ಸಂಚಾರಕ್ಕೆ ಅಡ್ಡಿಯಾಗಿದ್ದ ಕಟ್ಟಡ ಅವಶೇಷ ತೆರವು
Team Udayavani, Sep 29, 2019, 2:35 PM IST
ಕೆಜಿಎಫ್: ನಗರದ ಅಶೋಕ ನಗರದ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳ ಬೇಕಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದ ಕಟ್ಟಡಗಳ ಅವಶೇಷಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಶನಿವಾರ ತೆರವು ಗೊಳಿಸಿದರು.
ಜೆಸಿಬಿ ಯಂತ್ರದ ಸಹಾಯದಿಂದ ಕೆಡವಲಾಗಿದ್ದ ಕಟ್ಟಡದ ತ್ಯಾಜ್ಯವನ್ನು ಟ್ರಕ್ಗೆ ತುಂಬಿ ಹೊರಗಡೆ ಸಾಗಿಸ ಲಾಯಿತು. ಕಂಬಿಗಳನ್ನು ಗ್ಯಾಸ್ ಕಟರ್ ನಿಂದ ತುಂಡರಿಸಲಾಯಿತು. ಸಂಪಂಗಿ ಶಾಸಕರಾಗಿದ್ದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿದ್ದರು.
ರಸ್ತೆಗೆ ನೂರಾರು ಮನೆ ತೆರವು ಮಾಡಲಾಗಿತ್ತು. ಆದರೆ, 230 ಮೀಟರ್ ರಸ್ತೆಯಲ್ಲಿದ್ದ ಮನೆಗಳ ಮಾಲಿಕರು ರಸ್ತೆ ಅಗಲೀಕರಣಕ್ಕೆ ತಡೆ ಯೊಡ್ಡಿದ್ದರು. ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅವರೆಲ್ಲರ ಅಹವಾಲು ಕೇಳಿ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿತ್ತು. ಶುಕ್ರವಾರ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಜಿ.ಮಂಜುನಾಥ್, ಅಶೋಕ ನಗರ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ಕೆಲವು ಕಟ್ಟಡ ಮಾಲಿಕರ ಜೊತೆ ಮಾತನಾಡಿದರು.
ಸಹಮತ ಪಡೆದು ಕಟ್ಟಡ ತೆರವು ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.ಶಾಸಕಿ ರೂಪಕಲಾ ಅವರ ಮನವಿ ಮೇರೆಗೆ ಶೀಘ್ರ ವ್ಯಾಜ್ಯವನ್ನು ಇತ್ಯರ್ಥಮಾಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು