ಪುರಸಭೆ ಕೆಲಸ ನಾನೇ ಮಾಡಬೇಕೆ?
Team Udayavani, Jan 28, 2021, 6:17 PM IST
ಶ್ರೀನಿವಾಸಪುರ: “ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದರೂ ಪಟ್ಟಣ ಅಭಿವೃದ್ಧಿ ಆಗುತ್ತಿಲ್ಲ. ಕುಡಿಯುವ ನೀರು, ರಸ್ತೆಗಳ ಅಭಿವೃದ್ಧಿ ಬಗ್ಗೆ ಜನ ಪ್ರಶ್ನೆಮಾಡುತ್ತಿದ್ದಾರೆ. ಪುರಸಭೆ ಸದಸ್ಯರು ಏನ ಮಾಡುತ್ತಾರೆ ಅವರ ಕೆಲಸವನ್ನು ನಾನೇ ಮಾಡಬೇಕೆ’ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಶ್ರೀನಿವಾಸಪುರದಲ್ಲಿ ನಡೆದ ಗಣರಾಜ್ಯೋ ತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ, ಶಾಲಾ ಮಕ್ಕಳು ಶಾಸಕರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗುತ್ತಿದ್ದಂತೆ ಕೆಲವು ಶಿಕ್ಷಕರು, ಸಾರ್ವಜನಿಕರು ಕುಡಿವ ನೀರಿನ ಬಗ್ಗೆ ಮನವಿ ಮಾಡುತ್ತಿದ್ದಂತೆ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಕೊಳ್ಳೂರು ರಸ್ತೆ, ಕುಡಿಯುವ ನೀರು ಸರಬರಾಜು, ಬಾಲಕಿಯರ ಕಾಲೇಜಿನಲ್ಲಿ ಸುಸಜ್ಜಿತ ಶೌಚಾಲಯವಿದ್ದರೂ ನೀರು ಸೌಕರ್ಯ ಮಾಡಲು ಪುರಸಭೆಗೆ ಆಗುತ್ತಿಲ್ಲ. ಸ್ಥಳೀಯ ಜನಪ್ರತಿನಿಧಿಗಳ ಕೆಲಸವೇನು, ಇನ್ನೆಷ್ಟು ಹಣ ತರಬೇಕೆಂದರು.
ಇದನ್ನೂ ಓದಿ:ರಸ್ತೆಯಲ್ಲಿಯೇ ರಾಗಿ ಒಕ್ಕಣೆ:ಸವಾರರಿಗೆ ತಪ್ಪದ ಸಂಕಟ
ಸಾರ್ವಜನಿಕ ಸೇವೆಯಲ್ಲಿ ಇರುವ ನಾವು ಜನರು ಪ್ರಶ್ನೆ ಮಾಡುವುದಕ್ಕಿಂತ ಮುಂಚೆ ಮೂಲ ಸೌಕರ್ಯ ಕಲ್ಪಿಸಬೇಕು. ಆದರೆ ನಾವು ಮಾಡುವುದಾದರೂ ಏನೆಂದರು. ಅದೇ ರೀತಿ ಬೈರಪಲ್ಲಿಯಲ್ಲಿ ಸಹ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಇಲ್ಲ ಎನ್ನುತ್ತಿದ್ದಾರೆ. ಕೊಳ್ಳೂರು ರಸ್ತೆ ತೀರಾ ಅದ್ವಾನವಾಗಿದೆ. ಈ ಬಗ್ಗೆ ಪುರಸಭೆ ಸದಸ್ಯರು ಗಮನಹರಿಸದಿದ್ದರೆ ಹೇಗೆ ಅವರ ಕೆಲಸವನ್ನು ನಾನೇ ಮಾಡಬೇಕೆ ಎಂದು ಖಾರವಾಗಿ ಪುರಸಭೆ ಮುಖ್ಯಾಧಿಕಾರಿಗಳನ್ನು ಪ್ರಶ್ನಿಸಿದರು.
ಬೇಸಿಗೆ ಆರಂಭವಾಗುತ್ತಿದೆ ಕುಡಿಯುವ ನೀರು ಸರಬರಾಜು ವಿತರಣೆಯಲ್ಲಿ ತಾರತಮ್ಯ ಮಾಡದೇ ಎಲ್ಲಾ ವಾರ್ಡುಗಳಿಗೆ ಅಗತ್ಯವಿರುವ ಕಡೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ