ಗಡಿ ಕನ್ನಡ ಭವನಕ್ಕೆ ಡಿವಿಜಿ ಹೆಸರಿಡಲು ಮನವಿ
Team Udayavani, Apr 22, 2019, 4:56 PM IST
ಮುಳಬಾಗಿಲು: ನಗರದ ಡಿವಿಜಿ ರಂಗಮಂದಿರ ಕಟ್ಟಡವು ಈಗ ಗಡಿ ಕನ್ನಡ ಭವನವಾಗಿ ಪರಿವರ್ತನೆಯಾಗಿದೆ. ಅದಕ್ಕೆ ಡಿವಿಜಿ ಅವರ ಹೆಸರನ್ನೇ ನಾಮಕರಣ ಮಾಡಬೇಕು ಎಂದು ಕುರುಡುಮಲೆಯ ವಿದ್ಯಾರ್ಥಿ ಮುಖಂಡ ಅರವಿಂದ್ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 1887, ಮಾರ್ಚ್ 17 ರಂದು ಮುಳಬಾಗಿಲಿನಲ್ಲಿ ಜನಿಸಿದ ಡಿ.ವಿ.ಗುಂಡಪ್ಪ ಬದುಕಿನ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಬಹುಮುಖ ಪ್ರತಿಭಾವಂತರಾಗಿ ಕನ್ನಡ ಪತ್ರಿಕೋದ್ಯಮ ಪಿತಾಮಹರಾಗಿದ್ದರು.
ಅಂತಹ ಕನ್ನಡ ಸಾರಸ್ವತ ಲೋಕದ ದಾರ್ಶನಿಕ ಮಂಕುತಿಮ್ಮನಿಗೆ ಡಾಕ್ಟರೆಟ್ನೊಂದಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ ಸೇರಿದಂತೆ ನೂರಾರು ಪ್ರಶಸ್ತಿಗಳು ಒಲಿದಿವೆ. ಸಾರಸ್ವತ ಲೋಕದ ದಿಗ್ಗಜರಾದ ಡಿ.ವಿ.ಗುಂಡಪ್ಪ ಅವರ ನೆನಪಿಗಾಗಿ ಹಲವು ವರ್ಷಗಳ ಹಿಂದೆ ನಗರದಲ್ಲಿ ನಿರ್ಮಿಸಿದ್ದ ಡಿವಿಜಿ ರಂಗಮಂದಿರಕ್ಕಿದ್ದ ಹೆಸರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ ಮರೆಮಾಚುತ್ತಿದೆ. ಹೀಗಾಗಿ ಶೀಘ್ರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಗಡಿ ಕನ್ನಡ ಭವನಕ್ಕೆ ಡಿವಿಜಿ ರಂಗಮಂದಿರ ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು