![court](https://www.udayavani.com/wp-content/uploads/2024/07/court-7-415x231.jpg)
ಕೋಲಾರ ಎಪಿಎಂಸಿಗೆ ಭದ್ರತೆ ಕಲ್ಪಿಸಿ
ಎಸ್ಪಿ ರೋಹಿಣಿಗೆ ರೈತ ಸಂಘದ ಕಾರ್ಯಕರ್ತರಿಗೆ ಮನವಿ ಸಲ್ಲಿಕೆ
Team Udayavani, May 12, 2019, 11:27 AM IST
![kolar-tdy-7..](https://www.udayavani.com/wp-content/uploads/2019/05/kolar-tdy-7..-620x322.jpg)
ಎಸ್ಪಿ ರೋಹಿಣಿಗೆ ರೈತ ಸಂಘದ ಕಾರ್ಯಕರ್ತರಿಗೆ ಮನವಿ ಸಲ್ಲಿಕೆ
ಕೋಲಾರ: ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪೊಲೀಸ್ ಸಿಬ್ಬಂದಿ ನೇಮಿಸಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ರೈತ ಸಂಘವು ಎಸ್ಪಿ ಡಾ.ರೋಹಿಣಿ ಕಟೋಚ್ಗೆ ಮನವಿ ನೀಡಿದರು.
ಈ ವೇಳೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಏಷ್ಯಾದಲ್ಲೇ ಕೋಲಾರ ಎಪಿಎಂಸಿ ದೊಡ್ಡದು. ಈಗ ಟೊಮೆಟೋ ಅವಕ ಪ್ರಾರಂಭವಾಗಿದೆ. ಕಾರ್ಮಿಕರು, ದಲ್ಲಾಳಿಗಳು ಟೊಮೆಟೋ ಖರೀದಿಗೆ ಬರುತ್ತಾರೆ. ಪ್ರತಿ ದಿನ ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ಜೊತೆಗೆ ಮಾರುಕಟ್ಟೆ ಕಿರಿದಾಗಿರುವುದರಿಂದ ಲಾರಿ ಮಾಲಿಕರಿಗೆ ಮತ್ತು ತರಕಾರಿ ಮಂಡಿ ಮಾಲಿಕರಿಗೆ ಜಗಳ ಆಗುತ್ತದೆ ಎಂದು ಹೇಳಿದರು.
ಈ ಹಿಂದೆ ಇದ್ದ ಪೊಲೀಸ್ಅನ್ನು 4 ತಿಂಗಳಿಂದ ಬೇರೆ ಕಡೆ ನಿಯೋಜಿಸಲಾಗಿದೆ. ಮಾರುಕಟ್ಟೆ ಅವ್ಯವಸ್ಥೆ, ಜಾಗದ ಸಮಸ್ಯೆ ಬಗೆಹರಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ. ಹೊರ ರಾಜ್ಯದ ಕಾರ್ಮಿಕರು ಹೆಚ್ಚಾಗಿರುವುದರಿಂದ ಮಾರುಕಟ್ಟೆಯಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೇದೆ ನೇಮಕ ಮಾಡಿ ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಎಸ್ಪಿ ಡಾ.ರೋಹಿಣಿ ಕಟೋಚ್, ಚುನಾವಣೆ ನಿಮಿತ್ತ ಪೇದೆಯನ್ನು ಬೇರೆ ಕಡೆ ನಿಯೋಜನೆ ಮಾಡಿದ್ದೆವು. ಟೊಮೆಟೋ ಅವಕ ಹೆಚ್ಚಾಗಿರುವ ಕಾರಣ ಕೂಡಲೇ ಪೊಲೀಸ್ ನೇಮಿಸುವುದಾಗಿ ಭರವಸೆ ನೀಡಿದರು. ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ಉದಯ್ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಪಾರುಕ್ಪಾಷ, ವಿಜಯಪಾಲ್, ಶಂಕರ್, ಪುತ್ತೇರಿ ರಾಜು ಇತರರಿದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.