ಅಂಬೇಡ್ಕರ್ ಭವನ ಮೀಸಲು ಸ್ಥಳ ಸ್ವಚ್ಛಗೊಳಿಸಲು ಮನವಿ
Team Udayavani, Jun 19, 2020, 5:55 AM IST
ಶ್ರೀನಿವಾಸಪುರ: ಪಟ್ಟಣದ ಡಿಗ್ರಿ ಹಾಸ್ಟೆಲ್ಗೆ ಹೊಂದಿಕೊಂಡಿರುವ ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಬೆಳೆದಿರುವ ಮುಳ್ಳಿನ ಗಿಡ, ಕಸ ಕಡ್ಡಿಯನ್ನು ಜೆಸಿಬಿ ಯಂತ್ರದಿಂದ ಸ್ವಚ್ಛಗೊಳಿಸಲು ತಹಶೀಲ್ದಾರ್ ಎಸ್.ಎಂ.ಶ್ರೀನಿ ವಾಸ್ ಜೊತೆ ದಲಿತ ಸಂಘಟನೆಗಳ ಮುಖಂಡರು ಚರ್ಚೆ ನಡೆಸಿದರು.
ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆಂದು ಸರ್ವೆ ನಂಬರ್ 49ರಲ್ಲಿ 2 ಎಕರೆ ಜಮೀನು ಮೀಸಲಿರಿಸಲಾಗಿದೆ. ಈ ಜಮೀನಿನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಚಪ್ಪಡಿಯ ಮೇಲೆ ಬರೆದು ನೆಡಲಾಗಿತ್ತು. ಅದನ್ನು ಬುಧವಾರ ಜೆಸಿಬಿ ಯಂತ್ರದಿಂದ ಒಡೆದುಹಾಕಲಾಗಿತ್ತು. ಈ ಕೃತ್ಯ ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.
ಈ ಜಮೀನಿನಲ್ಲಿ ಒಂದಿಬ್ಬರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವುದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು. ಈ ಬೆಳವಣಿಗೆಯಲ್ಲಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಗುರುವಾರ ಭವ ನಕ್ಕೆ ಮೀಸಲಾದ ಜಮೀನಿನಲ್ಲಿ ಅಕ್ರಮವಾಗಿ ವಾಸವಿದ್ದವರ ಬಗ್ಗೆ ಮಾಹಿತಿ ಪಡೆದು, ಈ ಜಾಗ ಮೀಸಲಿಡಲಾಗಿದೆ, ಕಂದಾಯ ಇಲಾಖೆಗೆ ಸೇರಿದ್ದು, ಗ್ರಾಮ ಪಂಚಾಯ್ತಿ ಕೊಡುವುದಕ್ಕೆ ಬರುವುದಿಲ್ಲ.
ಆದರೂ ತಮ್ಮಲ್ಲಿ ಯಾವುದೇ ದಾಖಲೆಗಳಿದ್ದರೂ ಕಚೇರಿಗೆ ಬನ್ನಿ ಪರಿಶೀಲಿಸೋಣ, ನ್ಯಾಯಾಲಯಕ್ಕೆ ನಾನು ಬರುತ್ತೆನೆ ಎಂದು ತಿಳಿಸಿದರು. ಒತ್ತುವರಿ ಮಾಡಿದ್ದವರು ನಾವುಬಹಳ ವರ್ಷದಿಂದ ಇದ್ದೇವೆ, ಇದನ್ನು ಬಿಟ್ಟುಕೊಡಿ ಎಂದು ಮನವಿ ಮಾಡಿದರು. ಆದರೂ ದಾಖಲೆಗಳನ್ನು ಪರಿಶೀಲಿಸೋಣ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ