ಕ್ರಿಸ್ಮಸ್, ಹೊಸವರ್ಷ ಸರಳವಾಗಿ ಆಚರಿಸಿ
Team Udayavani, Dec 23, 2020, 4:00 PM IST
ಕೋಲಾರ: ಸಾರ್ವಜನಿಕರ ಆರೋಗ್ಯದದೃಷ್ಟಿಯಿಂದ ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ಸರಳ, ಭಕ್ತಿಪೂರ್ವಕಮತ್ತು ಅರ್ಥಗರ್ಭಿತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದ್ದಾರೆ.
ನಿಷೇಧ: ಜಿಲ್ಲಾದ್ಯಂತ ಸಾಮಾಜಿಕ ಅಂತರ ವಿಲ್ಲದೇ ಹೆಚ್ಚಿನ ಜನರು ಸೇರುವ ಸಾಮೂಹಿಕಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಛಯಗಳಲ್ಲಿ ಹಾಗೂ ಜನ ಸೇರತಕ್ಕಂಥ ಸ್ಥಳಗಳಲ್ಲಿ ಆಯೋಜಿಸುವುದು, ಆಚರಣೆನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಸ್ತಲಾಘವ,ಆಲಿಂಗನ ನಿಷೇಧ: ಚರ್ಚ್ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೇಲ್ವಿಚಾರಕರು ಅಥವಾ ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
ಹಬ್ಬದ ಆಚರಣೆ ಸಂದರ್ಭದಲ್ಲಿ ಹಸ್ತಲಾಘವಮತ್ತು ಆಲಿಂಗನ ನಿಷೇಧಿಸಿದೆ. ಡಿ.30 ರಿಂದಜನವರಿ 2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರವಾದ ಸ್ಥಳ ಅಥವಾಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ ನಿಷೇಧಿಸಲಾಗಿದೆ.
ಕ್ಲಬ್, ಪಬ್ ಓಪನ್: ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ, ಇತ್ಯಾದಿನಿಷೇಧಿಸಿದೆ. ಆದರೆ ಕ್ಲಬ್, ಪಬ್, ರೆಸ್ಟೋರೆಂಟ್ಗಳನ್ನು ಪ್ರತಿನಿತ್ಯದಂತೆ ತೆರೆಯಲಿದ್ದು, ನಡೆಸಲು ನಿರ್ಬಂಧವಿಲ್ಲ. ಹೊಸ ವರ್ಷಾಚರಣೆ ಸಂಬಂಧದಲ್ಲಿಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಮತ್ತುಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿಜನರ ಸೇರುವಿಕೆ ಹಾಗೂ ಸಂಭ್ರಮಾಚರಣೆ ನಿಷೇಧಿಸಿದೆ. ಆದರೆ ಈ ಸ್ಥಳಗಳಲ್ಲಿ ಪ್ರತಿನಿತ್ಯಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.
ಥರ್ಮಲ್ ಸ್ಕ್ರೀನಿಂಗ್: 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು, ಸಾರ್ವ ಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಹೋಟೆಲ್, ಮಾಲ್, ಪಬ್, ರೆಸ್ಟೋ ರೆಂಟ್ಗಳು ಹಾಗೂ ಅಂತಹ ಸ್ಥಳಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಇರಿಸತಕ್ಕದ್ದು.
ಸ್ಥಳ ಕಾಯ್ದಿರಿಸುವ ವ್ಯವಸ್ಥೆ: ಹೋಟೆಲ್ಗಳು, ಮಾಲ್ಗಳು, ಪಬ್, ರೆಸ್ಟೋರೆಂಟ್ಗಳು ಹಾಗೂ ಅಂತಹ ಸ್ಥಳ ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್ಲೈನ್ ಮುಖಾಂತರ ಅಥವಾ ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದ್ದಾರೆ.
ಉಲ್ಲಂಘಿಸಿದರೆ ಕಾನೂನು ಕ್ರಮ : ಮಾರ್ಗಸೂಚಿಗಳು ಡಿ.20 ರಿಂದ ಜನವರಿ 2, 2021 ರವರೆಗೆ ಚಾಲ್ತಿಯಲ್ಲಿರುತ್ತದೆ. ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿ ಸಿದಲ್ಲಿ ಅಂತಹವ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು 270 ರ ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸಿಎಂಗೆ ಪತ್ರ ಬರೆದಿಟ್ಟು ಆತ್ಮಹತ್ಯೆ
ಮುಂಬೈ : ಬಾಯ್ಫ್ರೆಂಡ್ ಜತೆ ಪತ್ನಿ ಪರಾರಿ: ಪತಿ ದೂರು
ಚಿಕ್ಕಬಳ್ಳಾಪುರ : ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ- 2358 ಫಲಾನುಭವಿಗಳಿಗೆ
ರಸ್ತೆ ನಿರ್ಮಾಣ ವಿಚಾರ : ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ : ಹಲವರಿಗೆ ಗಾಯ
ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ .ಜ.20 ರಂದು ಕಾರವಾರ ನೌಕಾನೆಲೆಗೆ ಭೇಟಿ