ಕಂದಾಯ ಅಧಿಕಾರಿಗಳು, ಸಿಬ್ಬಂದಿ ಮೇಲೆ ಹೆಚ್ಚು ದೂರು


Team Udayavani, Feb 20, 2020, 3:00 AM IST

kandaya-adi

ಬಂಗಾರಪೇಟೆ: ಇತ್ತೀಚೆಗೆ ತಾಲೂಕು ಕಂದಾಯ ಇಲಾಖೆ ವಿರುದ್ಧವೇ ಹೆಚ್ಚು ದೂರುಗಳು ಬರುತ್ತಿರುವುದರಿಂದ ತಾಲೂಕು ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಮಾತನಾಡಿದ ಅವರು, ಬಂಗಾರಪೇಟೆ ತಹಶೀಲ್ದಾರ್‌ ವ್ಯಾಪ್ತಿಯಲ್ಲಿ 8 ದೂರುಗಳು ಬಂದಿದ್ದು, ಈ ಎಲ್ಲವೂ ಕಂದಾಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆಯೇ ಹೆಚ್ಚಿವೆ ಎಂದು ಹೇಳಿದರು.

ಕೊಟ್ಟಿರುವ ಅರ್ಜಿಗಳ ಪರಿಶೀಲನೆ: ಇಂದಿನ ಕುಂದುಕೊರತೆ ಸಭೆಯಲ್ಲಿ ಒಟ್ಟು 8 ಅರ್ಜಿಗಳು ಬಂದಿದ್ದು, ಎಲ್ಲಾ ಅರ್ಜಿಗಳು ಕಂದಾಯ ಇಲಾಖೆಗೆ ಸೇರಿವೆ. ಇವುಗಳನ್ನು ತಹಶೀಲ್ದಾರ್‌ಗೆ ಕಳುಹಿಸಲಾಗುವುದು. ಅರ್ಜಿಗಳ ಸ್ಥಿತಿಗತಿ ಬಗ್ಗೆ ಪ್ರತಿ 15 ದಿನಗಳಿಗೊಮ್ಮೆ ವಿಚಾರಣೆ ಮಾಡಲಾಗುವುದು. ಸಂಬಂಧಪಟ್ಟ ಇಲಾಖೆಯು ಕ್ರಮಕೈಗೊಂಡು ಅರ್ಜಿ ವಿಲೇವಾರಿ ಮಾಡಿರುವ ಬಗ್ಗೆ ಸಮಗ್ರ ವರದಿ ನೀಡಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅರ್ಜಿದಾರರಿಗೂ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.

ದೂರು ನೀಡಿದ್ರೂ ಕ್ರಮವಿಲ್ಲ: ತಾಲೂಕಿನ ಬಂಗಾರಪೇಟೆ ಸರ್ವೆ ನಂ.138ರಲ್ಲಿನ 2.2 ಎಕರೆ ಖರಾಬು ಜಮೀನಿನಲ್ಲಿ 40ಕ್ಕೆ 60 ಅಡಿಗಳ ಜಾಗವನ್ನು ಅಕ್ರಮ ಸಕ್ರಮ ಯೋಜನೆಯಲ್ಲಿ ಸಕ್ರಮ ಮಾಡಿಕೊಡಬೇಕೆಂದು ಪಟ್ಟಣದ ಟಿಪ್ಪುನಗರದ ವಾಸಿ ಟಿ.ವೆಂಕಟಸ್ವಾಮಿ ಬಿನ್‌ ತಮ್ಮಣ್ಣ ಎಂಬುವವರು ತಾಲೂಕು ಕಚೇರಿಗೆ ಸಾಕಷ್ಟು ಬಾರಿ ದೂರು ನೀಡಿದರೂ ಕ್ರಮಕೈಗೊಂಡಿಲ್ಲ ಎಂದು ದೂರು ನೀಡಿದರು.

ಕಚೇರಿಗೆ ಅಲೆದಾಡಿಸುತ್ತಿದ್ದಾರೆ: ತಾಲೂಕಿನ ಜಯಮಂಗಲ ಗ್ರಾಮದ ಸರ್ವೆ ನಂ. 130 ಪಿ7, ಪಿ8ರಲ್ಲಿ ಒಟ್ಟು 4 ಎಕರೆ ಜಮೀನಿದ್ದು, ಈ ಜಮೀನಿನ ಅಕ್ಕಪಕ್ಕದವರಾದ ಗಣೇಶಪ್ಪ, ಶಿಮ್ಲಮ್ಮ, ಚಲಪತಿ, ವಿಶ್ವನಾಥ್‌, ಶ್ರೀನಿವಾಸ್‌, ಸುಬ್ರಮಣಿ ಎಂಬುವವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ, ನಮ್ಮ ಜಮೀನು ಗುರುತು ಮಾಡಿಕೊಡುವಂತೆ ತಹಶೀಲ್ದಾರ್‌ಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮಕೈಗೊಳ್ಳದೆ ಪ್ರತಿ ದಿನ ತಾಲೂಕು ಕಚೇರಿಗೆ ತಿರುಗಾಡಿಸುತ್ತಿದ್ದಾರೆ ಎಂದು ಪುಷ್ಪರಾಜ್‌ ದೂರು ನೀಡಿದ್ದಾರೆ.

ಅಂಬೇಡ್ಕರ್‌ ನವರಕ್ಷಣಾ ವೇದಿಕೆ, ಕರ್ನಾಟಕ ದಲಿತ ರೈತ ಸೇನೆ, ಸಿಂಗರಹಳ್ಳಿ ಎಂ.ಮಂಜುನಾಥ್‌ ಸೇರಿ 8 ಅರ್ಜಿದಾರರು ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಜಮೀನು ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. ತಾಪಂ ಇಒ ಎನ್‌.ವೆಂಕಟೇಶಪ್ಪ, ಲೋಕಾಯುಕ್ತ ಸರ್ಕಲ್‌ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್‌, ಪವನ್‌ಕುಮಾರ್‌, ಪಂಚಾಯತ್‌ ರಾಜ್‌ ಎಇಇ ಎಚ್‌.ಡಿ.ಶೇಷಾದ್ರಿ, ಲೋಕಾಯುಕ್ತ ಸಿಬ್ಬಂದಿ ಕೃಷ್ಣೇಗೌಡ, ದೇವಪ್ಪ ಇದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.