ಕೋಲಾರ ಎಪಿಎಂಸಿಗೆ ಭದ್ರತೆ ಕಲ್ಪಿಸಿ
ಎಸ್ಪಿ ರೋಹಿಣಿಗೆ ರೈತ ಸಂಘದ ಕಾರ್ಯಕರ್ತರಿಗೆ ಮನವಿ ಸಲ್ಲಿಕೆ
Team Udayavani, May 12, 2019, 11:27 AM IST
ಎಸ್ಪಿ ರೋಹಿಣಿಗೆ ರೈತ ಸಂಘದ ಕಾರ್ಯಕರ್ತರಿಗೆ ಮನವಿ ಸಲ್ಲಿಕೆ
ಕೋಲಾರ: ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪೊಲೀಸ್ ಸಿಬ್ಬಂದಿ ನೇಮಿಸಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ರೈತ ಸಂಘವು ಎಸ್ಪಿ ಡಾ.ರೋಹಿಣಿ ಕಟೋಚ್ಗೆ ಮನವಿ ನೀಡಿದರು.
ಈ ವೇಳೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಏಷ್ಯಾದಲ್ಲೇ ಕೋಲಾರ ಎಪಿಎಂಸಿ ದೊಡ್ಡದು. ಈಗ ಟೊಮೆಟೋ ಅವಕ ಪ್ರಾರಂಭವಾಗಿದೆ. ಕಾರ್ಮಿಕರು, ದಲ್ಲಾಳಿಗಳು ಟೊಮೆಟೋ ಖರೀದಿಗೆ ಬರುತ್ತಾರೆ. ಪ್ರತಿ ದಿನ ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ಜೊತೆಗೆ ಮಾರುಕಟ್ಟೆ ಕಿರಿದಾಗಿರುವುದರಿಂದ ಲಾರಿ ಮಾಲಿಕರಿಗೆ ಮತ್ತು ತರಕಾರಿ ಮಂಡಿ ಮಾಲಿಕರಿಗೆ ಜಗಳ ಆಗುತ್ತದೆ ಎಂದು ಹೇಳಿದರು.
ಈ ಹಿಂದೆ ಇದ್ದ ಪೊಲೀಸ್ಅನ್ನು 4 ತಿಂಗಳಿಂದ ಬೇರೆ ಕಡೆ ನಿಯೋಜಿಸಲಾಗಿದೆ. ಮಾರುಕಟ್ಟೆ ಅವ್ಯವಸ್ಥೆ, ಜಾಗದ ಸಮಸ್ಯೆ ಬಗೆಹರಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ. ಹೊರ ರಾಜ್ಯದ ಕಾರ್ಮಿಕರು ಹೆಚ್ಚಾಗಿರುವುದರಿಂದ ಮಾರುಕಟ್ಟೆಯಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೇದೆ ನೇಮಕ ಮಾಡಿ ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಎಸ್ಪಿ ಡಾ.ರೋಹಿಣಿ ಕಟೋಚ್, ಚುನಾವಣೆ ನಿಮಿತ್ತ ಪೇದೆಯನ್ನು ಬೇರೆ ಕಡೆ ನಿಯೋಜನೆ ಮಾಡಿದ್ದೆವು. ಟೊಮೆಟೋ ಅವಕ ಹೆಚ್ಚಾಗಿರುವ ಕಾರಣ ಕೂಡಲೇ ಪೊಲೀಸ್ ನೇಮಿಸುವುದಾಗಿ ಭರವಸೆ ನೀಡಿದರು. ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ಉದಯ್ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಪಾರುಕ್ಪಾಷ, ವಿಜಯಪಾಲ್, ಶಂಕರ್, ಪುತ್ತೇರಿ ರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ