ಎತ್ತಿನಹೊಳೆ: ಕೆರೆ ಪುನಶ್ಚೇತನಕ್ಕೆ 100 ಕೋಟಿ ರೂ.

ಸದನದ ಒಪ್ಪಿಗೆ ಸಿಕ್ಕ ಕೂಡಲೇ 'ಜಲಧಾರೆ' ಯೋಜನೆ ಜಾರಿ | ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸಭೆ

Team Udayavani, Jul 2, 2019, 11:52 AM IST

kolar-tdy-1..

ಕೋಲಾರದ ಜಿಪಂ ಸಭಾಂಗಣದಲ್ಲಿ ಜಲಧಾರೆ ಯೋಜನೆ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಕೃಷ್ಣಬೆೈರೇಗೌಡ ಮಾತನಾಡಿದರು.

ಕೋಲಾರ: ಎತ್ತಿನಹೊಳೆ ಯೋಜನೆಯ ನೀರು ಹರಿಯುವ ಕೆರೆಗಳ ಪುನಶ್ಚೇತನಕ್ಕೆ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಿದೆ. ಅದೇ ರೀತಿ ಜಲಧಾರೆ ಯೋಜನೆ ಇನ್ನು ಅಂತಿಮಗೊಂಡಿಲ್ಲ. ಇದಕ್ಕೆ ಸದನದ ಅನುಮೋದನೆ ಸಿಕ್ಕಿದ ಕೂಡಲೇ ಡಿಸೆಂಬರ್‌ ಅಂತ್ಯದೊಳಗೆ ಟೆಂಡರ್‌ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಲಧಾರೆ ಯೋಜನೆ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎತ್ತಿನಹೊಳೆ ನೀರು ಮುಂದಿನ ದಿನಗಳಲ್ಲಿ ಹರಿದು ಬರಲಿದೆ, ಈಗಾಗಲೇ ಕೆ.ಸಿ.ವ್ಯಾಲಿ ನೀರು ಹರಿಯುತ್ತಿರುವುದರಿಂದ ಎರಡೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕುಡಿಯುವ ನೀರಿಗೆ ಶಾಶ್ವತ ಪರಿಹಾರ: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ರೂಪಿಸಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದು, ನೀರು ಪೋಲಾಗದಂತೆ ಹಂಚಿಕೆ ಮಾಡಬೇಕಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ವಿವರಿಸಿದರು.

ಆದ್ಯತೆ ಮೇಲೆ ನೀರು ಪೂರೈಕೆ: ಜಿಲ್ಲೆಗೆ ಕುಡಿಯುವ ನೀರಿಗಾಗಿ ಯರಗೋಳ್‌ ಹಾಗೂ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಂಡಿದ್ದು, ಎರಡೂ ಯೋಜನೆಗಳ ಕಾಮಗಾರಿ ಪ್ರಗತಿಯಲಿದೆ. ಇದರಿಂದ ಜಿಲ್ಲೆಯ ಕೆಲ ದೊಡ್ಡ ಕೆರೆಗಳಿಗೆ ನೀರು ಹರಿಸಿಕೊಂಡು ಸಮಸ್ಯೆಯಿರುವ ಗ್ರಾಮಗಳಿಗೆ, ಪಟ್ಟಣ, ನಗರಗಳಿಗೆ ಆದ್ಯತೆ ಮೇರೆ ಹರಿಸಲಾಗುವುದು ಎಂದು ಹೇಳಿದರು.

136 ಕೆರೆಗಳಿಗೆ ನೀರು: ಎತ್ತಿನಹೊಳಗೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹರಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ 136 ಕೆರೆಗಳಿಗೆ ಹರಿಸಲಾಗುವುದು. ಅದೇ ರೀತಿ ಯರಗೋಳ್‌ ಯೋಜನೆಯಿಂದಲೂ ಜಿಲ್ಲೆಯ ಮೂರು ತಾಲೂಕುಗಳಿಗೆ ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನೀರಿನ ಸಮಸ್ಯೆ ಕೊನೆಗಾಣಿಸಿ: ಕೆಜಿಎಫ್‌ ಶಾಸಕಿ ರೂಪಾ ಶಶಿಧರ್‌, ಕೆಜಿಎಫ್‌ ನಗರಕ್ಕೆ ಬೇತಮಂಗಲ ಕೆರೆಯಿಂದ ನೀರು ಹರಿಯುತ್ತಿತ್ತು. ಅದನ್ನು ಗ್ರಾಮೀಣ ಭಾಗಕ್ಕೂ ವಿಸ್ತರಿಸಬೇಕು. ಈ ಕೆರೆಗೆ ಎತ್ತಿನಹೊಳೆ ಯೋಜನೆ ನೀರನ್ನು ಹರಿಸುವ ಮೂಲಕ ಕುಡಿಯುವ ನಿರಿನ ಸಮಸ್ಯೆ ಕೊನೆಗಾಣಿಸಬೇಕು ಎಂದು ಮನವಿ ಮಾಡಿದರು. ಶಾಸಕರ ಮನವಿಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಬೆೈರೇಗೌಡ, ಯೋಜನೆಯನ್ನು ಅಂತಿಮಗೊಳಿಸಲ್ಲ. ಬದಲಾವಣೆ ಇದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಕೆ.ವೈ.ನಂಜೇಗೌಡ, ಈಚೆಗೆ ನರಸಾಪುರ ಕೆರೆಯಿಂದ ಮಾಲೂರು ತಾಲೂಕಿನ ಶಿವಾರಪಟ್ಟಣ ಕೆರೆಗೆ ನೀರು ಪಂಪು ಮಾಡುವುದಕ್ಕೆ ಚಾಲನೆ ನೀಡಲಾಯಿತು. ಈಗ ನಿಲ್ಲಿಸಿರುವುದರಿಂದ ಜನಕ್ಕೆ ತಪ್ಪು ಮಾಹಿತಿ ಹೋಗಿದೆ. ಕೇವಲ ಕೋಲಾರ ಕೆರೆಗಳು ಮಾತ್ರ ತುಂಬಿದರೆ ಬೇರೆ ತಾಲೂಕಿನ ಕೆರೆಗಳು ತುಂಬುವುದು ಬೇಡವೇ ಎಂದು ಪ್ರಶ್ನಿಸಿದರು.

ಎಲ್ಲರಿಗೂ ನೀರು ಹರಿಯುತ್ತೆ: ಕೆ.ಸಿ. ವ್ಯಾಲಿ ಯೋಜನೆಯಿಂದ ನಮಗೆ ಕೆಲವೇ ಎಂಎಲ್ಡಿ ನೀರು ಹರಿಯುತ್ತಿದ್ದು, ಹೆಚ್ಚುವರಿಯಾಗಿ ಹತ್ತು ದಿನದಲ್ಲಿ ಹರಿಯಲಿದೆ. ಆಗ ಮಾಲೂರಿನ ಕೆರೆಗಳಿಗೂ ಪಂಪ್‌ ಅಗುತ್ತದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮನವಿ ಮಾಡಿದರು.

ಕೆ.ಸಿ.ವ್ಯಾಲಿ ಯೋಜನೆ ನೀರು ಲಕ್ಷ್ಮೀಸಾಗರ ಕೆರೆಗೆ ಪಂಪ್‌ ಆಗಿ, ಕೆರೆಗಳಿಗೆ ರಾಜಕಾಲುವೆ ಮೂಲಕ ಹರಿಯುತ್ತದೆ. ಎರಡೂ ಯೋಜನೆಯ ನೀರು ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು. ಯರಗೋಳ್‌ ಯೋಜನೆಯಲ್ಲಿ ವರ್ಷ ಪೂರ್ತಿ ನೀರು ಲಭ್ಯವಾಗುವುದಿಲ್ಲ. ಎತ್ತಿನಹೊಳೆ ಯೋಜನೆಯಿಂದ ನೀರನ್ನು ಬೈರಗುಂಡ್ಲುಗೆ ಎತ್ತುವಳಿ ಮಾಡಿಕೊಂಡು ಕೆರೆಗಳಿಗೆ ಪೆೈಪ್‌ಲೈನ್‌ ಮೂಲಕ ನೇರವಾಗಿ ಹರಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಎಂಎಲ್ಸಿ ಚೌಡರೆಡ್ಡಿ, ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಜಿಪಂ ಸಿಇಒ ಜಗದೀಶ್‌ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.