ಖಾಸಗಿ ಬಸ್‌ ನಿಯಂತ್ರಣಕ್ಕೆ ಆಗ್ರಹ

ಆರ್‌ಟಿಒ ಕಚೇರಿ ಮುಂದೆ ರೈತ ಸಂಘ ಧರಣಿ • ದಲ್ಲಾಳಿಗಳ ನಿಯಂತ್ರಣಕ್ಕೆ ಒತ್ತಾಯ

Team Udayavani, Jul 26, 2019, 9:16 AM IST

kolar-tdy-01

ಕೋಲಾರದಲ್ಲಿ ಜನ ಸಾಮಾನ್ಯರನ್ನು ಶೋಷಣೆ ಮಾಡುವ ಇಲಾಖೆಯಲ್ಲಿನ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತ ಸಂಘ ಆರ್‌ಟಿಒ ಕಚೇರಿ ಮುಂದೆ ಧರಣಿ ನಡೆಸಿತು.

ಕೋಲಾರ: ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಟಿಪ್ಪರ್‌ ಹಾಗೂ ಖಾಸಗಿ ಬಸ್‌ಗಳ ಹಾವಳಿಗೆ ಕಡಿವಾಣ ಹಾಕಿ, ಹೆಜ್ಜೆ ಹೆಜ್ಜೆಗೂ ಜನ ಸಾಮಾನ್ಯರನ್ನು ಶೋಷಣೆ ಮಾಡುವ ಇಲಾಖೆ ಯಲ್ಲಿನ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತ ಸಂಘ ಆರ್‌.ಟಿ.ಒ ಕಚೇರಿ ಮುಂದೆ ಹೋರಾಟ ಮಾಡಿ, ಸೂಪರಿಡೆಂಟ್ ಭೀಮಯ್ಯಗೆ ಮನವಿ ನೀಡಿ ಆಗ್ರಹಿಸಿತು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಆರ್‌.ಟಿ.ಒ ಇಲಾಖೆ ಇಂದು ಚಿನ್ನದ ಮೊಟ್ಟೆಯಿಡುವ ಕೋಳಿಯಂತಾಗಿದೆ. ಹಣ ಕೊಟ್ಟರೆ ಯಾವುದೇ ವಾಹನಕ್ಕೂ ಗುಣಮಟ್ಟದ ಪರೀಶಿಲನಾ ಪತ್ರ ನೀಡುವ ಅಧಿಕಾರಿಗಳು ಸಮರ್ಪಕವಾಗಿ ವಾಹನವನ್ನು ಪರಿಶೀಲನೆ ಮಾಡುವ ಶ್ರಮ ತೆಗೆದುಕೊಳ್ಳುವುದಿಲ್ಲ ಎಂದರು.

ಕ್ರಮವಿಲ್ಲ: ದಲ್ಲಾಳಿಗಳು ಮತ್ತು ಇಲಾಖೆಯಲ್ಲಿನ ಕೆಳ ಹಂತದ ಅಧಿಕಾರಿಗಳ ಮಾತೇ ವೇದವಾಕ್ಯವಾಗಿದೆ. ಅಧಿಕಾರಿಗಳಿಗೆ ಹಾಗೂ ದಲ್ಲಾಳಿಗಳಿಗೆ ಹಣದಾಟ ಜನಸಾಮಾನ್ಯರಿಗೆ ಪ್ರಾಣ ಸಂಕಟವಾಗಿದೆ. ಇನ್ನೂ ನೂರಾರು ಅಮಾಯಕ ಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಖಾಸಗಿ ಬಸ್‌ಗಳು ಮತ್ತು ಟಿಪ್ಪರ್‌ ಹಾವಳಿಯಿಂದ ಜನಸಾಮಾನ್ಯರನ್ನು ರಕ್ಷಣೆ ಮಾಡುವಲ್ಲಿ ಆರ್‌. ಟಿ.ಒ ಅಧಿಕಾರಿಗಳು ವಿಫ‌ಲವಾಗಿದ್ದಾರೆ ಎಂದರು.

ಅಮಾಯಕರು ಬಲಿ: ಜಿಲ್ಲಾದ್ಯಂತ ಟೇಕಲ್, ಲಕ್ಕೂರು, ಮಾಲೂರು, ನರಸಾಪುರ, ವೇಮಗಲ್, ಮತ್ತಿತರ ಅತಿ ಹೆಚ್ಚು ಜಲ್ಲಿ ಕ್ರಷರ್‌ಗಳಿರುವ ಸ್ಥಳಗಳಲ್ಲಿ ಜನರ ಕಣ್ಣು ಮುಂದೆಯೇ ಹಾಡು ಹಗಲೇ ಅಮಾಯಕ ಜನರು ಟಿಪ್ಪರ್‌ ಲಾರಿಗಳ ವೇಗ ಹಾಗೂ ಹೆಚ್ಚಿನ ಟನ್ನೇಜ್‌ ಹಾಕಿಕೊಂಡು ಸಮರ್ಪಕವಾದ ಪರವಾನಗಿ ಇಲ್ಲದ ಚಾಲಕರ ಬೇಜವಾಬ್ದಾರಿಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ ಎಂದರು.

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರಸ್ತೆಗಳನ್ನು ಅಭಿವೃದ್ಧಿ ಮಾಡಿದರೆ ಆ ರಸ್ತೆಗಳು ಟಿಪ್ಪರ್‌ ಲಾರಿಗಳ ಹಾವಳಿಗೆ ಮೂರೇ ದಿನಕ್ಕೆ ಸಂಪೂರ್ಣವಾಗಿ ಹದಗೆಡುತ್ತಿವೆ. ಇಷ್ಟೆಲ್ಲಾ ಅವ್ಯವಸ್ಥೆ ಕಣ್ಮುಂದೆ ಇದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ತಾಲೂಕಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌ ಮಾತನಾಡಿ, ಇಲಾಖೆಯೆಂಬುದು ಶ್ರೀಮಂತರಿಗೆ ಅಡವಿಟ್ಟು, ಬಡವರಿಗೆ ಮುಳ್ಳಿನ ಹಾದಿಯಾಗಿದೆ. ಅದೇ ಒಬ್ಬ ಜನಸಾಮಾನ್ಯ ತಪ್ಪು ಮಾಡಿದರೆ ಅವರ ಮೇಲೆ ಕಾನೂನು ಎಂಬ ಬ್ರಹ್ಮಾಸ್ತ್ರ ಎತ್ತುವ ಅಧಿಕಾರಿಗಳು ದೊಡ್ಡ ದೊಡ್ಡ ಶ್ರೀಮಂತರು ತಪ್ಪು ಮಾಡಿದರೆ ಅದನ್ನು ಸರಿಪಡಿಸಿಕೊಳ್ಳಲು ಇವರೇ ತುದಿಗಾಲಲ್ಲಿ ನಿಂತು ಅವರ ಮನೆ ಬಾಗಿಲಿಗೆ ಕಚೇರಿಯನ್ನು ತೆಗೆದುಕೊಂಡು ಹೋಗುತ್ತಾರೆ ಎಂದರು.

ಮನವಿ ಸ್ವೀಕರಿಸಿದ ಸೂಪರ್‌ಡೆಂಟ್ ಬೀಮಯ್ಯ ಮಾತನಾಡಿ, ಕಚೇರಿಯಲ್ಲಿ ಅವ್ಯವಸ್ಥೆ ಹಾಗೂ ದಲ್ಲಾಳಿಗಳ ಹಾವಳಿಯ ಬಗ್ಗೆ ಸಾರ್ವಜನಿಕರ ದೂರುಗಳು ಹೆಚ್ಚಾಗಿವೆ, ಜೊತೆಗೆ ಅಮಾಯಕ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಖಾಸಗಿ ಬಸ್‌ ಮತ್ತು ಟಿಪ್ಪರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಹೋದರೆ ರಾಜಕೀಯ ಒತ್ತಡಗಳು ಹೆಚ್ಚಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.