ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ 2 ಕೋಟಿ ರೂ.
Team Udayavani, Jul 9, 2020, 6:23 AM IST
ಕೋಲಾರ/ಕೆಜಿಎಫ್: ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ ಶಾಸಕಿ ರೂಪಕಲಾ, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಜತೆಗೆ ಸಭೆ ನಡೆಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದ್ದು, 30 ಎಕರೆ ಭೂಮಿ ಗುರುತಿಸಲಾಗಿದೆ. ಸಿಬ್ಬಂದಿ ಕೊರತೆಯಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಣವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾಯಿಸಲು ಸಿದ್ಧವಿದೆ ಎಂದು ವಿವರಿಸಿದರು.
ಪ್ರವಾಸೋದ್ಯಮ ತಾಣವಾಗಿಸಲು ಕ್ರಮ: ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ವಸಂತಮ್ಮ ಮಾತನಾಡಿ, ಕೆ.ಸಿ. ರೆಡ್ಡಿ ಸ್ಮಾರಕ ನಿರ್ಮಾಣ ಮಾಡುವ ಮೂಲಕ ಕ್ಯಾಸಂಬಳ್ಳಿಯನ್ನು ಪ್ರವಾಸೋದ್ಯಮ ಸ್ಥಳವ ನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಇದರಿಂದಾಗಿ ಈ ಸಂಬಂಧ ಡಿಪಿಆರ್ ರಚನೆ ಮಾಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ವಜ್ರಕವಚಕ್ಕೆ ಅಸ್ತು: ಪೌರಾಣಿಕ ಪ್ರಸಿದ್ಧ ಗುಟ್ಟಹಳ್ಳಿ ಮೂಲ ದೇವರಿಗೆ ವಜ್ರ ಕವಚ ಮಾಡಿಸುವುದು ಭಕ್ತರ ಆಶಯವಾಗಿದ್ದು, ಇದಕ್ಕಾಗಿ ದೇವಸ್ಥಾನಕ್ಕೆ ಬಂದಿರುವ 70 ಕೆ.ಜಿ. ಬೆಳ್ಳಿಯನ್ನು ಉಪಯೋಗಿಸಿಕೊಳ್ಳಬಹುದೆಂದು ಶಾಸಕಿ ರೂಪಕಲಾ ಹೇಳಿದಾಗ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಿ.ಸಿ. ಮುಜರಾಯಿ ತಹಶೀಲ್ದಾರ್ ನಾಗವೇಣಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ