ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ
Team Udayavani, Jun 4, 2020, 7:52 AM IST
ಮಾಲೂರು: ತಾಲೂಕಿನ ಭಾವನಹಳ್ಳಿ ಯಲ್ಲಿ ಸರ್ಕಾರಿ ಕಟ್ಟಡಗಳ ನಡುವಿನ ಖಾಲಿ ನಿವೇಶನ ಪ್ರಭಾವಿಗಳು ಅತಿಕ್ರಮಿ ಸಲು ಮುಂದಾಗಿದ್ದರಿಂದ ಶಾಸಕ ಕೆ. ವೈ.ನಂಜೇಗೌಡ ಅಧಿಕಾರ ಜೊತೆ ಸ್ಥಳ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಗ್ರಾಮದಲ್ಲಿನ 1.05 ಎಕರೆ ಸರ್ಕಾರಿ ಭೂಮಿಯನ್ನು ಗ್ರಾಮದ ಉಪಯೋಗಕ್ಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಂತಿಯುತ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಿ ಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು. ಗ್ರಾಮ ಠಾಣೆಗೆ ಸೇರಿದ 1.05 ಎಕರೆ ಯಲ್ಲಿ ಅಂಗನವಾಡಿ, ಕೃಷಿ ಇಲಾಖೆ ಕಟ್ಟಡ ನಿರ್ಮಿಸಿದ್ದು, ಉಳಿದ ಜಾಗದಲ್ಲಿ ಗ್ರಾಮದ ಕೆಲವು ಪ್ರಭಾವಿಗಳು ಅಕ್ರಮ ವಾಗಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸ್ವಾಧೀನಕ್ಕೆ ಮುಂದಾಗಿದ್ದರು.
ಈ ಹಿನ್ನೆಲೆ ಯಲ್ಲಿ ಗ್ರಾಮಸ್ಥರ ದೂರಿನ ಮೇರೆಗೆ ಶಾಸಕರು ಪರಿಶೀಲನೆ ನಡೆಸಿದರು. ಭಾವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗಾರಿಕೆಗಳು ಪ್ರಾರಂಭ ವಾಗಿರುವ ಕಾರಣ ಈ ಭಾಗದ ಭೂಮಿಗೆ ಬಂದಿದೆ. ಸರ್ಕಾರಿ ಭೂಮಿ ಕಬಳಿಕೆಯೂ ಹೆಚ್ಚಾಗಿದೆ. ಸರ್ಕಾರದ ದಾಖಲೆಗಳು, ಗ್ರಾಮಸ್ಥರ ಹೇಳಿಕೆಯಂತೆ ಸ್ಥಳದಲ್ಲಿ ಎರಡು ಸರ್ಕಾರಿ ಕಟ್ಟಡಗಳು ಇದ್ದು, ಉಳಿಕೆ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಮನೆ ನಿರ್ಮಿಸಿಕೊಂಡಿದ್ದಾರೆ.
ಹೀಗಾಗಿ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಶಾಂತಿಯುತವಾಗಿ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಶಾಸಕರು ಸೂಚಿಸಿದರು. ತಾಪಂ ಇಒ ವಿ.ಕೃಷ್ಣಪ್ಪ, ಗ್ರಾಮಸ್ಥರಾದ ಬಿ.ಎಂ.ಮುನಿಯಪ್ಪ, ಗಣೇಶ್ ಸಿಂಗ್, ಸೂರ್ಯ ಪ್ರತಾಪ್, ಪ್ರೇಮ್ಸಾಗರ್, ಗ್ರಾಪಂ ಸದಸ್ಯ ಬಾಲಾಜಿ ಸಿಂಗ್, ದೇವೇಂದ್ರ, ಚಂದ್ರೇಗೌಡ, ರಾಮನಾರಾ ಯಣಸ್ವಾಮಿ, ರಮೇಶ್, ಕೃಷ್ಣಸಿಂಗ್, ಗಜೇಂದ್ರ ಸಿಂಗ್, ವೆಂಕಟೇಶರೆಡ್ಡಿ, ಮುನಿವೆಂಕಟಪ್ಪ, ಶಿವಾರಪಟ್ಟಣದ ಗ್ರಾಪಂ ಕಾರ್ಯದರ್ಶಿ ಮುನೇಗೌಡ, ಹನು ಮಂತರೆಡ್ಡಿ, ಮಂಜುನಾಥ್, ಬಿ.ಕೆ. ಶ್ರೀನಿವಾಸ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು