಬೈರಾ ರೆಡ್ಡಿ, ಕೋಲಾರ ಹಾಲು ಒಕ್ಕೂಟದ ನಿರ್ದೇಶಕ ಹನು ಮೇಶ್‌, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಾದ ಮಂಗಲ ಮಂಜುನಾಥ್‌, ಮುಖಂಡರಾದ ಭೂಪತಿ ಗೌಡ, ನಾಗಪ್ಪ, ಮಂಜು ನಾಥ್‌, ಸಾದೇಗೌಡ, ರಮೇಶ್‌, ಬೈರೇಗೌಡ, ರಾಜಪ್ಪ ಮತ್ತಿತರರಿದ್ದರು.

ತಡೆ ತೆರವಿಗೆ ಜೀವ ಬಿಗಿಹಿಡಿದು ಕಾಯ್ತಿದ್ದೆ:

ಬರ, ಅಂತರ್ಜಲ ಕೊರತೆ, ಕೊಳವೆ ಬಾವಿಗಳು ಬತ್ತಿಹೋಗಿದ್ದು, ನಮ್ಮ ರೈತರ ಬದುಕು ನರಕವಾಗಿತ್ತು. ಇಂತಹ ಸಂದರ್ಭದಲ್ಲಿ ಕೆ.ಸಿ. ವ್ಯಾಲಿಗೆ ಮಹಾನುಭಾವರು ತಡೆ ತಂದಿದ್ದರು ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ನೊಂದು ನುಡಿದರು. ಸುಪ್ರೀಂಕೋರ್ಟ್‌ನಲ್ಲಿ ನಾನು ಸ್ವೀಕರ್‌ ಎಂದು ಯಾರೂ ಗುರುತಿಸುವುದಿಲ್ಲ, ಅಲ್ಲಿ ವಕೀಲರು, ಸಾಕ್ಷಿಗಳೇ ಅಂತಿಮ. ಇಂತಹ ಸಂದರ್ಭದಲ್ಲಿ ತಡೆಯಾಜ್ಞೆ ತೆರವಿನ ಆದೇಶ ಬರುವವರೆಗೂ ಜೀವ ಬಿಗಿಹಿಡಿದು ಕಾಯುತ್ತಿದ್ದೆ ಎಂದು ಆ ಸಂದರ್ಭವನ್ನು ಸ್ಮರಿಸಿದರು. ಈಗ 240 ಎಂಎಲ್ಡಿ ನೀರು ಹರಿಯುತ್ತಿದ್ದು, ಹೆಚ್ಚುವರಿಯಾಗಿ ನೀರು ಬಿಡಲು ಕ್ರಮವಹಿಸಬೇಕಾಗಿದೆ. ಕೆರೆಗಳು ಭರ್ತಿಯಾದರೆ ಅಂತರ್ಜಲ ವೃದ್ಧಿಯಾಗುತ್ತದೆ, ರೈತರು ಯಾವುದೇ ಕಾರಣಕ್ಕೂ ನೇರವಾಗಿ ಕೃಷಿಗೆ ನೀರು ಬಳಸಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.