ಕಾಯ್ದಿರಿಸಿರುವ ಹುಲ್ಲುಗಾವಲು ಭೂಮಿ ಮಂಜೂರು ಬೇಡ

ಕುರಿಗಳ ಸಮೇತ ರೈತ ಸಂಘ,ಕುರಿಗಾಹಿಗಳಿಂದ ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ

Team Udayavani, Sep 11, 2021, 1:52 PM IST

ಕಾಯ್ದಿರಿಸಿರುವ ಹುಲ್ಲುಗಾವಲು ಭೂಮಿ ಮಂಜೂರು ಬೇಡ

ಮುಳಬಾಗಿಲು: ತಾಲೂಕಿನ ಬೈರಕೂರು ಹೋಬಳಿ ಟಿ.ಕುರುಬರಹಳ್ಳಿ ಗ್ರಾಮದಲ್ಲಿ ಹುಲ್ಲುಗಾವಲಿಗೆ ಮೀಸಲಿಟ್ಟಿರುವ ಸರ್ವೆ ನಂ.36, 37ರಲ್ಲಿನ
ಜಮೀನನ್ನು ದರಕಾಸ್ತು ಕಮಿಟಿಯಲ್ಲಿ ಗ್ರಾಮದ ಬಲಾಡ್ಯರಿಗೆ ನೀಡಬಾರದೆಂದು ವಿರೋಧಿಸಿ ರೈತ ಸಂಘ ಮತ್ತು ಕುರಿಗಾಹಿಗಳು ನಗರದ
ಮಿನಿವಿಧಾನಸೌಧ ಎದುರು ಕುರಿಗಳ ಸಮೇತ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಟಿ.ಕುರುಬರಹಳ್ಳಿಯಲ್ಲಿ ಶೇ.80 ನಾಯಕ
ಸಮುದಾಯ ವಾಸವಾಗಿದ್ದು, ಅವರು ತಮ್ಮ ಜೀವನ ನಿರ್ವಹಣೆಗೆ ಕುರಿ ಮೇಯಿಸುತ್ತಿ ದ್ದಾರೆ. ಟಿ.ಕುರುಬರಹಳ್ಳಿ ಸ.ನಂ. 36/1ರಲ್ಲಿನ 36 ಎಕರೆ ಹಾಗೂ ಸ.ನಂ. 37ರಲ್ಲಿ 25 ಎಕರೆ ಸೇರಿ 52 ಎಕರೆ ಜಮೀನನ್ನು ಹುಲ್ಲುಗಾವಲಿಗೆ ಮೀಸಲಿಟ್ಟು ಹಿಂದಿನ ತಹಶೀಲ್ದಾರ್‌ ಬಿ.ಎನ್‌
.ಪ್ರವೀಣ್‌ ಆದೇಶಿಸಿದ್ದರು. ಅಂತೆಯೇ ಜಮೀನನ್ನು ಕುರಿಗಾವಲಿಗೆ ಹೊರತುಪಡಿಸಿ, ಬೇರೆ ಚಟುವಟಿಕೆಗಳಿಗೆ ಮಂಜೂರು ಮಾಡಬಾರದೆಂಬ
ನಾಮಫ‌ಲಕ ಅಳವಡಿಸಿದ್ದರು ಎಂದರು.

ಮಂಜೂರಾತಿಗೆ ಮುಂದಾಗಿದ್ದ ಸರಿಯಲ್ಲ:
ಅದರಂತೆ ಕುರಿಗಾಹಿಗಳು ಈ ಜಮೀನಿನಲ್ಲಿ ಕುರಿ ಮೇಯಿಸಿಕೊಂಡಿರುವಾಗ ಗ್ರಾಮದ ಕೆಲವು ಬಲಾಡ್ಯರು ಕಂದಾಯ ಇಲಾಖೆಯಲ್ಲಿನ ಕೆಲ ಭ್ರಷ್ಟ ಅಧಿಕಾರಿಗಳು ಮತ್ತು ಕೆಲವು ದರಕಾಸ್ತು ಸದಸ್ಯರ ಕುಮ್ಮಕ್ಕಿನಿಂದ ಟಿ.ಕುರುಬರಹಳ್ಳಿ ಸ.ನಂ. 36/1ರಲ್ಲಿನ 36 ಎಕರೆ ಹಾಗೂ ಸ.ನಂ. 37ರಲ್ಲಿ 25 ಎಕರೆ ಜಮೀನನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಲು ಪ್ರಯತ್ನಿಸುತ್ತಿರುವುದು ಸರಿಯಾದಕ್ರಮ ಅಲ್ಲ ಎಂದು ದೂರಿದರು.

ಇದನ್ನೂ ಓದಿ:ಮುಂಬೈ: ನಿರ್ಭಯಾ ರೀತಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು

ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಒಂದು ವೇಳೆ ಹುಲ್ಲುಗಾವಲಿಗೆ ಮೀಸಲಿಟ್ಟಿರುವ ಗೋಮಾಳ ಜಮೀನನ್ನು ಬಲಾಡ್ಯರಿಗೆ ಮಂಜೂರು ಮಾಡಿದರೆ
ಭೂಮಿಗಾಗಿ ಟಿ.ಕುರುಬರಹಳ್ಳಿ ಕುರಿಗಾಹಿಗಳು ಮತ್ತು ರೈತ ಸಂಘದಿಂದ ಮಹಾಯುದ್ಧವೇ ನಡೆಯಲಿದೆ ಎಂದು ತಾಲೂಕು ಆಡಳಿತಕ್ಕೆ ಎಚ್ಚರಿಕೆ
ನೀಡಿದ ಅವರು ತಹಶೀಲ್ದಾರ್‌ ರಾಜಶೇಖರ್‌ಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್‌ ರಾಜಶೇಖರ್‌, ಯಾವುದೇ ಕಾರಣಕ್ಕೂ ಹುಲ್ಲುಗಾವುಲಿಗೆ ಮೀಸಲಿಟ್ಟಿರುವ ಗೋಮಾಳ
ಜಮೀನನ್ನು ದರಕಾಸ್ತು ಕಮಿಟಿಯಲ್ಲಿ ಮಂಜೂರು ಮಾಡುವುದಿಲ್ಲವೆಂದು ಭರವಸೆ ನೀಡಿದರು. ತಾಲೂಕು ಅಧ್ಯಕ್ಷ ಫಾರುಕ್‌ಪಾಷ, ಹಸಿರು ಸೇನೆ
ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ, ಮೂರಂಡಹಳ್ಳಿ ಶಿವಾರೆಡ್ಡಿ, ವಿಜಯ್‌ಪಾಲ್‌, ವೇಣು, ನವೀನ್‌, ಕೇಶವ, ಹೆಬ್ಬಣಿ ಆನಂದರೆಡ್ಡಿ, ನಂಗಲಿ ಯುವ ಮುಖಂಡ ಕಿಶೋರ್‌, ಧರ್ಮ, ನಾಗೇಶ್‌,ಟಿ.ಕುರುಬರಹಳ್ಳಿ ಗ್ರಾಮದ ರಾಮಕೃಷ್ಣಪ್ಪ ಮತ್ತು ಚನ್ನರಾಯಪ್ಪ ಹಲವರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.