ಅಶೋಕನಗರ ರಸ್ತೆಗೆ ರೂಪಕಲಾ ಭೇಟಿ
Team Udayavani, Sep 19, 2020, 6:15 PM IST
ಕೆಜಿಎಫ್: ಅಶೋಕನಗರ ರಸ್ತೆ ಅಗಲೀಕರಣಕ್ಕಾಗಿ ನಿರ್ಲಕ್ಷ್ಯ ವಹಿಸುತ್ತಿರುವ ಜಿಲ್ಲಾಡಳಿತ ವನ್ನು ಪ್ರಶ್ನಿಸಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟ ಕಾಲ ಧರಣಿ ನಡೆಸುವುದಾಗಿ ಶಾಸಕಿ ಎಂ. ರೂಪಕಲಾ ತಿಳಿಸಿದ್ದಾರೆ.
ಶುಕ್ರವಾರ ಅಶೋಕನಗರ ರಸ್ತೆಗೆ ಭೇಟಿ ನೀಡಿದ ಸಂದರ್ಭದಲ್ಲಿಜಿಲ್ಲಾಡಳಿತದವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಣದ ಕೈಗಳು ಕೆಲಸ ಮಾಡುತ್ತಿವೆ. ಹಿಂದಿನ ಜಿಲ್ಲಾಧಿಕಾರಿಗಳು ಹೈಕೋರ್ಟ್ ಆದೇಶದಂತೆವಿಚಾರಣೆ ನಡೆಸಿ,9 ಮೀಟರ್ ರಸ್ತೆ ಮಾಡಲುಅಕ್ಕಪಕ್ಕದ ಕಟ್ಟಡ ತೆರವು ಮಾಡುವಂತೆಆದೇಶ ನೀಡಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯವಹಿಸಿದ್ದಾರೆ. ಎಷ್ಟು ಬಾರಿ ಸಂಪರ್ಕಿಸಿ, ಕಾಮಗಾರಿ ಶುರು ಮಾಡುವಂತೆ ಕೋರಿದ್ದರೂ ಪ್ರಯೋಜನವಾಗಲಿಲ್ಲ ಎಂದು ಹೇಳಿದರು.
ಅಶೋಕನಗರ ರಸ್ತೆಯಲ್ಲಿ ಮಳೆಗಾಲದಲ್ಲಿ ಓಡಾಡಲು ತೊಂದರೆ ಯಾಗುತ್ತಿದೆ. ಆರು ವರ್ಷದಿಂದ ಇಲಾಖೆಯ ನಿರ್ಲಕ್ಷ್ಯ ದಿಂದ ಜನತೆ ಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಯನ್ನು ಇಲಾಖೆ ನಿರ್ವಹಿಸುತ್ತಿಲ್ಲ ಎಂದು ಶಾಸಕಿ ದೂರಿದರು.
ರಸ್ತೆ ತೆರವು ಮಾಡಿ ಅಗಲೀಕರಣ ಯಾಕೆ ಮಾಡುತ್ತಿಲ್ಲ ಎಂಬುದನ್ನು ತಿಳಿಸಬೇಕು. ತೆರವು ಕಾರ್ಯಕ್ರಮದ ದಿನಾಂಕ ತಿಳಿಸಬೇಕು. ಅಲ್ಲಿಯವರೆಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ಧರಣಿಯಿಂದ ಮೇಲೆಳುವುದಿಲ್ಲ.ಅಧಿವೇಶನಕ್ಕೆ ಕೂಡ ಹೋಗುವುದಿಲ್ಲ ಎಂದು ರೂಪಕಲಾ ತಿಳಿಸಿದರು. ಪೌರಾಯುಕ್ತ ಸಿ.ರಾಜು, ಲೋಕೋಪಯೋಗಿ ಇಲಾಖೆಯ ರವಿ, ರಾಜಗೋಪಾಲ್, ನಗರಸಭೆ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ