ಕೋಲಾರದಲ್ಲೇ ಸಿದ್ದರಾಮಯ್ಯ ಅಧ್ಯಾಯ ಅಂತ್ಯ: ವರ್ತೂರು ಪ್ರಕಾಶ್ ಟಾಂಗ್
ಕೆ.ಎಚ್.ಮುನಿಯಪ್ಪ ಮೈಯಲ್ಲಿ ರಕ್ತ ಹರಿಯುತ್ತಿದ್ದರೆ....
Team Udayavani, Jan 9, 2023, 9:49 PM IST
ಕೋಲಾರ: ಕೋಲಾರದಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಾಯ ಅಂತ್ಯ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಟಾಂಗ್ ನೀಡಿದರು.
ಕೋಗಿಲಹಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅಹಿಂದ ಎಂದು ಹೇಳಿಕೊಂಡು ಎಲ್ಲರನ್ನೂ ಮುಗಿಸುತ್ತಿದ್ದಾರೆ, ಕಲಬುರಗಿಯಲ್ಲಿ ಖರ್ಗೆ, ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದರನ್ನು ಸೋಲಿಸಿದ್ದು, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್, ಸುರೇಶ್ ಪತ್ನಿ ಪದ್ಮಾವತಿಯನ್ನು ಸೋಲಿಸಿ ಅಹಿಂದ ಮುಖಂಡರನ್ನು ಮುಗಿಸುವ ಅವರ ಪ್ರಯತ್ನ ಕೋಲಾರದಲ್ಲಿ ಫಲಿಸದು ಎಂದು ತಿಳಿಸಿದರು.
ಕೆ.ಎಚ್.ಮುನಿಯಪ್ಪ ಮೈಯಲ್ಲಿ ರಕ್ತ ಹರಿಯುತ್ತಿದ್ದರೆ ಅವರು ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಬರಬಾರದಾಗಿತ್ತು. ಸೋಲಿಸಿದ್ದು ಮಾತ್ರವಲ್ಲ, ತಮ್ಮ ಬೆಂಬಲಿಗರಿಂದ ದರಿದ್ರ ಎಂದೆಲ್ಲಾ ಬೈಸಿದ ರಮೇಶ್ಕುಮಾರ್ ಜೊತೆ ಹೇಗೆ ವೇದಿಕೆ ಹಂಚಿಕೊಂಡರು ಎಂದು ಪ್ರಶ್ನಿಸಿದರು.
ಇನ್ನು ಮುಂದೆ ಕಾಂಗ್ರೆಸ್ನಲ್ಲಿ ರಮೇಶ್ಕುಮಾರ್ ಡಾನ್ ಇದ್ದಂತೆ. ಘಟಬಂಧನ್ ಮೂಲಕ ಸಂಸತ್ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪರನ್ನು ಸೋಲಿಸಿದರು, ಇದೀಗ ಡಿ.ಕೆ.ಶಿವಕುಮಾರ್ ಜತೆ ಒಳ ಒಪ್ಪಂದ ಮಾಡಿಕೊಂಡು ಸಿದ್ದರಾಮಯ್ಯರನ್ನು ಮುಗಿಸಲು ತಂತ್ರಗಾರಿಕೆ ರೂಪಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ